<p><strong>ವಾಷಿಂಗ್ಟನ್:</strong>ಆರ್ಥಿಕ ಹಿಂಜರಿತ ಹಿಮ್ಮೆಟ್ಟಿಸಲು ಭಾರತ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ.</p>.<p>ವೆಚ್ಚ ಮತ್ತು ಹೂಡಿಕೆ ಕುಸಿತ, ತೆರಿಗೆ ಆದಾಯದಲ್ಲಿ ಇಳಿಕೆಯು ಇತರ ಅಂಶಗಳ ಜತೆ ಸೇರಿಕೊಂಡು ವಿಶ್ವದಲ್ಲಿ ವೇಗವಾಗಿ ಆರ್ಥಿಕ ಬೆಳವಣಿಗೆ ಹೊಂದುತ್ತಿರುವ ಭಾರತದ ಓಟಕ್ಕೆ ತಡೆಯೊಡ್ಡಿದೆ ಎಂದು ಐಎಂಎಫ್ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಲಕ್ಷಾಂತರ ಜನರನ್ನು ಬಡತನದಿಂದ ಮುಕ್ತಗೊಳಿಸಿದ ಬಳಿಕ ಇದೀಗ ಭಾರತವು ಗಮನಾರ್ಹ ಆರ್ಥಿಕ ಹಿಂಜರಿತಕ್ಕೊಳಗಾಗಿದೆ ಎಂದು ಐಎಂಎಫ್ನ ಏಷ್ಯಾ ಪೆಸಿಫಿಕ್ ವಿಭಾಗದ ರನಿಲ್ ಸಲ್ಗಾಡೊ ಹೇಳಿದ್ದಾರೆ.</p>.<p>‘ಈಗ ಎದುರಿಸುತ್ತಿರುವ ಆರ್ಥಿಕ ಹಿಂಜರಿತ ಹಿಮ್ಮೆಟ್ಟಿಸಲು ಮತ್ತು ಭಾರತವನ್ನು ಹೆಚ್ಚಿನ ಆರ್ಥಿಕ ಅಭಿವೃದ್ಧಿಯತ್ತ ಕೊಂಡೊಯ್ಯಲು ತುರ್ತು ನೀತಿ ಮತ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ’ ಎಂದು ಅವರು ಹೇಳಿದ್ದಾರೆ.</p>.<p>ಆದಾಗ್ಯೂ, ಆರ್ಥಿಕ ಬೆಳವಣಿಗೆ ಸಲುವಾಗಿ ಜನರ ಖರೀದಿ ಸಾಮರ್ಥ್ಯ ಹೆಚ್ಚಿಸುವಂತೆ ಮಾಡುವ ವಿಷಯದಲ್ಲೂ ಭಾರತ ಸರ್ಕಾರದ ಮುಂದೆ ಸೀಮಿತ ಆಯ್ಕೆಗಳಷ್ಟೇ ಇವೆ ಎಂದೂ ಐಎಂಎಫ್ ಎಚ್ಚರಿಕೆ ನೀಡಿದೆ.</p>.<p>‘ಭಾರತವು ತನ್ನ ವಿತ್ತೀಯ ಕೊರತೆ ಗುರಿ ಕಾಯ್ದುಕೊಳ್ಳಬೇಕಾಗಿದ್ದು, ಆ ಉದ್ದೇಶ ಸಾಧನೆಗೆ ವೆಚ್ಚದಲ್ಲಿ ದಕ್ಷತೆ ಮತ್ತು ವರಮಾನ ಸಂಗ್ರಹದಲ್ಲಿ ಹೆಚ್ಚಳ ಸಾಧಿಸಬೇಕಾಗಿದೆ’ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯ ಆರ್ಥಿಕ ತಜ್ಞೆ ಗೀತಾ ಗೋಪಿನಾಥ್ ಶುಕ್ರವಾರ ಹೇಳಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/business/commerce-news/india-needs-more-policy-reforms-says-gita-gopinath-691962.html" target="_blank">ಆರ್ಥಿಕ ಶಿಸ್ತು, ದಿಟ್ಟ ಸುಧಾರಣಾ ಕ್ರಮ ಅಗತ್ಯ: ಗೀತಾ ಗೋಪಿನಾಥ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong>ಆರ್ಥಿಕ ಹಿಂಜರಿತ ಹಿಮ್ಮೆಟ್ಟಿಸಲು ಭಾರತ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ.</p>.<p>ವೆಚ್ಚ ಮತ್ತು ಹೂಡಿಕೆ ಕುಸಿತ, ತೆರಿಗೆ ಆದಾಯದಲ್ಲಿ ಇಳಿಕೆಯು ಇತರ ಅಂಶಗಳ ಜತೆ ಸೇರಿಕೊಂಡು ವಿಶ್ವದಲ್ಲಿ ವೇಗವಾಗಿ ಆರ್ಥಿಕ ಬೆಳವಣಿಗೆ ಹೊಂದುತ್ತಿರುವ ಭಾರತದ ಓಟಕ್ಕೆ ತಡೆಯೊಡ್ಡಿದೆ ಎಂದು ಐಎಂಎಫ್ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಲಕ್ಷಾಂತರ ಜನರನ್ನು ಬಡತನದಿಂದ ಮುಕ್ತಗೊಳಿಸಿದ ಬಳಿಕ ಇದೀಗ ಭಾರತವು ಗಮನಾರ್ಹ ಆರ್ಥಿಕ ಹಿಂಜರಿತಕ್ಕೊಳಗಾಗಿದೆ ಎಂದು ಐಎಂಎಫ್ನ ಏಷ್ಯಾ ಪೆಸಿಫಿಕ್ ವಿಭಾಗದ ರನಿಲ್ ಸಲ್ಗಾಡೊ ಹೇಳಿದ್ದಾರೆ.</p>.<p>‘ಈಗ ಎದುರಿಸುತ್ತಿರುವ ಆರ್ಥಿಕ ಹಿಂಜರಿತ ಹಿಮ್ಮೆಟ್ಟಿಸಲು ಮತ್ತು ಭಾರತವನ್ನು ಹೆಚ್ಚಿನ ಆರ್ಥಿಕ ಅಭಿವೃದ್ಧಿಯತ್ತ ಕೊಂಡೊಯ್ಯಲು ತುರ್ತು ನೀತಿ ಮತ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ’ ಎಂದು ಅವರು ಹೇಳಿದ್ದಾರೆ.</p>.<p>ಆದಾಗ್ಯೂ, ಆರ್ಥಿಕ ಬೆಳವಣಿಗೆ ಸಲುವಾಗಿ ಜನರ ಖರೀದಿ ಸಾಮರ್ಥ್ಯ ಹೆಚ್ಚಿಸುವಂತೆ ಮಾಡುವ ವಿಷಯದಲ್ಲೂ ಭಾರತ ಸರ್ಕಾರದ ಮುಂದೆ ಸೀಮಿತ ಆಯ್ಕೆಗಳಷ್ಟೇ ಇವೆ ಎಂದೂ ಐಎಂಎಫ್ ಎಚ್ಚರಿಕೆ ನೀಡಿದೆ.</p>.<p>‘ಭಾರತವು ತನ್ನ ವಿತ್ತೀಯ ಕೊರತೆ ಗುರಿ ಕಾಯ್ದುಕೊಳ್ಳಬೇಕಾಗಿದ್ದು, ಆ ಉದ್ದೇಶ ಸಾಧನೆಗೆ ವೆಚ್ಚದಲ್ಲಿ ದಕ್ಷತೆ ಮತ್ತು ವರಮಾನ ಸಂಗ್ರಹದಲ್ಲಿ ಹೆಚ್ಚಳ ಸಾಧಿಸಬೇಕಾಗಿದೆ’ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯ ಆರ್ಥಿಕ ತಜ್ಞೆ ಗೀತಾ ಗೋಪಿನಾಥ್ ಶುಕ್ರವಾರ ಹೇಳಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/business/commerce-news/india-needs-more-policy-reforms-says-gita-gopinath-691962.html" target="_blank">ಆರ್ಥಿಕ ಶಿಸ್ತು, ದಿಟ್ಟ ಸುಧಾರಣಾ ಕ್ರಮ ಅಗತ್ಯ: ಗೀತಾ ಗೋಪಿನಾಥ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>