<p><strong>ನವದೆಹಲಿ</strong>: ಆಮದಾಗಿರುವ ಈರುಳ್ಳಿ ಖರೀದಿಸಲು ರಾಜ್ಯಗಳು ಆಸಕ್ತಿ ತೋರಿಸುತ್ತಿಲ್ಲ. ಹೀಗಾಗಿ ಪ್ರತಿ ಕೆ.ಜಿಗೆ ₹ 22 ರಿಂದ ₹ 23ರ ದರದಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಸದ್ಯ ಆಮದಾಗಿರುವ ಈರುಳ್ಳಿಯನ್ನು ಪ್ರತಿ ಕೆ.ಜಿಗೆ ₹ 58ರಂತೆ ರಾಜ್ಯಗಳಿಗೆ ವಿತರಿಸಲಾಗುತ್ತಿದೆ. ಸಾರಿಗೆ ವೆಚ್ಚವನ್ನು ಕೇಂದ್ರವೇ ಭರಿಸುತ್ತಿದೆ.</p>.<p>ಹೊಸ ಬೆಳೆ ಮಾರುಕಟ್ಟೆಗೆ ಬರುತ್ತಿರುವುದರಿಂದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಹೀಗಾಗಿ ಆಮದಾಗಿರುವ ಸರಕನ್ನು ಗರಿಷ್ಠ ಬೆಲೆಗೆ ಖರೀದಿಸಲು ಯಾರೊಬ್ಬರೂ ಆಸಕ್ತಿ ತೋರಿಸುತ್ತಿಲ್ಲ. ಇದರಿಂದಾಗಿ ಭಾರಿ ಪ್ರಮಾಣದ ಸರಕು ಬಂದರಿನಲ್ಲಿಯೇ ಉಳಿಯುವಂತಾಗಿದೆ.</p>.<p>ಆಮದು ಈರುಳ್ಳಿಯ ರುಚಿಯಲ್ಲಿ ವ್ಯತ್ಯಾಸ ಇದೆ ಎನ್ನುವ ಕಾರಣಕ್ಕೆ ಗ್ರಾಹಕರು ಖರೀದಿಸಲು ಮುಂದಾಗುತ್ತಿಲ್ಲ. ಹೀಗಾಗಿ ಹಲವು ರಾಜ್ಯಗಳು ಆಮದು ಈರುಳ್ಳಿಗೆ ಸಲ್ಲಿಸಿದ್ದ ಬೇಡಿಕೆಯನ್ನು ಹಿಂದಕ್ಕೆ ಪಡೆದಿವೆ.</p>.<p>ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ 2019ರ ನವೆಂಬರ್ನಲ್ಲಿ 1.2 ಲಕ್ಷ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ನಿರ್ಧರಿಸಿತ್ತು. ಇದುವರೆಗೆ ಎಂಎಂಟಿಸಿ 14 ಸಾವಿರ ಟನ್ಗಳಷ್ಟನ್ನೇ ವಿದೇಶದಿಂದ ಖರೀದಿಸಿದೆ.</p>.<p><strong>ಆಮದು ವಿವರ</strong></p>.<p><strong>40 ಸಾವಿರ ಟನ್: </strong>ಎಂಎಂಟಿಸಿ ಬೇಡಿಕೆ ಸಲ್ಲಿಸಿರುವುದು</p>.<p>14 ಸಾವಿರ ಟನ್:ಅಂತಿಮವಾಗಿ ಖರೀದಿಸಿರುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಮದಾಗಿರುವ ಈರುಳ್ಳಿ ಖರೀದಿಸಲು ರಾಜ್ಯಗಳು ಆಸಕ್ತಿ ತೋರಿಸುತ್ತಿಲ್ಲ. ಹೀಗಾಗಿ ಪ್ರತಿ ಕೆ.ಜಿಗೆ ₹ 22 ರಿಂದ ₹ 23ರ ದರದಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಸದ್ಯ ಆಮದಾಗಿರುವ ಈರುಳ್ಳಿಯನ್ನು ಪ್ರತಿ ಕೆ.ಜಿಗೆ ₹ 58ರಂತೆ ರಾಜ್ಯಗಳಿಗೆ ವಿತರಿಸಲಾಗುತ್ತಿದೆ. ಸಾರಿಗೆ ವೆಚ್ಚವನ್ನು ಕೇಂದ್ರವೇ ಭರಿಸುತ್ತಿದೆ.</p>.<p>ಹೊಸ ಬೆಳೆ ಮಾರುಕಟ್ಟೆಗೆ ಬರುತ್ತಿರುವುದರಿಂದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಹೀಗಾಗಿ ಆಮದಾಗಿರುವ ಸರಕನ್ನು ಗರಿಷ್ಠ ಬೆಲೆಗೆ ಖರೀದಿಸಲು ಯಾರೊಬ್ಬರೂ ಆಸಕ್ತಿ ತೋರಿಸುತ್ತಿಲ್ಲ. ಇದರಿಂದಾಗಿ ಭಾರಿ ಪ್ರಮಾಣದ ಸರಕು ಬಂದರಿನಲ್ಲಿಯೇ ಉಳಿಯುವಂತಾಗಿದೆ.</p>.<p>ಆಮದು ಈರುಳ್ಳಿಯ ರುಚಿಯಲ್ಲಿ ವ್ಯತ್ಯಾಸ ಇದೆ ಎನ್ನುವ ಕಾರಣಕ್ಕೆ ಗ್ರಾಹಕರು ಖರೀದಿಸಲು ಮುಂದಾಗುತ್ತಿಲ್ಲ. ಹೀಗಾಗಿ ಹಲವು ರಾಜ್ಯಗಳು ಆಮದು ಈರುಳ್ಳಿಗೆ ಸಲ್ಲಿಸಿದ್ದ ಬೇಡಿಕೆಯನ್ನು ಹಿಂದಕ್ಕೆ ಪಡೆದಿವೆ.</p>.<p>ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ 2019ರ ನವೆಂಬರ್ನಲ್ಲಿ 1.2 ಲಕ್ಷ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ನಿರ್ಧರಿಸಿತ್ತು. ಇದುವರೆಗೆ ಎಂಎಂಟಿಸಿ 14 ಸಾವಿರ ಟನ್ಗಳಷ್ಟನ್ನೇ ವಿದೇಶದಿಂದ ಖರೀದಿಸಿದೆ.</p>.<p><strong>ಆಮದು ವಿವರ</strong></p>.<p><strong>40 ಸಾವಿರ ಟನ್: </strong>ಎಂಎಂಟಿಸಿ ಬೇಡಿಕೆ ಸಲ್ಲಿಸಿರುವುದು</p>.<p>14 ಸಾವಿರ ಟನ್:ಅಂತಿಮವಾಗಿ ಖರೀದಿಸಿರುವುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>