<p><strong>ನವದೆಹಲಿ</strong>: ‘ಆದಾಯ ತೆರಿಗೆ ಇಲಾಖೆಯು ‘ಆದಾಯ ತೆರಿಗೆ ಕಾಯ್ದೆ–2025’ರ ಅಡಿಯಲ್ಲಿ ಸರಳೀಕೃತ ಐಟಿಆರ್ ಫಾರ್ಮ್ ಹಾಗೂ ನಿಯಮಗಳ ಜಾರಿ ಕುರಿತು ಜನವರಿಯಲ್ಲಿ ಅಧಿಸೂಚನೆ ಹೊರಡಿಸಲಿದೆ’ ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿಯ (ಸಿಬಿಡಿಟಿ) ಅಧ್ಯಕ್ಷ ರವಿ ಅಗರ್ವಾಲ್ ತಿಳಿಸಿದ್ದಾರೆ.</p><p>ಭಾರತ ಅಂತರರಾಷ್ಟ್ರೀಯ ವ್ಯಾಪಾರ ಮೇಳ (ಐಐಟಿಎಫ್)ದಲ್ಲಿ ಸೋಮವಾರ ಮಾತನಾಡಿದ ಅವರು,‘ಇದು ಮುಂದಿನ ಆರ್ಥಿಕ ವರ್ಷ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ. ಹೊಸ ಕಾನೂನಿನ ಅಡಿಯಲ್ಲಿ ಐಟಿಆರ್ ರಿಟರ್ನ್ ಫಾರ್ಮ್ಗಳನ್ನು ಮತ್ತಷ್ಟು ಸರಳಗೊಳಿಸಲಿದೆ. 1961ರಿಂದ<br>ಜಾರಿಗೆಯಲ್ಲಿರುವ ಆದಾಯ ತೆರಿಗೆ ಕಾಯ್ದೆಯನ್ನು ಬದಲಾಯಿಸಲಿದೆ’ ಎಂದು ಅವರು ಹೇಳಿದ್ದಾರೆ.</p><p>‘ಹೊಸ ಫಾರ್ಮ್ ಹಾಗೂ ವಿನ್ಯಾಸ ರಚನೆಯ ಕುರಿತ ಪ್ರಕ್ರಿಯೆ ನಡೆಯುತ್ತಿದೆ. ಜನವರಿ ವೇಳೆಗೆ ಇದು ತೆರಿಗೆ ಪಾವತಿದಾರರಿಗೆ ಲಭ್ಯವಾಗಲಿದ್ದು, ಹೊಸ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸಾಕಷ್ಟು ಸಮಯವೂ ದೊರಕಲಿದೆ’ ಎಂದು ಅವರು ಮಾಹಿತಿ<br>ನೀಡಿದ್ದಾರೆ.</p><p>ಆಗಸ್ಟ್ 12ರಂದು ‘ಆದಾಯ ತೆರಿಗೆ ಕಾಯ್ದೆ–2025’ ಅನ್ನು ಸಂಸತ್ ಅಂಗೀಕರಿಸಿತ್ತು. ಹೊಸ ಕಾಯ್ದೆಯು ಯಾವುದೇ ಹೊಸ ತೆರಿಗೆಯನ್ನು ವಿಧಿ ಸುತ್ತಿಲ್ಲ, ಬದಲಾಗಿ ತೆರಿಗೆ ಕಾಯ್ದೆಯನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳ ಭಾಷೆಯಲ್ಲಿ ವಿವರಿಸಲಾಗಿದೆ. </p>.<p><strong>ನೇರ ಸಂಗ್ರಹದ ಗುರಿ ತಲುಪುವ ವಿಶ್ವಾಸ</strong></p><p>‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ನೇರ ತೆರಿಗೆ ಮೂಲಕ ₹25.20 ಲಕ್ಷ ಕೋಟಿ ಸಂಗ್ರಹದ ಗುರಿ ಹೊಂದಿದೆ. ಈ ಗುರಿಯನ್ನು ತಲುಪುವ ವಿಶ್ವಾಸ ಹೊಂದಲಾಗಿದೆ’ ಎಂದು ರವಿ ಅಗರ್ವಾಲ್ ಸೋಮವಾರ ಹೇಳಿದ್ದಾರೆ.</p><p>ಮರುಪಾವತಿಗೆ ಸಂಬಂಧಿಸಿದ ಕ್ಲೇಮ್ಗಳಲ್ಲಿ ಕೆಲವು ಹೆಚ್ಚಿನ ಮೌಲ್ಯವನ್ನು ಹೊಂದಿವೆ. ಅಲ್ಲದೆ, ಯಾವುದಾದರೂ ವಿಷಯ ನಮೂದಿಸದಿದ್ದರೆ, ಪರಿಷ್ಕರಿಸಿದ ಮರುಪಾವತಿ (ರೀಫಂಡ್) ವಿವರ ಸಲ್ಲಿಸುವಂತೆ ತೆರಿಗೆ ಪಾವತಿದಾರರಿಗೆ ತಿಳಿಸಲಾಗಿದೆ. ಇದಕ್ಕಾಗಿ ಮರುಪಾವತಿಯಲ್ಲಿ ವಿಳಂಬ ಆಗುತ್ತಿದೆ ಎಂದು ಹೇಳಿದ್ದಾರೆ.</p><p>ಸಣ್ಣ ಮೊತ್ತ ಹೊಂದಿರುವ ಮರುಪಾವತಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಮರುಪಾವತಿಗೆ ಸಲ್ಲಿಕೆ ಆಗುತ್ತಿರುವ ಕ್ಲೇಮ್ಗಳಲ್ಲಿ ಹಲವು ತಪ್ಪಾದ ನಮೂದುಗಳಿವೆ ಎಂಬುದನ್ನು ಪತ್ತೆ ಹಚ್ಚಲಾಗಿದೆ ಎಂದರು.</p><p>ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ಬಾಕಿ ಇರುವ ಮರುಪಾವತಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.</p><p>ಪ್ರಸಕ್ತ ಆರ್ಥಿಕ ಏಪ್ರಿಲ್ 1ರಿಂದ ನವೆಂಬರ್ 12ರ ವರೆಗೆ ₹12.92 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹವಾಗಿದೆ. ಇದು ಕಳೆದ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 6.99ರಷ್ಟು ಹೆಚ್ಚಳ. ಮರುಪಾವತಿ ಹಂಚಿಕೆಯಲ್ಲಿ ಶೇ 18ರಷ್ಟು ಇಳಿಕೆ ಆಗಿದ್ದು, ₹2.42 ಲಕ್ಷ ಕೋಟಿ ಆಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಆದಾಯ ತೆರಿಗೆ ಇಲಾಖೆಯು ‘ಆದಾಯ ತೆರಿಗೆ ಕಾಯ್ದೆ–2025’ರ ಅಡಿಯಲ್ಲಿ ಸರಳೀಕೃತ ಐಟಿಆರ್ ಫಾರ್ಮ್ ಹಾಗೂ ನಿಯಮಗಳ ಜಾರಿ ಕುರಿತು ಜನವರಿಯಲ್ಲಿ ಅಧಿಸೂಚನೆ ಹೊರಡಿಸಲಿದೆ’ ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿಯ (ಸಿಬಿಡಿಟಿ) ಅಧ್ಯಕ್ಷ ರವಿ ಅಗರ್ವಾಲ್ ತಿಳಿಸಿದ್ದಾರೆ.</p><p>ಭಾರತ ಅಂತರರಾಷ್ಟ್ರೀಯ ವ್ಯಾಪಾರ ಮೇಳ (ಐಐಟಿಎಫ್)ದಲ್ಲಿ ಸೋಮವಾರ ಮಾತನಾಡಿದ ಅವರು,‘ಇದು ಮುಂದಿನ ಆರ್ಥಿಕ ವರ್ಷ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ. ಹೊಸ ಕಾನೂನಿನ ಅಡಿಯಲ್ಲಿ ಐಟಿಆರ್ ರಿಟರ್ನ್ ಫಾರ್ಮ್ಗಳನ್ನು ಮತ್ತಷ್ಟು ಸರಳಗೊಳಿಸಲಿದೆ. 1961ರಿಂದ<br>ಜಾರಿಗೆಯಲ್ಲಿರುವ ಆದಾಯ ತೆರಿಗೆ ಕಾಯ್ದೆಯನ್ನು ಬದಲಾಯಿಸಲಿದೆ’ ಎಂದು ಅವರು ಹೇಳಿದ್ದಾರೆ.</p><p>‘ಹೊಸ ಫಾರ್ಮ್ ಹಾಗೂ ವಿನ್ಯಾಸ ರಚನೆಯ ಕುರಿತ ಪ್ರಕ್ರಿಯೆ ನಡೆಯುತ್ತಿದೆ. ಜನವರಿ ವೇಳೆಗೆ ಇದು ತೆರಿಗೆ ಪಾವತಿದಾರರಿಗೆ ಲಭ್ಯವಾಗಲಿದ್ದು, ಹೊಸ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸಾಕಷ್ಟು ಸಮಯವೂ ದೊರಕಲಿದೆ’ ಎಂದು ಅವರು ಮಾಹಿತಿ<br>ನೀಡಿದ್ದಾರೆ.</p><p>ಆಗಸ್ಟ್ 12ರಂದು ‘ಆದಾಯ ತೆರಿಗೆ ಕಾಯ್ದೆ–2025’ ಅನ್ನು ಸಂಸತ್ ಅಂಗೀಕರಿಸಿತ್ತು. ಹೊಸ ಕಾಯ್ದೆಯು ಯಾವುದೇ ಹೊಸ ತೆರಿಗೆಯನ್ನು ವಿಧಿ ಸುತ್ತಿಲ್ಲ, ಬದಲಾಗಿ ತೆರಿಗೆ ಕಾಯ್ದೆಯನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳ ಭಾಷೆಯಲ್ಲಿ ವಿವರಿಸಲಾಗಿದೆ. </p>.<p><strong>ನೇರ ಸಂಗ್ರಹದ ಗುರಿ ತಲುಪುವ ವಿಶ್ವಾಸ</strong></p><p>‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ನೇರ ತೆರಿಗೆ ಮೂಲಕ ₹25.20 ಲಕ್ಷ ಕೋಟಿ ಸಂಗ್ರಹದ ಗುರಿ ಹೊಂದಿದೆ. ಈ ಗುರಿಯನ್ನು ತಲುಪುವ ವಿಶ್ವಾಸ ಹೊಂದಲಾಗಿದೆ’ ಎಂದು ರವಿ ಅಗರ್ವಾಲ್ ಸೋಮವಾರ ಹೇಳಿದ್ದಾರೆ.</p><p>ಮರುಪಾವತಿಗೆ ಸಂಬಂಧಿಸಿದ ಕ್ಲೇಮ್ಗಳಲ್ಲಿ ಕೆಲವು ಹೆಚ್ಚಿನ ಮೌಲ್ಯವನ್ನು ಹೊಂದಿವೆ. ಅಲ್ಲದೆ, ಯಾವುದಾದರೂ ವಿಷಯ ನಮೂದಿಸದಿದ್ದರೆ, ಪರಿಷ್ಕರಿಸಿದ ಮರುಪಾವತಿ (ರೀಫಂಡ್) ವಿವರ ಸಲ್ಲಿಸುವಂತೆ ತೆರಿಗೆ ಪಾವತಿದಾರರಿಗೆ ತಿಳಿಸಲಾಗಿದೆ. ಇದಕ್ಕಾಗಿ ಮರುಪಾವತಿಯಲ್ಲಿ ವಿಳಂಬ ಆಗುತ್ತಿದೆ ಎಂದು ಹೇಳಿದ್ದಾರೆ.</p><p>ಸಣ್ಣ ಮೊತ್ತ ಹೊಂದಿರುವ ಮರುಪಾವತಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಮರುಪಾವತಿಗೆ ಸಲ್ಲಿಕೆ ಆಗುತ್ತಿರುವ ಕ್ಲೇಮ್ಗಳಲ್ಲಿ ಹಲವು ತಪ್ಪಾದ ನಮೂದುಗಳಿವೆ ಎಂಬುದನ್ನು ಪತ್ತೆ ಹಚ್ಚಲಾಗಿದೆ ಎಂದರು.</p><p>ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ಬಾಕಿ ಇರುವ ಮರುಪಾವತಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.</p><p>ಪ್ರಸಕ್ತ ಆರ್ಥಿಕ ಏಪ್ರಿಲ್ 1ರಿಂದ ನವೆಂಬರ್ 12ರ ವರೆಗೆ ₹12.92 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹವಾಗಿದೆ. ಇದು ಕಳೆದ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 6.99ರಷ್ಟು ಹೆಚ್ಚಳ. ಮರುಪಾವತಿ ಹಂಚಿಕೆಯಲ್ಲಿ ಶೇ 18ರಷ್ಟು ಇಳಿಕೆ ಆಗಿದ್ದು, ₹2.42 ಲಕ್ಷ ಕೋಟಿ ಆಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>