ವಾಣಿಜ್ಯ ಸಚಿವ ಸುರೇಶ ಪ್ರಭು ಅವರಿಗೆ ಗುರುವಾರ ಈ ಕುರಿತ ಮನವಿ ಸಲ್ಲಿಸಿರುವ ಶಾಸಕರಾದ ಆರಗ ಜ್ಞಾನೇಂದ್ರ ಹಾಗೂ ಹರತಾಳು ಹಾಲಪ್ಪ, ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್ ಮತ್ತು ಇಂಡೋನೇಷ್ಯಾದಿಂದ ಆಮದಾಗುತ್ತಿರುವ ಪ್ರತಿ ಕೆ.ಜಿ. ಅಡಿಕೆಯ ಬೆಲೆಯನ್ನು ₹ 251ರಿಂದ ₹ 300ಕ್ಕೆ ಹೆಚ್ಚಿಸಿದಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂಬುದನ್ನು ಮನವರಿಕೆ ಮಾಡಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.