<p><strong>ಬೆಂಗಳೂರು</strong>: ರಾಜ್ಯದ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಇಳಿಕೆಯಾಗಿದ್ದು, ಗ್ರಾಹಕರು ನಿರಾಳರಾಗಿದ್ದಾರೆ.</p>.<p>ಕಳೆದ ವರ್ಷದ ಇದೇ ಅವಧಿಯಲ್ಲಿ ಬೆಳ್ಳುಳ್ಳಿ ಚಿಲ್ಲರೆ ದರವು ಕೆ.ಜಿಗೆ ₹500 ದಾಟಿತ್ತು. ಇದರಿಂದ ಗ್ರಾಹಕರ ಜೇಬಿಗೆ ಹೊರೆಯಾಗಿತ್ತು. ಸದ್ಯ ಇಲ್ಲಿನ ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸಗಟು ದರ ಕೆ.ಜಿಗೆ ₹50ರಿಂದ ₹100 ಇದ್ದರೆ, ಚಿಲ್ಲರೆ ದರವು ಕೆ.ಜಿಗೆ ₹120ರಿಂದ ₹140 ಇದೆ.</p>.<p>ದೇಶದ ಒಟ್ಟು ಬೆಳ್ಳುಳ್ಳಿ ಉತ್ಪಾದನೆ ಪೈಕಿ ಮಧ್ಯಪ್ರದೇಶದಲ್ಲಿ ಶೇ 70ರಷ್ಟು ಉತ್ಪಾದನೆಯಾಗುತ್ತದೆ. ಉಳಿದಂತೆ ರಾಜಸ್ಥಾನ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ರೈತರು ಹೆಚ್ಚಾಗಿ ಬೆಳೆಯುತ್ತಾರೆ. </p>.<p>ಕಳೆದ ವರ್ಷ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಳೆಯಿಂದಾಗಿ ಬೆಳೆ ಹಾನಿಗೀಡಾಗಿತ್ತು. ಈ ಬಾರಿ ಅಲ್ಲಿ ಉತ್ಪಾದನೆ ಹೆಚ್ಚಿದೆ. ಇದರಿಂದ ಕರ್ನಾಟಕದ ಮಾರುಕಟ್ಟೆಗೆ ಆವಕ ಹೆಚ್ಚಾಗುತ್ತಿದೆ. ಹಾಗಾಗಿ, ಬೆಳ್ಳುಳ್ಳಿ ದರ ಇಳಿಕೆಯಾಗಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.</p>.<p>ಸದ್ಯ ಮಧ್ಯಪ್ರದೇಶದಲ್ಲಿ ಕೊಯ್ಲು ಶುರುವಾಗಿದೆ. ಅಲ್ಲಿಂದ ಬೆಂಗಳೂರಿನ ಯಶವಂತಪುರದ ಎಪಿಎಂಸಿಗೆ ಪ್ರತಿದಿನ 8 ಸಾವಿರದಿಂದ 10 ಸಾವಿರ ಚೀಲ (ಪ್ರತಿ ಚೀಲ 50 ಕೆ.ಜಿ) ಬೆಳ್ಳುಳ್ಳಿ ಆವಕವಾಗುತ್ತದೆ. ಇಲ್ಲಿಂದ ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗೂ ಪೂರೈಕೆಯಾಗುತ್ತದೆ. ಅಲ್ಲದೆ, ನೆರೆಯ ತಮಿಳುನಾಡಿಗೂ ರವಾನೆಯಾಗುತ್ತದೆ.</p>.<p>‘ಕಳೆದ ವರ್ಷ ರಾಜಸ್ಥಾನದಲ್ಲಿ ಮಳೆಯಿಂದಾಗಿ ಹೆಚ್ಚು ಬೆಳೆ ನಷ್ಟವಾಗಿತ್ತು. ಈ ಬಾರಿ ಅಲ್ಲಿನ ಸರ್ಕಾರ ಅಂದಾಜಿಸಿದ್ದಕ್ಕಿಂತಲೂ ಮೂರು ಪಟ್ಟು ಹೆಚ್ಚು ಉತ್ಪಾದನೆಯಾಗಿದೆ. ಸದ್ಯ ಮಧ್ಯಪ್ರದೇಶದಿಂದ ಅತಿಹೆಚ್ಚಿನ ಪ್ರಮಾಣದಲ್ಲಿ ಬೆಂಗಳೂರಿನ ಮಾರುಕಟ್ಟೆಗೆ ಬೆಳ್ಳುಳ್ಳಿ ಆವಕವಾಗುತ್ತಿದೆ. ಇದರಿಂದ ಬೆಲೆ ಇಳಿಕೆಯಾಗಿದೆ’ ಎಂದು ಗುಜರಾತ್ ಟ್ರೇಡರ್ಸ್ನ ವರ್ತಕ ಜುಬೇರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೆಳ್ಳುಳ್ಳಿ ಬೆಳೆಯುವ ರಾಜ್ಯಗಳಲ್ಲಿ ಈ ಬಾರಿ ಉತ್ಪಾದನೆ ಹೆಚ್ಚಿದ್ದು, ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ. ಹಾಗಾಗಿ, ಸಗಟು ಮತ್ತು ಚಿಲ್ಲರೆ ಬೆಲೆಯು ಸ್ಥಿರವಾಗಿರಲಿದೆ’ ಎಂದು ಹೇಳಿದರು.</p>.<p>ಬಾಂಗ್ಲಾಕ್ಕೆ ರಫ್ತು ಶುರು</p><p>ಭಾರತದಲ್ಲಿ ಬೆಳೆಯುವ ಬೆಳ್ಳುಳ್ಳಿಯು ಬಾಂಗ್ಲಾದೇಶ ಮಲೇಷ್ಯಾ ವಿಯೆಟ್ನಾಂ ಹಾಗೂ ಶ್ರೀಲಂಕಾಕ್ಕೂ ರಫ್ತಾಗುತ್ತದೆ. ಪ್ರಸ್ತುತ ಮಧ್ಯಪ್ರದೇಶದಿಂದ ಬಾಂಗ್ಲಾಕ್ಕೆ ರಫ್ತು ಆರಂಭಗೊಂಡಿದೆ. ಉತ್ಪಾದನೆ ಹೆಚ್ಚಿರುವುದರಿಂದ ಇದು ದೇಶೀಯ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎನ್ನುತ್ತಾರೆ ವ್ಯಾಪಾರಿಗಳು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಇಳಿಕೆಯಾಗಿದ್ದು, ಗ್ರಾಹಕರು ನಿರಾಳರಾಗಿದ್ದಾರೆ.</p>.<p>ಕಳೆದ ವರ್ಷದ ಇದೇ ಅವಧಿಯಲ್ಲಿ ಬೆಳ್ಳುಳ್ಳಿ ಚಿಲ್ಲರೆ ದರವು ಕೆ.ಜಿಗೆ ₹500 ದಾಟಿತ್ತು. ಇದರಿಂದ ಗ್ರಾಹಕರ ಜೇಬಿಗೆ ಹೊರೆಯಾಗಿತ್ತು. ಸದ್ಯ ಇಲ್ಲಿನ ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸಗಟು ದರ ಕೆ.ಜಿಗೆ ₹50ರಿಂದ ₹100 ಇದ್ದರೆ, ಚಿಲ್ಲರೆ ದರವು ಕೆ.ಜಿಗೆ ₹120ರಿಂದ ₹140 ಇದೆ.</p>.<p>ದೇಶದ ಒಟ್ಟು ಬೆಳ್ಳುಳ್ಳಿ ಉತ್ಪಾದನೆ ಪೈಕಿ ಮಧ್ಯಪ್ರದೇಶದಲ್ಲಿ ಶೇ 70ರಷ್ಟು ಉತ್ಪಾದನೆಯಾಗುತ್ತದೆ. ಉಳಿದಂತೆ ರಾಜಸ್ಥಾನ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ರೈತರು ಹೆಚ್ಚಾಗಿ ಬೆಳೆಯುತ್ತಾರೆ. </p>.<p>ಕಳೆದ ವರ್ಷ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಳೆಯಿಂದಾಗಿ ಬೆಳೆ ಹಾನಿಗೀಡಾಗಿತ್ತು. ಈ ಬಾರಿ ಅಲ್ಲಿ ಉತ್ಪಾದನೆ ಹೆಚ್ಚಿದೆ. ಇದರಿಂದ ಕರ್ನಾಟಕದ ಮಾರುಕಟ್ಟೆಗೆ ಆವಕ ಹೆಚ್ಚಾಗುತ್ತಿದೆ. ಹಾಗಾಗಿ, ಬೆಳ್ಳುಳ್ಳಿ ದರ ಇಳಿಕೆಯಾಗಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ.</p>.<p>ಸದ್ಯ ಮಧ್ಯಪ್ರದೇಶದಲ್ಲಿ ಕೊಯ್ಲು ಶುರುವಾಗಿದೆ. ಅಲ್ಲಿಂದ ಬೆಂಗಳೂರಿನ ಯಶವಂತಪುರದ ಎಪಿಎಂಸಿಗೆ ಪ್ರತಿದಿನ 8 ಸಾವಿರದಿಂದ 10 ಸಾವಿರ ಚೀಲ (ಪ್ರತಿ ಚೀಲ 50 ಕೆ.ಜಿ) ಬೆಳ್ಳುಳ್ಳಿ ಆವಕವಾಗುತ್ತದೆ. ಇಲ್ಲಿಂದ ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗೂ ಪೂರೈಕೆಯಾಗುತ್ತದೆ. ಅಲ್ಲದೆ, ನೆರೆಯ ತಮಿಳುನಾಡಿಗೂ ರವಾನೆಯಾಗುತ್ತದೆ.</p>.<p>‘ಕಳೆದ ವರ್ಷ ರಾಜಸ್ಥಾನದಲ್ಲಿ ಮಳೆಯಿಂದಾಗಿ ಹೆಚ್ಚು ಬೆಳೆ ನಷ್ಟವಾಗಿತ್ತು. ಈ ಬಾರಿ ಅಲ್ಲಿನ ಸರ್ಕಾರ ಅಂದಾಜಿಸಿದ್ದಕ್ಕಿಂತಲೂ ಮೂರು ಪಟ್ಟು ಹೆಚ್ಚು ಉತ್ಪಾದನೆಯಾಗಿದೆ. ಸದ್ಯ ಮಧ್ಯಪ್ರದೇಶದಿಂದ ಅತಿಹೆಚ್ಚಿನ ಪ್ರಮಾಣದಲ್ಲಿ ಬೆಂಗಳೂರಿನ ಮಾರುಕಟ್ಟೆಗೆ ಬೆಳ್ಳುಳ್ಳಿ ಆವಕವಾಗುತ್ತಿದೆ. ಇದರಿಂದ ಬೆಲೆ ಇಳಿಕೆಯಾಗಿದೆ’ ಎಂದು ಗುಜರಾತ್ ಟ್ರೇಡರ್ಸ್ನ ವರ್ತಕ ಜುಬೇರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೆಳ್ಳುಳ್ಳಿ ಬೆಳೆಯುವ ರಾಜ್ಯಗಳಲ್ಲಿ ಈ ಬಾರಿ ಉತ್ಪಾದನೆ ಹೆಚ್ಚಿದ್ದು, ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ. ಹಾಗಾಗಿ, ಸಗಟು ಮತ್ತು ಚಿಲ್ಲರೆ ಬೆಲೆಯು ಸ್ಥಿರವಾಗಿರಲಿದೆ’ ಎಂದು ಹೇಳಿದರು.</p>.<p>ಬಾಂಗ್ಲಾಕ್ಕೆ ರಫ್ತು ಶುರು</p><p>ಭಾರತದಲ್ಲಿ ಬೆಳೆಯುವ ಬೆಳ್ಳುಳ್ಳಿಯು ಬಾಂಗ್ಲಾದೇಶ ಮಲೇಷ್ಯಾ ವಿಯೆಟ್ನಾಂ ಹಾಗೂ ಶ್ರೀಲಂಕಾಕ್ಕೂ ರಫ್ತಾಗುತ್ತದೆ. ಪ್ರಸ್ತುತ ಮಧ್ಯಪ್ರದೇಶದಿಂದ ಬಾಂಗ್ಲಾಕ್ಕೆ ರಫ್ತು ಆರಂಭಗೊಂಡಿದೆ. ಉತ್ಪಾದನೆ ಹೆಚ್ಚಿರುವುದರಿಂದ ಇದು ದೇಶೀಯ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎನ್ನುತ್ತಾರೆ ವ್ಯಾಪಾರಿಗಳು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>