<p><strong>ಮುಂಬೈ:</strong>ಬೆಲೆ ಏರಿಕೆ ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದ ಬೆನ್ನಲ್ಲೇ ಏಷ್ಯಾದ ಇತರ ರಾಷ್ಟ್ರಗಳ ಮೇಲೆ ಅದು ಪರಿಣಾಮ ಬೀರಿದೆ. ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ ಸೇರಿ ಏಷ್ಯಾ ರಾಷ್ಟ್ರಗಳಲ್ಲಿ ಈರುಳ್ಳಿ ಬೆಲೆ ಭಾರೀ ಏರಿಕೆಯಾಗಿದೆ.</p>.<p>ಈ ರಾಷ್ಟ್ರಗಳಿಗೆ ಚೀನಾ, ಈಜಿಪ್ಟ್ಗಳಿಂದಲೂ ಈರುಳ್ಳಿ ರಫ್ತಾಗುತ್ತಿದೆ. ಆದರೆ, ಭಾರತದಿಂದ ಶೀಘ್ರ ಸಾಗಾಟ ಮಾಡಲು ಅವಕಾಶ ಇರುವುದರಿಂದ ಇಲ್ಲಿನ ಈರುಳ್ಳಿಯನ್ನೇ ಅವು ಹೆಚ್ಚಾಗಿ ನೆಚ್ಚಿಕೊಂಡಿವೆ. ಹೀಗಾಗಿ ಭಾರತ ರಫ್ತು ನಿಷೇಧ ಮಾಡಿರುವುದು ನೇರ ಪರಿಣಾಮ ಬೀರಿದೆ.</p>.<p>ಇದು ಭೀಕರ ದರ ಏರಿಕೆ ಎಂದು ನೇಪಾಳದ ರಾಜಧಾನಿ ಕಠ್ಮಂಡುವಿನ ಮಹಿಳೆ ಸೀಮಾ ಪೊಖರೆಲ್ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/government-bans-onion-export-668360.html" target="_blank">ಈರುಳ್ಳಿ ಬೆಲೆ ಏರಿಕೆ: ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ</a></p>.<p>ರಫ್ತು ನಿಷೇಧದ ಬೆನ್ನಲ್ಲೇ ಬಾಂಗ್ಲಾ, ನೇಪಾಳ ಮತ್ತಿತರ ರಾಷ್ಟ್ರಗಳು ಮ್ಯಾನ್ಮಾರ್, ಈಜಿಪ್ಟ್, ಟರ್ಕಿ ಮತ್ತು ಚೀನಾಗಳಿಂದ ಹೆಚ್ಚು ಆಮದು ಮಾಡಿಕೊಳ್ಳಲು ಆರಂಭಿಸಿದ್ದು, ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಂಡಿವೆ. ಆದರೂ ಪ್ರಯೋಜನವಾಗಿಲ್ಲ.</p>.<p>ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ದಾಖಲೆಗಳ ಪ್ರಕಾರ, 2018-19ನೇ ಹಣಕಾಸು ವರ್ಷದಲ್ಲಿ ಭಾರತ 22 ಲಕ್ಷ ಟನ್ ಈರುಳ್ಳಿ ರಫ್ತು ಮಾಡಿದೆ. ಇದು ಏಷ್ಯಾದ ರಾಷ್ಟ್ರಗಳು ಆಮದು ಮಾಡಿಕೊಳ್ಳುವ ಒಟ್ಟು ಈರುಳ್ಳಿಯ ಪ್ರಮಾಣದ ಅರ್ಧಕ್ಕಿಂತಲೂ ಹೆಚ್ಚು ಎಂದು ವ್ಯಾಪಾರಿಗಳು ಅಂದಾಜಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/business/commerce-news/onion-export-ban-stock-limited-668475.html" target="_blank">ಈರುಳ್ಳಿ ರಫ್ತು ನಿಷೇಧ, ದಾಸ್ತಾನಿಗೆ ಮಿತಿ ವಿಧಿಸಿದ ಕೇಂದ್ರ ಸರ್ಕಾರ</a></p>.<p>ಸದ್ಯದ ಪರಿಸ್ಥಿತಿಯಲ್ಲಿ ಪರ್ಯಾಯ ಸರಕು ಪೂರೈಕೆದಾರರೂ ದರ ಹೆಚ್ಚಿಸುತ್ತಿರುವುದು ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ಢಾಕಾದ ವ್ಯಾಪರಿ ಮೊಹಮ್ಮದ್ ಇದ್ರಿಸ್ ತಿಳಿಸಿದ್ದಾರೆ. ಈಗ ಬಾಂಗ್ಲಾದೇಶದ ಮಾರುಕಟ್ಟೆಗಳಲ್ಲಿ 1 ಕೆ.ಜಿ.ಈರುಳ್ಳಿಗೆ 120 ಟಾಕ (ಸುಮಾರು ₹101) ದರ ಇದೆ. ಇಷ್ಟೊಂದು ಏರಿಕೆಯಾಗಿರುವುದು 2013ರ ಡಿಸೆಂಬರ್ ಬಳಿಕ ಇದೇ ಮೊದಲು ಎಂದು ಇದ್ರಿಸ್ ಹೇಳಿದ್ದಾರೆ.</p>.<p>‘ಭಾರತ ಈರುಳ್ಳಿ ರಫ್ತು ನಿಷೇಧಿಸಿರುವುದರಿಂದ ಇತರ ದೇಶಗಳು ಅದರ ಲಾಭ ಪಡೆಯಲು ಪ್ರಯತ್ನಿಸುತ್ತಿವೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶವು ಸರ್ಕಾರಿ ಸ್ವಾಮ್ಯದ ವ್ಯಾಪಾರಿ ನಿಗಮದ ಮೂಲಕ ಸಬ್ಸಿಡಿಸಹಿತ ಈರುಳ್ಳಿ ಮಾರಾಟ ಆರಂಭಿಸಿದೆ.</p>.<p>ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಉಂಟಾಗಿದ್ದ ಪ್ರವಾಹ ಪರಿಸ್ಥಿತಿಯಿಂದ ಈರುಳ್ಳಿ ಪೂರೈಕೆಯಲ್ಲಿ ಅಡಚಣೆ ಉಂಟಾಗಿತ್ತು. ಹೀಗಾಗಿ ಆಗಸ್ಟ್ನಿಂದಲೂ ಈರುಳ್ಳಿ ದರದಲ್ಲಿ ಭಾರಿ ಏರಿಕೆ ಕಂಡುಬರುತ್ತಿದೆ. ಇನ್ನು ಕೆಲವೆಡೆ ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿಕೊಂಡಿರುವುದು ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದೂ ವರದಿಯಾಗಿತ್ತು. ಈ ಎಲ್ಲ ಕಾರಣಗಳಿಂದ ಕೇಂದ್ರ ಸರ್ಕಾರ ಭಾನುವಾರ ಈರುಳ್ಳಿ ರಫ್ತು ನಿಷೇಧಿಸಿತ್ತು. ಜತೆಗೆ,ಮಿತಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ಬೆಲೆ ಏರಿಕೆ ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದ ಬೆನ್ನಲ್ಲೇ ಏಷ್ಯಾದ ಇತರ ರಾಷ್ಟ್ರಗಳ ಮೇಲೆ ಅದು ಪರಿಣಾಮ ಬೀರಿದೆ. ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ ಸೇರಿ ಏಷ್ಯಾ ರಾಷ್ಟ್ರಗಳಲ್ಲಿ ಈರುಳ್ಳಿ ಬೆಲೆ ಭಾರೀ ಏರಿಕೆಯಾಗಿದೆ.</p>.<p>ಈ ರಾಷ್ಟ್ರಗಳಿಗೆ ಚೀನಾ, ಈಜಿಪ್ಟ್ಗಳಿಂದಲೂ ಈರುಳ್ಳಿ ರಫ್ತಾಗುತ್ತಿದೆ. ಆದರೆ, ಭಾರತದಿಂದ ಶೀಘ್ರ ಸಾಗಾಟ ಮಾಡಲು ಅವಕಾಶ ಇರುವುದರಿಂದ ಇಲ್ಲಿನ ಈರುಳ್ಳಿಯನ್ನೇ ಅವು ಹೆಚ್ಚಾಗಿ ನೆಚ್ಚಿಕೊಂಡಿವೆ. ಹೀಗಾಗಿ ಭಾರತ ರಫ್ತು ನಿಷೇಧ ಮಾಡಿರುವುದು ನೇರ ಪರಿಣಾಮ ಬೀರಿದೆ.</p>.<p>ಇದು ಭೀಕರ ದರ ಏರಿಕೆ ಎಂದು ನೇಪಾಳದ ರಾಜಧಾನಿ ಕಠ್ಮಂಡುವಿನ ಮಹಿಳೆ ಸೀಮಾ ಪೊಖರೆಲ್ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/government-bans-onion-export-668360.html" target="_blank">ಈರುಳ್ಳಿ ಬೆಲೆ ಏರಿಕೆ: ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ</a></p>.<p>ರಫ್ತು ನಿಷೇಧದ ಬೆನ್ನಲ್ಲೇ ಬಾಂಗ್ಲಾ, ನೇಪಾಳ ಮತ್ತಿತರ ರಾಷ್ಟ್ರಗಳು ಮ್ಯಾನ್ಮಾರ್, ಈಜಿಪ್ಟ್, ಟರ್ಕಿ ಮತ್ತು ಚೀನಾಗಳಿಂದ ಹೆಚ್ಚು ಆಮದು ಮಾಡಿಕೊಳ್ಳಲು ಆರಂಭಿಸಿದ್ದು, ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಂಡಿವೆ. ಆದರೂ ಪ್ರಯೋಜನವಾಗಿಲ್ಲ.</p>.<p>ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ದಾಖಲೆಗಳ ಪ್ರಕಾರ, 2018-19ನೇ ಹಣಕಾಸು ವರ್ಷದಲ್ಲಿ ಭಾರತ 22 ಲಕ್ಷ ಟನ್ ಈರುಳ್ಳಿ ರಫ್ತು ಮಾಡಿದೆ. ಇದು ಏಷ್ಯಾದ ರಾಷ್ಟ್ರಗಳು ಆಮದು ಮಾಡಿಕೊಳ್ಳುವ ಒಟ್ಟು ಈರುಳ್ಳಿಯ ಪ್ರಮಾಣದ ಅರ್ಧಕ್ಕಿಂತಲೂ ಹೆಚ್ಚು ಎಂದು ವ್ಯಾಪಾರಿಗಳು ಅಂದಾಜಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/business/commerce-news/onion-export-ban-stock-limited-668475.html" target="_blank">ಈರುಳ್ಳಿ ರಫ್ತು ನಿಷೇಧ, ದಾಸ್ತಾನಿಗೆ ಮಿತಿ ವಿಧಿಸಿದ ಕೇಂದ್ರ ಸರ್ಕಾರ</a></p>.<p>ಸದ್ಯದ ಪರಿಸ್ಥಿತಿಯಲ್ಲಿ ಪರ್ಯಾಯ ಸರಕು ಪೂರೈಕೆದಾರರೂ ದರ ಹೆಚ್ಚಿಸುತ್ತಿರುವುದು ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ ಎಂದು ಢಾಕಾದ ವ್ಯಾಪರಿ ಮೊಹಮ್ಮದ್ ಇದ್ರಿಸ್ ತಿಳಿಸಿದ್ದಾರೆ. ಈಗ ಬಾಂಗ್ಲಾದೇಶದ ಮಾರುಕಟ್ಟೆಗಳಲ್ಲಿ 1 ಕೆ.ಜಿ.ಈರುಳ್ಳಿಗೆ 120 ಟಾಕ (ಸುಮಾರು ₹101) ದರ ಇದೆ. ಇಷ್ಟೊಂದು ಏರಿಕೆಯಾಗಿರುವುದು 2013ರ ಡಿಸೆಂಬರ್ ಬಳಿಕ ಇದೇ ಮೊದಲು ಎಂದು ಇದ್ರಿಸ್ ಹೇಳಿದ್ದಾರೆ.</p>.<p>‘ಭಾರತ ಈರುಳ್ಳಿ ರಫ್ತು ನಿಷೇಧಿಸಿರುವುದರಿಂದ ಇತರ ದೇಶಗಳು ಅದರ ಲಾಭ ಪಡೆಯಲು ಪ್ರಯತ್ನಿಸುತ್ತಿವೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶವು ಸರ್ಕಾರಿ ಸ್ವಾಮ್ಯದ ವ್ಯಾಪಾರಿ ನಿಗಮದ ಮೂಲಕ ಸಬ್ಸಿಡಿಸಹಿತ ಈರುಳ್ಳಿ ಮಾರಾಟ ಆರಂಭಿಸಿದೆ.</p>.<p>ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಉಂಟಾಗಿದ್ದ ಪ್ರವಾಹ ಪರಿಸ್ಥಿತಿಯಿಂದ ಈರುಳ್ಳಿ ಪೂರೈಕೆಯಲ್ಲಿ ಅಡಚಣೆ ಉಂಟಾಗಿತ್ತು. ಹೀಗಾಗಿ ಆಗಸ್ಟ್ನಿಂದಲೂ ಈರುಳ್ಳಿ ದರದಲ್ಲಿ ಭಾರಿ ಏರಿಕೆ ಕಂಡುಬರುತ್ತಿದೆ. ಇನ್ನು ಕೆಲವೆಡೆ ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿಕೊಂಡಿರುವುದು ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದೂ ವರದಿಯಾಗಿತ್ತು. ಈ ಎಲ್ಲ ಕಾರಣಗಳಿಂದ ಕೇಂದ್ರ ಸರ್ಕಾರ ಭಾನುವಾರ ಈರುಳ್ಳಿ ರಫ್ತು ನಿಷೇಧಿಸಿತ್ತು. ಜತೆಗೆ,ಮಿತಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>