ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈರುಳ್ಳಿ ರಫ್ತಿಗೆ ಮಾರ್ಚ್‌ 31ರವರೆಗೆ ನಿಷೇಧ: ಕೇಂದ್ರ ಸರ್ಕಾರ

Published 8 ಡಿಸೆಂಬರ್ 2023, 10:51 IST
Last Updated 8 ಡಿಸೆಂಬರ್ 2023, 10:51 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದಲ್ಲಿ ಈರುಳ್ಳಿ ಬೆಲೆ ನಿಯಂತ್ರಿಸಲು ಮತ್ತು ಲಭ್ಯತೆ ಸುಧಾರಿಸಲು 2024ರ ಮಾರ್ಚ್‌ 31ರವರೆಗೂ ರಫ್ತು ಮಾಡುವುದಕ್ಕೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ವಿದೇಶಿ ವ್ಯಾಪಾರಗಳ ಮಹಾನಿರ್ದೇಶನಾಲಯವು ಈ ಕುರಿತು ಪ್ರಕಟಣೆ ಹೊರಡಿಸಿದೆ. ಈ ಆದೇಶ ಹೊರಬೀಳುವುದಕ್ಕೂ ಮುನ್ನ ಆಗಿರುವ ರಫ್ತು ಒಪ್ಪಂದಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.  ದೆಹಲಿಯಲ್ಲಿ ಚಿಲ್ಲರೆ ಮಾರಾಟದ ದರ ಕೆ.ಜಿಗೆ ₹70–80ರವರೆಗೆ ಇದೆ.

ದರ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಈರುಳ್ಳಿ ಬೆಲೆ ಹೆಚ್ಚಿರುವ ರಾಜ್ಯಗಳಲ್ಲಿ ತನ್ನ ಬಳಿ ಇರುವ ಹೆಚ್ಚುವರಿ ದಾಸ್ತಾನನ್ನು ಕೆ.ಜಿಗೆ ₹25ರಂತೆ ಮಾರಾಟ ಮಾಡುತ್ತಿದೆ.

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ 1ರಿಂದ ಆಗಸ್ಟ್‌ 4ರವರೆಗಿನ ಅವಧಿಯಲ್ಲಿ 9.75 ಲಕ್ಷ ಟನ್‌ನಷ್ಟು ಈರುಳ್ಳಿ ರಫ್ತು ಮಾಡಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT