<p><strong>ನವದೆಹಲಿ: </strong>ಹಣದುಬ್ಬರ ನಿಯಂತ್ರಿಸಲು ಕೇಂದ್ರ ಸರ್ಕಾರವು 2022–23ರಲ್ಲಿ ಹೆಚ್ಚುವರಿಯಾಗಿ ₹ 2 ಲಕ್ಷ ಕೋಟಿ ಬಂಡವಾಳ ವೆಚ್ಚ ಮಾಡಲಿದೆ ಎಂದು ಸರ್ಕಾರದ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.</p>.<p>ಎಕ್ಸೈಸ್ ಸುಂಕ ಕಡಿತದಿಂದಾಗಿ ಸರ್ಕಾರದ ವರಮಾನದಲ್ಲಿ ₹ 1 ಲಕ್ಷ ಕೋಟಿ ನಷ್ಟ ಆಗಲಿದೆ ಎಂದು ತಿಳಿಸಿದ್ದಾರೆ.</p>.<p>ಭಾರತದ ಚಿಲ್ಲರೆ ಹಣದುಬ್ಬರವು ಏಪ್ರಿಲ್ನಲ್ಲಿ ಎಂಟು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆ ಆಗಿದೆ. ಸಗಟು ಹಣದುಬ್ಬರ ಕೂಡ ದಾಖಲೆಯ ಮಟ್ಟ ತಲುಪಿದೆ.</p>.<p>ಹಣದುಬ್ಬರ ಕಡಿಮೆ ಮಾಡುವುದರತ್ತ ಹೆಚ್ಚಿನ ಗಮನ ಹರಿಸಲಾಗಿದೆ. ರಷ್ಯಾ–ಉಕ್ರೇನ್ ಬಿಕ್ಕಟ್ಟು ನಿರೀಕ್ಷೆಗಿಂತಲೂ ಹೆಚ್ಚಿನ ಹಾನಿ ಉಂಟುಮಾಡಿದೆ ಎಂದು ಹೆಸರು ಬಹಿರಂಗಪಡಿಸಲು ಬಯಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ರಸಗೊಬ್ಬರ ಸಬ್ಸಿಡಿಗೆ ಇನ್ನೂ ₹ 50 ಸಾವಿರ ಕೋಟಿ ಹೆಚ್ಚುವರಿ ಹಣದ ಅಗತ್ಯ ಇದೆ ಎಂದು ತಿಳಿಸಿದ್ದಾರೆ.</p>.<p>ಒಂದೊಮ್ಮೆ ಕಚ್ಚಾ ತೈಲ ದರ ಏರಿಕೆ ಮುಂದುವರಿದಲ್ಲಿ ಕೇಂದ್ರ ಸರ್ಕಾರವು ಇನ್ನೊಂದು ಸುತ್ತಿನಲ್ಲಿ ತೆರಿಗೆ ಕಡಿತ ಮಾಡಬಹುದು. ಹೀಗಾದಲ್ಲಿ 2022–23ನೇ ಹಣಕಾಸು ವರ್ಷಕ್ಕೆ ವರಮಾನ ನಷ್ಟವು ₹ 1 ಲಕ್ಷ ಕೋಟಿಯಿಂದ ₹ 1.5 ಲಕ್ಷ ಕೋಟಿ ಏರಿಕೆ ಆಗಲಿದೆ.</p>.<p>ಫೆಬ್ರುವರಿಯಲ್ಲಿ ಮಂಡಿಸಿದ ಬಜೆಟ್ ಪ್ರಕಾರ, ಸರ್ಕಾರವು ಪ್ರಸಕ್ತ ಹಣಕಾಸು ವರ್ಷದಲ್ಲಿ ಮಾರುಕಟ್ಟೆಯಿಂದ ₹ 14.31 ಲಕ್ಷ ಕೋಟಿ ಸಾಲ ಪಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಹಣದುಬ್ಬರ ನಿಯಂತ್ರಿಸಲು ಕೇಂದ್ರ ಸರ್ಕಾರವು 2022–23ರಲ್ಲಿ ಹೆಚ್ಚುವರಿಯಾಗಿ ₹ 2 ಲಕ್ಷ ಕೋಟಿ ಬಂಡವಾಳ ವೆಚ್ಚ ಮಾಡಲಿದೆ ಎಂದು ಸರ್ಕಾರದ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.</p>.<p>ಎಕ್ಸೈಸ್ ಸುಂಕ ಕಡಿತದಿಂದಾಗಿ ಸರ್ಕಾರದ ವರಮಾನದಲ್ಲಿ ₹ 1 ಲಕ್ಷ ಕೋಟಿ ನಷ್ಟ ಆಗಲಿದೆ ಎಂದು ತಿಳಿಸಿದ್ದಾರೆ.</p>.<p>ಭಾರತದ ಚಿಲ್ಲರೆ ಹಣದುಬ್ಬರವು ಏಪ್ರಿಲ್ನಲ್ಲಿ ಎಂಟು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆ ಆಗಿದೆ. ಸಗಟು ಹಣದುಬ್ಬರ ಕೂಡ ದಾಖಲೆಯ ಮಟ್ಟ ತಲುಪಿದೆ.</p>.<p>ಹಣದುಬ್ಬರ ಕಡಿಮೆ ಮಾಡುವುದರತ್ತ ಹೆಚ್ಚಿನ ಗಮನ ಹರಿಸಲಾಗಿದೆ. ರಷ್ಯಾ–ಉಕ್ರೇನ್ ಬಿಕ್ಕಟ್ಟು ನಿರೀಕ್ಷೆಗಿಂತಲೂ ಹೆಚ್ಚಿನ ಹಾನಿ ಉಂಟುಮಾಡಿದೆ ಎಂದು ಹೆಸರು ಬಹಿರಂಗಪಡಿಸಲು ಬಯಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ರಸಗೊಬ್ಬರ ಸಬ್ಸಿಡಿಗೆ ಇನ್ನೂ ₹ 50 ಸಾವಿರ ಕೋಟಿ ಹೆಚ್ಚುವರಿ ಹಣದ ಅಗತ್ಯ ಇದೆ ಎಂದು ತಿಳಿಸಿದ್ದಾರೆ.</p>.<p>ಒಂದೊಮ್ಮೆ ಕಚ್ಚಾ ತೈಲ ದರ ಏರಿಕೆ ಮುಂದುವರಿದಲ್ಲಿ ಕೇಂದ್ರ ಸರ್ಕಾರವು ಇನ್ನೊಂದು ಸುತ್ತಿನಲ್ಲಿ ತೆರಿಗೆ ಕಡಿತ ಮಾಡಬಹುದು. ಹೀಗಾದಲ್ಲಿ 2022–23ನೇ ಹಣಕಾಸು ವರ್ಷಕ್ಕೆ ವರಮಾನ ನಷ್ಟವು ₹ 1 ಲಕ್ಷ ಕೋಟಿಯಿಂದ ₹ 1.5 ಲಕ್ಷ ಕೋಟಿ ಏರಿಕೆ ಆಗಲಿದೆ.</p>.<p>ಫೆಬ್ರುವರಿಯಲ್ಲಿ ಮಂಡಿಸಿದ ಬಜೆಟ್ ಪ್ರಕಾರ, ಸರ್ಕಾರವು ಪ್ರಸಕ್ತ ಹಣಕಾಸು ವರ್ಷದಲ್ಲಿ ಮಾರುಕಟ್ಟೆಯಿಂದ ₹ 14.31 ಲಕ್ಷ ಕೋಟಿ ಸಾಲ ಪಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>