ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಚ್ಚಾ ತಾಳೆ ಎಣ್ಣೆ ಆಮದು ಸುಂಕ ಕಡಿತಗೊಳಿಸಿದ ಕೇಂದ್ರ

Last Updated 14 ಫೆಬ್ರುವರಿ 2022, 2:54 IST
ಅಕ್ಷರ ಗಾತ್ರ

ನವದೆಹಲಿ: ದೇಶಿ ಗ್ರಾಹಕರಿಗೆ ಮತ್ತು ಸಂಸ್ಕರಣಾಗಾರರಿಗೆ ನೆರವಾಗುವ ಉದ್ದೇಶದೊಂದಿಗೆ ಕಚ್ಚಾ ತಾಳೆ ಎಣ್ಣೆಯ ಆಮದು ಸುಂಕವನ್ನು ಶೇ 7.5ರಿಂದ ಶೇ 5ಕ್ಕೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ತಾಳೆ ಎಣ್ಣೆ ಆಮದಿನ ಮೇಲೆ ವಿಧಿಸಲಾಗುತ್ತಿರುವ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ತೆರಿಗೆಯಲ್ಲಿ (ಎಐಡಿಸಿ) ಕಡಿತ ಮಾಡಲಾಗಿದೆ. ಇದರಿಂದ ಕಚ್ಚಾ ತಾಳೆ ಎಣ್ಣೆ ಮತ್ತು ಸಂಸ್ಕರಿತ ತಾಳೆ ಎಣ್ಣೆ ನಡುವಣ ತೆರಿಗೆ ಅಂತರ ಹೆಚ್ಚಾಗಲಿದೆ. ದೇಶದ ಸಂಸ್ಕರಣಾಗಾರರಿಗೆ ಕಡಿಮೆ ಬೆಲೆಗೆ ಕಚ್ಚಾ ತಾಳೆ ಎಣ್ಣೆ ಆಮದು ಮಾಡಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಂಕ ಕಡಿತ ನಿರ್ಧಾರವು ಭಾನುವಾರದಿಂದಲೇ ಜಾರಿಗೆ ಬಂದಿದೆ.

ಎಐಡಿಸಿ ಕಡಿತದ ಬಳಿಕ ಕಚ್ಚಾ ತಾಳೆ ಎಣ್ಣೆ ಮತ್ತು ಸಂಸ್ಕರಿತ ತಾಳೆ ಎಣ್ಣೆ ಆಮದು ಸುಂಕದ ನಡುವಣ ಅಂತರ ಶೇ 8.25 ತಲುಪಿದೆ. ಇದರಿಂದ ಸಂಸ್ಕರಣಾಗಾರರಿಗೆ ಪ್ರಯೋಜನವಾಗಲಿದೆ. ಈ ಅಂತರವನ್ನು ಶೇ 11ರ ವರೆಗೆ ಹೆಚ್ಚಿಸಬೇಕಿದೆ ಎಂದು ‘ಸಾಲ್ವೆಂಟ್ ಎಕ್ಸ್‌ಟ್ರಾಕ್ಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಸ್‌ಇಎ)’ದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ವಿ. ಮೆಹ್ತಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT