ಎಐಡಿಸಿ ಕಡಿತದ ಬಳಿಕ ಕಚ್ಚಾ ತಾಳೆ ಎಣ್ಣೆ ಮತ್ತು ಸಂಸ್ಕರಿತ ತಾಳೆ ಎಣ್ಣೆ ಆಮದು ಸುಂಕದ ನಡುವಣ ಅಂತರ ಶೇ 8.25 ತಲುಪಿದೆ. ಇದರಿಂದ ಸಂಸ್ಕರಣಾಗಾರರಿಗೆ ಪ್ರಯೋಜನವಾಗಲಿದೆ. ಈ ಅಂತರವನ್ನು ಶೇ 11ರ ವರೆಗೆ ಹೆಚ್ಚಿಸಬೇಕಿದೆ ಎಂದು ‘ಸಾಲ್ವೆಂಟ್ ಎಕ್ಸ್ಟ್ರಾಕ್ಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಸ್ಇಎ)’ದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ವಿ. ಮೆಹ್ತಾ ಹೇಳಿದ್ದಾರೆ.