ಮಂಗಳವಾರ, ಮಾರ್ಚ್ 28, 2023
31 °C
ಆರ್‌ಬಿಐ ಹಣಕಾಸು ನೀತಿ ಸಮಿತಿ ಸದಸ್ಯ ಜಯಂತ್‌ ವರ್ಮ

ಖರೀದಿ ಸಾಮರ್ಥ್ಯ, ಹೂಡಿಕೆ ಹೆಚ್ಚಬೇಕಿದೆ: ಜಯಂತ್‌ ವರ್ಮ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜನರ ಖರೀದಿ ಸಾಮರ್ಥ್ಯ ಮತ್ತು ಬಂಡವಾಳ ಹೂಡಿಕೆಯು ಇನ್ನೂ ಚೇತರಿಸಿಕೊಂಡಿಲ್ಲದ ಕಾರಣ, ದೇಶದ ಆರ್ಥಿಕ ಬೆಳವಣಿಗೆಯು ಸದ್ಯ ಬಹಳ ದುರ್ಬಲವಾದ ಸ್ಥಿತಿಯಲ್ಲಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸದಸ್ಯ ಜಯಂತ್‌ ಆರ್‌. ವರ್ಮ ಹೇಳಿದ್ದಾರೆ.

ಆರ್ಥಿಕತೆಗೆ ಎಲ್ಲ ರೀತಿಯ ಬೆಂಬಲದ ಅಗತ್ಯ ಇದೆ ಎಂದು ಅವರು ಹೇಳಿದ್ದಾರೆ.

ರಫ್ತು, ಸರ್ಕಾರದ ವೆಚ್ಚ, ಬಂಡವಾಳ ಹೂಡಿಕೆ ಮತ್ತು ಜನರ ಖರೀದಿ ಸಾಮರ್ಥ್ಯವು ದೇಶದ ಆರ್ಥಿಕ ಬೆಳವಣಿಗೆಗೆ ಪ್ರಮುಖವಾದ ನಾಲ್ಕು ಚಾಲಕ ಶಕ್ತಿಗಳಾಗಿವೆ. ಕೋವಿಡ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ರಫ್ತು ಮತ್ತು ಸರ್ಕಾರದ ವೆಚ್ಚವು ಆರ್ಥಿಕತೆಗೆ ಬೆಂಬಲ ನೀಡಿದೆ. ಆದರೆ, ಬಂಡವಾಳ ಹೂಡಿಕೆ ಮತ್ತು ಜನರ ಖರೀದಿ ಸಾಮರ್ಥ್ಯವು ಚೇತರಿಕೆ ಕಂಡುಕೊಳ್ಳಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಜಾಗತಿಕ ಆರ್ಥಿಕತೆಯು ಮಂದಗತಿಯಲ್ಲಿ ಇರುವುದರಿಂದ ರಫ್ತು ವಹಿವಾಟು ದೇಶದ ಆರ್ಥಿಕ ಬೆಳವಣಿಗೆಯ ಪ್ರಮುಖ ಚಾಲಕ ಶಕ್ತಿ ಆಗಿಲ್ಲ. ವಿತ್ತೀಯ ಮಿತಿಗಳಿಂದಾಗಿ ಸರ್ಕಾರದ ವೆಚ್ಚವು ಸೀಮಿತಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಬೇರೆ ದೇಶಗಳಂತೆ ಭಾರತವು ಆರ್ಥಿಕ ಹಿಂಜರಿತದ ಅಪಾಯವನ್ನು ಎದುರಿಸುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು