<p><strong>ದಾವೋಸ್</strong>: ಮುಂದಿನ ಐದು ವರ್ಷಗಳವರೆಗೆ ಭಾರತದ ಆರ್ಥಿಕ ಬೆಳವಣಿಗೆ ದರವು ಶೇಕಡ 6–8ರ ಮಟ್ಟದಲ್ಲಿ ಇರಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಬುಧವಾರ ಹೇಳಿದ್ದಾರೆ.</p>.<p>ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದ ಕಾರ್ಯಕ್ರಮವೊಂದರಲ್ಲಿ ಮಾತಮಾಡಿದ ಅವರು, ಅನುಮತಿಗಳನ್ನು ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸುವುದರ ಪ್ರಾಮುಖ್ಯವನ್ನು ವಿವರಿಸಿದ್ದಾರೆ. ಭಾರತದಲ್ಲಿ ಒಂದು ದೂರಸಂಪರ್ಕ ಟವರ್ ಅಳವಡಿಕೆಗೆ ಈ ಮೊದಲು ಸರಾಸರಿ 270 ದಿನಗಳು ಬೇಕಾಗುತ್ತಿದ್ದವು, ಅದು ಈಗ ಏಳು ದಿನಗಳಿಗೆ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.</p>.<p class="title">ಉದ್ದೇಶ ಹಾಗೂ ಕ್ರಿಯೆಯ ನಡುವಿನ ಅಂತರವನ್ನು ತಗ್ಗಿಸಬೇಕು. ಅಧಿಕಾರಶಾಹಿ ವ್ಯವಸ್ಥೆಯು ರಾಜಕೀಯ ಶಕ್ತಿಯ ಜೊತೆ ಹೊಂದಿಕೊಳ್ಳುವಂತೆ ರಾಜಕೀಯ ನಾಯಕರು ಖಾತರಿಪಡಿಸಿಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.</p>.<p class="title">ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತೀಯ ಕೈಗಾರಿಕಾ ಮಹಾಸಂಘದ (ಸಿಐಐ) ಅಧ್ಯಕ್ಷ ರಾಜೀವ್ ಮೆಮಾನಿ, ‘ಭಾರತದಲ್ಲಿ ತಲಾವಾರು ಆದಾಯವು ಬಹಳ ಕಡಿಮೆ ಇದೆ. ಇದನ್ನು 2047ರ ವೇಳೆಗೆ ಐದು ಪಟ್ಟು ಹೆಚ್ಚಿಸಬೇಕು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವೋಸ್</strong>: ಮುಂದಿನ ಐದು ವರ್ಷಗಳವರೆಗೆ ಭಾರತದ ಆರ್ಥಿಕ ಬೆಳವಣಿಗೆ ದರವು ಶೇಕಡ 6–8ರ ಮಟ್ಟದಲ್ಲಿ ಇರಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಬುಧವಾರ ಹೇಳಿದ್ದಾರೆ.</p>.<p>ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದ ಕಾರ್ಯಕ್ರಮವೊಂದರಲ್ಲಿ ಮಾತಮಾಡಿದ ಅವರು, ಅನುಮತಿಗಳನ್ನು ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸುವುದರ ಪ್ರಾಮುಖ್ಯವನ್ನು ವಿವರಿಸಿದ್ದಾರೆ. ಭಾರತದಲ್ಲಿ ಒಂದು ದೂರಸಂಪರ್ಕ ಟವರ್ ಅಳವಡಿಕೆಗೆ ಈ ಮೊದಲು ಸರಾಸರಿ 270 ದಿನಗಳು ಬೇಕಾಗುತ್ತಿದ್ದವು, ಅದು ಈಗ ಏಳು ದಿನಗಳಿಗೆ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.</p>.<p class="title">ಉದ್ದೇಶ ಹಾಗೂ ಕ್ರಿಯೆಯ ನಡುವಿನ ಅಂತರವನ್ನು ತಗ್ಗಿಸಬೇಕು. ಅಧಿಕಾರಶಾಹಿ ವ್ಯವಸ್ಥೆಯು ರಾಜಕೀಯ ಶಕ್ತಿಯ ಜೊತೆ ಹೊಂದಿಕೊಳ್ಳುವಂತೆ ರಾಜಕೀಯ ನಾಯಕರು ಖಾತರಿಪಡಿಸಿಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.</p>.<p class="title">ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತೀಯ ಕೈಗಾರಿಕಾ ಮಹಾಸಂಘದ (ಸಿಐಐ) ಅಧ್ಯಕ್ಷ ರಾಜೀವ್ ಮೆಮಾನಿ, ‘ಭಾರತದಲ್ಲಿ ತಲಾವಾರು ಆದಾಯವು ಬಹಳ ಕಡಿಮೆ ಇದೆ. ಇದನ್ನು 2047ರ ವೇಳೆಗೆ ಐದು ಪಟ್ಟು ಹೆಚ್ಚಿಸಬೇಕು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>