<p><strong>ನವದೆಹಲಿ:</strong> ದೇಶದಲ್ಲಿ ಬೆಲೆ ಏರಿಕೆ ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಮೇ 13ರಂದು ಗೋಧಿ ರಫ್ತನ್ನು ನಿಷೇಧಿಸಿತ್ತು. ಆದಾಗ್ಯೂ, ಆ ಬಳಿಕ ಇಲ್ಲಿಯವರೆಗೆ 18 ಲಕ್ಷ ಟನ್ ಗೋಧಿ ರಫ್ತು ಮಾಡಲಾಗಿದೆ.</p>.<p>ಈ ಕುರಿತು ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದಾರೆ.</p>.<p>‘ಜಾಗತಿಕ ಆಹಾರ ಭದ್ರತೆಗಾಗಿ ಒಗ್ಗೂಡುವಿಕೆ’ ಎಂಬ ವಿಷಯದಲ್ಲಿ ಜರ್ಮನಿಯ ಬರ್ಲಿನ್ನಲ್ಲಿ ನಡೆದ ಸಚಿವರ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p><a href="https://www.prajavani.net/business/commerce-news/ease-of-doing-business-states-ranking-likely-to-be-released-on-jun-30-949048.html" itemprop="url">ಸುಲಲಿತ ವಹಿವಾಟು: ಜೂನ್ 30ಕ್ಕೆ ರಾಜ್ಯಗಳ ಶ್ರೇಯಾಂಕ ವರದಿ </a></p>.<p>ಮಾನವೀಯತೆಯ ಆಧಾರದಲ್ಲಿ ಅಫ್ಗಾನಿಸ್ತಾನಕ್ಕೆ 50,000 ಟನ್ ಗೋಧಿ ಕಳುಹಿಸಿಕೊಡಲು ನಿರ್ಧರಿಸಲಾಗಿತ್ತು. ಈ ಪೈಕಿ 33,000 ಟನ್ ಗೋಧಿಯನ್ನು ಈಗಾಗಲೇ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>‘138 ಕೋಟಿ ಜನರನ್ನು ಪೋಷಿಸಬೇಕಾದ ಮಹತ್ವದ ಜವಾಬ್ದಾರಿ ನಡುವೆಯೂ ಭಾರತವು ಸದಾ ಜಾಗತಿಕ ಅಗತ್ಯತೆಗಳನ್ನು ಗಣನೆಗೆ ತೆಗೆದುಕೊಂಡಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಬೆಲೆ ಏರಿಕೆ ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಮೇ 13ರಂದು ಗೋಧಿ ರಫ್ತನ್ನು ನಿಷೇಧಿಸಿತ್ತು. ಆದಾಗ್ಯೂ, ಆ ಬಳಿಕ ಇಲ್ಲಿಯವರೆಗೆ 18 ಲಕ್ಷ ಟನ್ ಗೋಧಿ ರಫ್ತು ಮಾಡಲಾಗಿದೆ.</p>.<p>ಈ ಕುರಿತು ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದಾರೆ.</p>.<p>‘ಜಾಗತಿಕ ಆಹಾರ ಭದ್ರತೆಗಾಗಿ ಒಗ್ಗೂಡುವಿಕೆ’ ಎಂಬ ವಿಷಯದಲ್ಲಿ ಜರ್ಮನಿಯ ಬರ್ಲಿನ್ನಲ್ಲಿ ನಡೆದ ಸಚಿವರ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p><a href="https://www.prajavani.net/business/commerce-news/ease-of-doing-business-states-ranking-likely-to-be-released-on-jun-30-949048.html" itemprop="url">ಸುಲಲಿತ ವಹಿವಾಟು: ಜೂನ್ 30ಕ್ಕೆ ರಾಜ್ಯಗಳ ಶ್ರೇಯಾಂಕ ವರದಿ </a></p>.<p>ಮಾನವೀಯತೆಯ ಆಧಾರದಲ್ಲಿ ಅಫ್ಗಾನಿಸ್ತಾನಕ್ಕೆ 50,000 ಟನ್ ಗೋಧಿ ಕಳುಹಿಸಿಕೊಡಲು ನಿರ್ಧರಿಸಲಾಗಿತ್ತು. ಈ ಪೈಕಿ 33,000 ಟನ್ ಗೋಧಿಯನ್ನು ಈಗಾಗಲೇ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>‘138 ಕೋಟಿ ಜನರನ್ನು ಪೋಷಿಸಬೇಕಾದ ಮಹತ್ವದ ಜವಾಬ್ದಾರಿ ನಡುವೆಯೂ ಭಾರತವು ಸದಾ ಜಾಗತಿಕ ಅಗತ್ಯತೆಗಳನ್ನು ಗಣನೆಗೆ ತೆಗೆದುಕೊಂಡಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>