<p><strong>ನ್ಯೂಯಾರ್ಕ್/ ವಾಷಿಂಗ್ಟನ್:</strong> ಪ್ರಸಕ್ತ ಮತ್ತು ಮುಂದಿನ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪಾದನೆ (ಜಿಡಿಪಿ) ಶೇ 6.4ರಷ್ಟು ಬೆಳವಣಿಗೆ ಕಾಣುವ ನಿರೀಕ್ಷೆಯಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಅಂದಾಜಿಸಿದೆ. </p>.<p>ಜನರು ಸರಕು ಮತ್ತು ಸೇವೆಗಳನ್ನು ಪಡೆದುಕೊಳ್ಳುವುದರ ಮೇಲೆ ವ್ಯಯಿಸುವ ಪ್ರಮಾಣ ಹೆಚ್ಚಳವಾಗಿದೆ. ಅಲ್ಲದೆ, ಸರ್ಕಾರಗಳು ಹೂಡಿಕೆ ಹೆಚ್ಚಳ ಮಾಡಿವೆ. ಇವು ಬೆಳವಣಿಗೆಗೆ ನೆರವಾಗಿವೆ ಎಂದು ಐಎಂಎಫ್ನ ಸಂಶೋಧನಾ ವಿಭಾಗದ ಮುಖ್ಯಸ್ಥೆ ಡೆನಿಜ್ ಇಗನ್ ಹೇಳಿದ್ದಾರೆ.</p>.<p>ಭಾರತವು, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕಾರ್ಮಿಕರಿಗೆ ಮರು ಕೌಶಲ ನೀಡಲಾಗುತ್ತಿದೆ. ಮೂಲಸೌಕರ್ಯ ವಲಯದಲ್ಲಿ ನಿರಂತರವಾಗಿ ಹೂಡಿಕೆ ಮಾಡುತ್ತಿದ್ದು, ವ್ಯಾಪಾರಕ್ಕಿರುವ ನಿರ್ಬಂಧಗಳನ್ನು ತೆಗೆಯುತ್ತಿದೆ ಎಂದು ತಿಳಿಸಿದ್ದಾರೆ.</p>.<p>ಆದರೂ, ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡುವ ಅಗತ್ಯವಿದೆ. ಭೂ ಸುಧಾರಣೆಗೆ ಒತ್ತು ನೀಡಬೇಕಿದೆ ಮತ್ತು ಸಾಮಾಜಿಕ ಭದ್ರತೆ ಹೆಚ್ಚಿಸಬೇಕಿದೆ. ಉತ್ತಮ ವ್ಯವಹಾರ ನಡೆಸಲು ವಿಳಂಬ ಧೋರಣೆಯನ್ನು ಕಡಿಮೆ ಮಾಡಬೇಕಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್/ ವಾಷಿಂಗ್ಟನ್:</strong> ಪ್ರಸಕ್ತ ಮತ್ತು ಮುಂದಿನ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪಾದನೆ (ಜಿಡಿಪಿ) ಶೇ 6.4ರಷ್ಟು ಬೆಳವಣಿಗೆ ಕಾಣುವ ನಿರೀಕ್ಷೆಯಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಅಂದಾಜಿಸಿದೆ. </p>.<p>ಜನರು ಸರಕು ಮತ್ತು ಸೇವೆಗಳನ್ನು ಪಡೆದುಕೊಳ್ಳುವುದರ ಮೇಲೆ ವ್ಯಯಿಸುವ ಪ್ರಮಾಣ ಹೆಚ್ಚಳವಾಗಿದೆ. ಅಲ್ಲದೆ, ಸರ್ಕಾರಗಳು ಹೂಡಿಕೆ ಹೆಚ್ಚಳ ಮಾಡಿವೆ. ಇವು ಬೆಳವಣಿಗೆಗೆ ನೆರವಾಗಿವೆ ಎಂದು ಐಎಂಎಫ್ನ ಸಂಶೋಧನಾ ವಿಭಾಗದ ಮುಖ್ಯಸ್ಥೆ ಡೆನಿಜ್ ಇಗನ್ ಹೇಳಿದ್ದಾರೆ.</p>.<p>ಭಾರತವು, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕಾರ್ಮಿಕರಿಗೆ ಮರು ಕೌಶಲ ನೀಡಲಾಗುತ್ತಿದೆ. ಮೂಲಸೌಕರ್ಯ ವಲಯದಲ್ಲಿ ನಿರಂತರವಾಗಿ ಹೂಡಿಕೆ ಮಾಡುತ್ತಿದ್ದು, ವ್ಯಾಪಾರಕ್ಕಿರುವ ನಿರ್ಬಂಧಗಳನ್ನು ತೆಗೆಯುತ್ತಿದೆ ಎಂದು ತಿಳಿಸಿದ್ದಾರೆ.</p>.<p>ಆದರೂ, ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡುವ ಅಗತ್ಯವಿದೆ. ಭೂ ಸುಧಾರಣೆಗೆ ಒತ್ತು ನೀಡಬೇಕಿದೆ ಮತ್ತು ಸಾಮಾಜಿಕ ಭದ್ರತೆ ಹೆಚ್ಚಿಸಬೇಕಿದೆ. ಉತ್ತಮ ವ್ಯವಹಾರ ನಡೆಸಲು ವಿಳಂಬ ಧೋರಣೆಯನ್ನು ಕಡಿಮೆ ಮಾಡಬೇಕಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>