<p><strong>ನವದೆಹಲಿ</strong>: ದೇಶದ ಜನಸಾಮಾನ್ಯರು ಅತಿಯಾದ ತೆರಿಗೆ ಹೊರೆಯಿಂದ ಪರಿತಪಿಸುತ್ತಿದ್ದು, ಅದನ್ನು ಇಳಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ ಕ್ರಮಕೈಗೊಳ್ಳಬೇಕಿದೆ ಎಂದು ಭಾರತೀಯ ಕೈಗಾರಿಕಾ ಒಕ್ಕೂಟಗಳು ಒತ್ತಾಯಿಸಿವೆ. </p>.<p>ಗುರುವಾರ ನಡೆದ 2024–25ನೇ ಆರ್ಥಿಕ ಸಾಲಿನ ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಕೈಗಾರಿಕಾ ವಲಯದ ಮುಖಂಡರು ಮತ್ತು ಒಕ್ಕೂಟದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<p>ಸರ್ಕಾರವು ಬಂಡವಾಳ ವೆಚ್ಚವನ್ನು ಹೆಚ್ಚಿಸಬೇಕು. ಆಹಾರ ಹಣದುಬ್ಬರದ ಇಳಿಕೆಗೆ ಸಂಬಂಧಿಸಿದಂತೆ ಕೈಗೊಳ್ಳುವ ಕ್ರಮಗಳ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪಿಸಬೇಕಿದೆ ಎಂದು ಸಲಹೆ ಮುಂದಿಟ್ಟರು.</p>.<p>ದೇಶದ ಆರ್ಥಿಕತೆಗೆ ಮತ್ತಷ್ಟು ವೇಗ ಸಿಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರವು ಮೂಲ ಸೌಕರ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ ಎಂದು ಕೋರಿದರು. </p>.<p>ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳು (ಎಂಎಸ್ಎಂಇ) ದೇಶದ ಆರ್ಥಿಕತೆಯ ಬೆನ್ನೆಲುಬಾಗಿವೆ. ಈ ವಲಯದಲ್ಲಿ ಅತಿಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ. ಹಾಗಾಗಿ, ವಲಯದ ಬಲವರ್ಧನೆಗೆ ಒತ್ತು ನೀಡಬೇಕಿದೆ ಎಂದು ಸಲಹೆ ನೀಡಿದರು.</p>.<p>ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಅಧ್ಯಕ್ಷ ಸಂಜೀವ್ ಪುರಿ, ‘ತೆರಿಗೆ ಸ್ಲ್ಯಾಬ್ಗಳಲ್ಲಿ ಬದಲಾವಣೆ ಮಾಡಬೇಕು. ಉತ್ಪಾದನೆ ಆಧಾರಿತ ಉತ್ತೇಜನ (ಪಿಎಲ್ಐ) ಯೋಜನೆಯನ್ನು ಮತ್ತಷ್ಟು ಸುಗಮಗೊಳಿಸಬೇಕು. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಎಫ್ಐಸಿಸಿಐ ಅಧ್ಯಕ್ಷ ಸುಭ್ರಕಾಂತ್ ಪಾಂಡ ಮಾತನಾಡಿ, ‘ತೆರಿಗೆ ಪದ್ಧತಿಯನ್ನು ಸರಳೀಕರಿಬೇಕು. ಹಣದುಬ್ಬರ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಸರ್ಕಾರದ ಬಂಡವಾಳ ವೆಚ್ಚವನ್ನು ಹೆಚ್ಚಿಸಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದ ಜನಸಾಮಾನ್ಯರು ಅತಿಯಾದ ತೆರಿಗೆ ಹೊರೆಯಿಂದ ಪರಿತಪಿಸುತ್ತಿದ್ದು, ಅದನ್ನು ಇಳಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ ಕ್ರಮಕೈಗೊಳ್ಳಬೇಕಿದೆ ಎಂದು ಭಾರತೀಯ ಕೈಗಾರಿಕಾ ಒಕ್ಕೂಟಗಳು ಒತ್ತಾಯಿಸಿವೆ. </p>.<p>ಗುರುವಾರ ನಡೆದ 2024–25ನೇ ಆರ್ಥಿಕ ಸಾಲಿನ ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಕೈಗಾರಿಕಾ ವಲಯದ ಮುಖಂಡರು ಮತ್ತು ಒಕ್ಕೂಟದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<p>ಸರ್ಕಾರವು ಬಂಡವಾಳ ವೆಚ್ಚವನ್ನು ಹೆಚ್ಚಿಸಬೇಕು. ಆಹಾರ ಹಣದುಬ್ಬರದ ಇಳಿಕೆಗೆ ಸಂಬಂಧಿಸಿದಂತೆ ಕೈಗೊಳ್ಳುವ ಕ್ರಮಗಳ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪಿಸಬೇಕಿದೆ ಎಂದು ಸಲಹೆ ಮುಂದಿಟ್ಟರು.</p>.<p>ದೇಶದ ಆರ್ಥಿಕತೆಗೆ ಮತ್ತಷ್ಟು ವೇಗ ಸಿಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರವು ಮೂಲ ಸೌಕರ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ ಎಂದು ಕೋರಿದರು. </p>.<p>ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳು (ಎಂಎಸ್ಎಂಇ) ದೇಶದ ಆರ್ಥಿಕತೆಯ ಬೆನ್ನೆಲುಬಾಗಿವೆ. ಈ ವಲಯದಲ್ಲಿ ಅತಿಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ. ಹಾಗಾಗಿ, ವಲಯದ ಬಲವರ್ಧನೆಗೆ ಒತ್ತು ನೀಡಬೇಕಿದೆ ಎಂದು ಸಲಹೆ ನೀಡಿದರು.</p>.<p>ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಅಧ್ಯಕ್ಷ ಸಂಜೀವ್ ಪುರಿ, ‘ತೆರಿಗೆ ಸ್ಲ್ಯಾಬ್ಗಳಲ್ಲಿ ಬದಲಾವಣೆ ಮಾಡಬೇಕು. ಉತ್ಪಾದನೆ ಆಧಾರಿತ ಉತ್ತೇಜನ (ಪಿಎಲ್ಐ) ಯೋಜನೆಯನ್ನು ಮತ್ತಷ್ಟು ಸುಗಮಗೊಳಿಸಬೇಕು. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಎಫ್ಐಸಿಸಿಐ ಅಧ್ಯಕ್ಷ ಸುಭ್ರಕಾಂತ್ ಪಾಂಡ ಮಾತನಾಡಿ, ‘ತೆರಿಗೆ ಪದ್ಧತಿಯನ್ನು ಸರಳೀಕರಿಬೇಕು. ಹಣದುಬ್ಬರ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಸರ್ಕಾರದ ಬಂಡವಾಳ ವೆಚ್ಚವನ್ನು ಹೆಚ್ಚಿಸಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>