<p><strong>ಪುಣೆ</strong> : ಭಾರತವು ಸೆಮಿಕಂಡಕ್ಟರ್ ಚಿಪ್ಗಳ ತಯಾರಿಕೆಯಲ್ಲಿ ದಾಪುಗಾಲು ಇಟ್ಟಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.</p>.<p>ಪುಣೆಯಲ್ಲಿ ಗುರುವಾರ ಆಯೋಜಿಸಿದ್ದ ‘ವಿಕಸಿತ ಭಾರತ ರಾಯಭಾರಿ ಸಭೆ’ಯಲ್ಲಿ ಮಾತನಾಡಿದ ಅವರು, ಈ ವಲಯದಲ್ಲಿ ಬಂಡವಾಳ ಹೂಡಲು ಜಾಗತಿಕ ಹೂಡಿಕೆದಾರರು ಉತ್ಸಾಹ ತೋರುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ₹2.50 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಸರ್ಕಾರವು ಪ್ರಸ್ತಾವಗಳನ್ನು ಸ್ವೀಕರಿಸಿದೆ ಎಂದರು.</p>.<p>2022ರಲ್ಲಿ ಸೆಮಿಕಂಡಕ್ಟರ್ ನೀತಿಯ ಜಾರಿಯಿಂದಾಗಿ ದೇಶವು ಜಾಗತಿಕ ಹೂಡಿಕೆದಾರರನ್ನು ಆಕರ್ಷಿಸಿತು. ಇದರಿಂದ ದೇಶವು ಸೆಮಿಕಂಡಕ್ಟರ್ ವಲಯದಲ್ಲಿ ವೇಗವಾಗಿ ಬೆಳವಣಿಗೆ ಸಾಧಿಸುತ್ತಿದೆ ಎಂದು ಹೇಳಿದರು.</p>.<p>ಕಳೆದ 10 ವರ್ಷದಲ್ಲಿ ದೇಶವು ಜಗತ್ತಿನ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಹೇಳಿದರು.</p>.<p>ಸರ್ಕಾರ ನೀತಿ–ನಿಯಮಗಳು, ಪಾರದರ್ಶಕ ಆಡಳಿತದಿಂದ ಈ ಗುರಿ ಸಾಧನೆಯಾಗಿದೆ. ಮುಂದಿನ ಕೆಲವೇ ವರ್ಷಗಳಲ್ಲಿ ‘ವಿಕಸಿತ ಭಾರತ’ ನಿರ್ಮಾಣ ಮಾಡುವುದೇ ಪ್ರಧಾನಿ ಮೋದಿ ಅವರ ಗುರಿಯಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ</strong> : ಭಾರತವು ಸೆಮಿಕಂಡಕ್ಟರ್ ಚಿಪ್ಗಳ ತಯಾರಿಕೆಯಲ್ಲಿ ದಾಪುಗಾಲು ಇಟ್ಟಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.</p>.<p>ಪುಣೆಯಲ್ಲಿ ಗುರುವಾರ ಆಯೋಜಿಸಿದ್ದ ‘ವಿಕಸಿತ ಭಾರತ ರಾಯಭಾರಿ ಸಭೆ’ಯಲ್ಲಿ ಮಾತನಾಡಿದ ಅವರು, ಈ ವಲಯದಲ್ಲಿ ಬಂಡವಾಳ ಹೂಡಲು ಜಾಗತಿಕ ಹೂಡಿಕೆದಾರರು ಉತ್ಸಾಹ ತೋರುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ₹2.50 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಸರ್ಕಾರವು ಪ್ರಸ್ತಾವಗಳನ್ನು ಸ್ವೀಕರಿಸಿದೆ ಎಂದರು.</p>.<p>2022ರಲ್ಲಿ ಸೆಮಿಕಂಡಕ್ಟರ್ ನೀತಿಯ ಜಾರಿಯಿಂದಾಗಿ ದೇಶವು ಜಾಗತಿಕ ಹೂಡಿಕೆದಾರರನ್ನು ಆಕರ್ಷಿಸಿತು. ಇದರಿಂದ ದೇಶವು ಸೆಮಿಕಂಡಕ್ಟರ್ ವಲಯದಲ್ಲಿ ವೇಗವಾಗಿ ಬೆಳವಣಿಗೆ ಸಾಧಿಸುತ್ತಿದೆ ಎಂದು ಹೇಳಿದರು.</p>.<p>ಕಳೆದ 10 ವರ್ಷದಲ್ಲಿ ದೇಶವು ಜಗತ್ತಿನ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಹೇಳಿದರು.</p>.<p>ಸರ್ಕಾರ ನೀತಿ–ನಿಯಮಗಳು, ಪಾರದರ್ಶಕ ಆಡಳಿತದಿಂದ ಈ ಗುರಿ ಸಾಧನೆಯಾಗಿದೆ. ಮುಂದಿನ ಕೆಲವೇ ವರ್ಷಗಳಲ್ಲಿ ‘ವಿಕಸಿತ ಭಾರತ’ ನಿರ್ಮಾಣ ಮಾಡುವುದೇ ಪ್ರಧಾನಿ ಮೋದಿ ಅವರ ಗುರಿಯಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>