ಶ್ರೀಮತಿ ಇಂದಿರಾಗಾಂಧಿ ಕಾಲೇಜಿನಲ್ಲಿ ಸ್ಥಾಪಿಸಲಾದ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಮಾಡಿ ಮಾತನಾಡಿದ ಅವರು, ‘ಆರ್ಥಿಕ ವಿಚಾರಗಳಲ್ಲಿ ಭಾರತ ಆತ್ಮನಿರ್ಭರತೆಯನ್ನು ಸಾಧಿಸಬೇಕಿದೆ. ಇದೇ ಮುಂದೆ ಆರ್ಥಿಕ ಶಕ್ತಿಯಾಗಲಿದೆ. ದೇಶವು ಜಾಗತಿಕ ಆರ್ಥಿಕತೆಯಲ್ಲಿ 10ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿದೆ. ಕೆಲವೇ ವರ್ಷಗಳಲ್ಲಿ ಮೂರನೇ ಸ್ಥಾನ ಪಡೆಯಲಿದೆ’ ಎಂದು ಹೇಳಿದರು.