ನವದೆಹಲಿ: ಉಕ್ರೇನ್ ಬಿಕ್ಕಟ್ಟಿನಿಂದಾಗಿ ರಫ್ತು ವಹಿವಾಟಿನ ಮೇಲೆ ದುಷ್ಪರಿಣಾಮ ಉಂಟಾಗಬಹುದು ಎನ್ನುವ ಆತಂಕವು ಭಾರತಕ್ಕೆ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ.
ಬಿಕ್ಕಟ್ಟಿನಿಂದಾಗಿ ಪಾವತಿ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾಗಿವೆಯೇ ಎನ್ನುವ ಬಗ್ಗೆ ಉದ್ಯಮ ವಲಯದ ಪ್ರತಿಕ್ರಿಯೆಯನ್ನೂ ಅವರು ಹೇಳಿದ್ದಾರೆ. ಔಷಧವಸ್ತುಗಳ ರಫ್ತು ಮತ್ತು ರಾಸಾಯನಿಕ ಆಮದು ಕುರಿತು ಕಳವಳ ಇರುವುದಾಗಿ ಅವರು ತಿಳಿಸಿದ್ದಾರೆ.