<p><strong>ನವದೆಹಲಿ</strong>: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ‘ಕಾರ್ಮಿಕ ವಿರೋಧಿ’ ನೀತಿಗಳನ್ನು ಅನುಸರಿಸುತ್ತಿದೆ ಎಂದು ದೂರಿ, ನೀತಿಗಳ ವಿರುದ್ಧ ಪ್ರತಿಭಟಿಸಲು ಕರೆ ನೀಡಿದ್ದ ಭಾರತ್ ಬಂದ್ನಲ್ಲಿ ಅಂದಾಜು 25 ಕೋಟಿ ಕಾರ್ಮಿಕರು ಭಾಗಿಯಾಗಿದ್ದರು ಎಂದು ಸಂಘಟನೆಗಳು ಹೇಳಿವೆ.</p><p>ಕೇರಳದಲ್ಲಿ ಬಂದ್ ಯಶಸ್ಸು ಕಂಡಿದೆ, ಪಶ್ಚಿಮ ಬಂಗಾಳದಲ್ಲಿ ಅಲ್ಲಲ್ಲಿ ಹಿಂಸಾಚಾರ ನಡೆದಿದೆ. ಆರ್ಎಸ್ಎಸ್ನ ಕಾರ್ಮಿಕ ಸಂಘಟನೆಯಾದ ಭಾರತೀಯ ಮಜ್ದೂರ್ ಸಂಘವು ಬಂದ್ನಲ್ಲಿ ಭಾಗಿಯಾಗಿರಲಿಲ್ಲ. </p><p>ಕಲ್ಲಿದ್ದಲು, ಬ್ಯಾಂಕಿಂಗ್, ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಮತ್ತು ಕೈಗಾರಿಕಾ ವಲಯಗಳ ಮೇಲೆ ಬಂದ್ನಿಂದಾಗಿ ಪರಿಣಾಮ ಉಂಟಾಗಿದೆ ಎಂದು ಕಾರ್ಮಿಕ ಸಂಘಟನೆಗಳು ಹೇಳಿವೆ.</p><p>ರಸ್ತೆ ತಡೆ, ರೈಲು ತಡೆಯಂತಹ ಪ್ರತಿಭಟನೆಗಳಲ್ಲಿ ಕಾರ್ಮಿಕರು ಭಾಗಿಯಾಗಿದ್ದರು ಎಂದು ಸಂಘಟನೆಗಳು ಹೇಳಿವೆ. ಅಸಂಘಟಿತ ವಲಯದ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತ ರೈತರು ಕೂಡ ಭಾಗಿಯಾದ್ದರು ಎಂದು ತಿಳಿಸಿವೆ.</p><p>ದೆಹಲಿಯಲ್ಲಿ ಮಾರುಕಟ್ಟೆಗಳು ತೆರೆದಿದ್ದವು. ಜಾರ್ಖಂಡ್ನಲ್ಲಿ ಕಲ್ಲಿದ್ದಲು, ಬ್ಯಾಂಕಿಂಗ್ ಮತ್ತು ಇತರ ವಲಯಗಳಲ್ಲಿ ಚಟುವಟಿಕೆಗಳಿಗೆ ಧಕ್ಕೆ ಆಗಿದೆ ಎಂದು ಕಾರ್ಮಿಕರ ಸಂಘಟನೆಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ‘ಕಾರ್ಮಿಕ ವಿರೋಧಿ’ ನೀತಿಗಳನ್ನು ಅನುಸರಿಸುತ್ತಿದೆ ಎಂದು ದೂರಿ, ನೀತಿಗಳ ವಿರುದ್ಧ ಪ್ರತಿಭಟಿಸಲು ಕರೆ ನೀಡಿದ್ದ ಭಾರತ್ ಬಂದ್ನಲ್ಲಿ ಅಂದಾಜು 25 ಕೋಟಿ ಕಾರ್ಮಿಕರು ಭಾಗಿಯಾಗಿದ್ದರು ಎಂದು ಸಂಘಟನೆಗಳು ಹೇಳಿವೆ.</p><p>ಕೇರಳದಲ್ಲಿ ಬಂದ್ ಯಶಸ್ಸು ಕಂಡಿದೆ, ಪಶ್ಚಿಮ ಬಂಗಾಳದಲ್ಲಿ ಅಲ್ಲಲ್ಲಿ ಹಿಂಸಾಚಾರ ನಡೆದಿದೆ. ಆರ್ಎಸ್ಎಸ್ನ ಕಾರ್ಮಿಕ ಸಂಘಟನೆಯಾದ ಭಾರತೀಯ ಮಜ್ದೂರ್ ಸಂಘವು ಬಂದ್ನಲ್ಲಿ ಭಾಗಿಯಾಗಿರಲಿಲ್ಲ. </p><p>ಕಲ್ಲಿದ್ದಲು, ಬ್ಯಾಂಕಿಂಗ್, ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಮತ್ತು ಕೈಗಾರಿಕಾ ವಲಯಗಳ ಮೇಲೆ ಬಂದ್ನಿಂದಾಗಿ ಪರಿಣಾಮ ಉಂಟಾಗಿದೆ ಎಂದು ಕಾರ್ಮಿಕ ಸಂಘಟನೆಗಳು ಹೇಳಿವೆ.</p><p>ರಸ್ತೆ ತಡೆ, ರೈಲು ತಡೆಯಂತಹ ಪ್ರತಿಭಟನೆಗಳಲ್ಲಿ ಕಾರ್ಮಿಕರು ಭಾಗಿಯಾಗಿದ್ದರು ಎಂದು ಸಂಘಟನೆಗಳು ಹೇಳಿವೆ. ಅಸಂಘಟಿತ ವಲಯದ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತ ರೈತರು ಕೂಡ ಭಾಗಿಯಾದ್ದರು ಎಂದು ತಿಳಿಸಿವೆ.</p><p>ದೆಹಲಿಯಲ್ಲಿ ಮಾರುಕಟ್ಟೆಗಳು ತೆರೆದಿದ್ದವು. ಜಾರ್ಖಂಡ್ನಲ್ಲಿ ಕಲ್ಲಿದ್ದಲು, ಬ್ಯಾಂಕಿಂಗ್ ಮತ್ತು ಇತರ ವಲಯಗಳಲ್ಲಿ ಚಟುವಟಿಕೆಗಳಿಗೆ ಧಕ್ಕೆ ಆಗಿದೆ ಎಂದು ಕಾರ್ಮಿಕರ ಸಂಘಟನೆಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>