ನರಸಿಂಹರಾಜಪುರ: ತಾಲ್ಲೂಕಿನ ಬಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಸಗಲ್ಲು ಮೀಸಲು ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 6 ವರ್ಷದ ಹೆಣ್ಣು ಆನೆಯ ಶವ ಪತ್ತೆಯಾಗಿದೆ. ನೀರು ಆಹಾರ ಸಿಗದೆ ತೀವ್ರ ಬಳಲಿಕೆಯಿಂದ ಸಾವನ್ನಪ್ಪಿದೆ. ಆನೆ ಸತ್ತು ಎಂಟು ದಿನ ಸಂದಿದೆ ಎಂದು ಚಿಕ್ಕಗ್ರಹಾರ ವಲಯ ಅರಣ್ಯಾಧಿಕಾರಿ ಬಿ.ಸಿ.ಲೋಕೇಶ್ ತಿಳಿಸಿದ್ದಾರೆ.