ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪತ್ಕಾಲಕ್ಕೆ ಉಳಿಸಲು ಗಮನ

ಕೋವಿಡ್‌–19ಯಿಂದ ವೈಯಕ್ತಿಕ ಹಣಕಾಸಿನ ಆದ್ಯತೆ ಬದಲು
Last Updated 9 ಆಗಸ್ಟ್ 2020, 13:46 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಜನ ಉಳಿತಾಯ ಮಾಡುವಂತೆ ಹಾಗೂ ಉಳಿಸಿದ ಹಣವನ್ನು ಸಂಪತ್ತು ಸೃಷ್ಟಿಸುವ ಕಡೆಗಳಲ್ಲಿ ತೊಡಗಿಸುವಂತೆ ಕೋವಿಡ್‌–19 ಸೃಷ್ಟಿಸಿರುವ ಬಿಕ್ಕಟ್ಟು ಪ್ರೇರೇಪಿಸಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

ಆರ್ಥಿಕತೆಯು ಚೇತರಿಸಿಕೊಳ್ಳುವ ಬಗ್ಗೆ ಶೇಕಡ 45ರಷ್ಟು ಜನ ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕನಿಷ್ಠ ಒಂದು ವರ್ಷದವರೆಗೆ ಆರ್ಥಿಕ ಬೆಳವಣಿಗೆ ನಿಧಾನಗತಿಯಲ್ಲಿ ಸಾಗಲಿದೆ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದವರು ಹೇಳಿದ್ದಾರೆ. ಸಂಪತ್ತು ನಿರ್ವಹಣೆಯ ಸೇವೆಗಳನ್ನು ಒದಗಿಸುವ ಸ್ಕ್ರಿಪ್‌ಬಾಕ್ಸ್‌ ಕಂಪನಿ ‘ಫೈನಾನ್ಶಿಯಲ್‌ ಫ್ರೀಡಂ ಸರ್ವೆ’ ಹೆಸರಿನಲ್ಲಿ ಈ ಸಮೀಕ್ಷೆ ನಡೆಸಿದೆ.

ಆರ್ಥಿಕ ಬೆಳವಣಿಗೆ ಮಂದಗತಿಯಲ್ಲಿ ಸಾಗುವುದರಿಂದ ವೈಯಕ್ತಿಕ ಹಣಕಾಸು ಲೆಕ್ಕಾಚಾರಗಳು ತಲೆಕೆಳಗಾಗುತ್ತಿವೆ ಎನ್ನುವ ಅಭಿಪ್ರಾಯವು ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT