<p><strong>ನವದೆಹಲಿ:</strong> ಮುಂಬರುವ ತಿಂಗಳುಗಳಲ್ಲಿ ದೇಶದ ಆರ್ಥಿಕ ಬೆಳವಣಿಗೆಯು ಹೆಚ್ಚಳವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ವರದಿ ಸೋಮವಾರ ತಿಳಿಸಿದೆ.</p>.<p>ಉತ್ತಮ ಮುಂಗಾರಿನಿಂದ ಕೃಷಿ ಚಟುವಟಿಕೆಗಳು ಹೆಚ್ಚಳವಾಗಿವೆ. ಕನಿಷ್ಠ ಬೆಂಬಲ ದರವು ಏರಿಕೆಯಾಗಿದೆ. ಜಲಾಶಯಗಳಲ್ಲಿ ನೀರಿನ ಸಂಗ್ರಹವು ಹೆಚ್ಚಳವಾಗಿದ್ದು, ಕೃಷಿ ಉತ್ಪಾದನೆಯಿಂದ ಪದಾರ್ಥಗಳ ಬೆಲೆ ಕಡಿಮೆಯಾಗಲಿದೆ. ಇದರಿಂದ ಹಣದುಬ್ಬರವು ಇಳಿಕೆಯಾಗಬಹುದು ಎಂದು ಅಕ್ಟೋಬರ್ ತಿಂಗಳ ಮಾಸಿಕ ವರದಿ ತಿಳಿಸಿದೆ.</p>.<p>ನವೆಂಬರ್ ಆರಂಭದಲ್ಲಿ ಪ್ರಮುಖ ಆಹಾರ ವಸ್ತುಗಳ ಬೆಲೆಯು ಇಳಿಕೆಯಾಗಿರುವುದನ್ನು ತೋರಿಸುತ್ತಿದೆ. ಆದರೂ, ಜಾಗತಿಕ ಅಂಶಗಳು ದೇಶೀಯ ಹಣದುಬ್ಬರ ಮತ್ತು ಪೂರೈಕೆಯ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದೆ.</p>.<p>ವಿದೇಶಿ ನೇರ ಹೂಡಿಕೆಯ ಒಳಹರಿವು ಪ್ರಸಕ್ತ ಹಣಕಾಸು ವರ್ಷದ ಮೊದಲ ಐದು ತಿಂಗಳಲ್ಲಿ ಉತ್ತಮ ಬೆಳವಣಿಗೆ ದಾಖಲಿಸಿದ್ದು, ₹5.46 ಲಕ್ಷ ಕೋಟಿ ವಿದೇಶಿ ವಿನಿಮಯ ಮೀಸಲು ಸಂಗ್ರಹ ಹೆಚ್ಚಳವಾಗಿದೆ. ತಯಾರಿಕಾ ವಲಯದಲ್ಲಿ ಉದ್ಯೋಗಗಳ ಹೆಚ್ಚಳ ಮತ್ತು ಸಂಘಟಿತ ವಲಯಗಳಿಗೆ ಯುವಜನರ ಸೇರ್ಪಡೆ ಏರಿಕೆಯಾಗಲಿದೆ. ಸೇವಾ ವಲಯವು ತನ್ನ ವೇಗವನ್ನು ಉಳಿಸಿಕೊಳ್ಳುತ್ತಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂಬರುವ ತಿಂಗಳುಗಳಲ್ಲಿ ದೇಶದ ಆರ್ಥಿಕ ಬೆಳವಣಿಗೆಯು ಹೆಚ್ಚಳವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ವರದಿ ಸೋಮವಾರ ತಿಳಿಸಿದೆ.</p>.<p>ಉತ್ತಮ ಮುಂಗಾರಿನಿಂದ ಕೃಷಿ ಚಟುವಟಿಕೆಗಳು ಹೆಚ್ಚಳವಾಗಿವೆ. ಕನಿಷ್ಠ ಬೆಂಬಲ ದರವು ಏರಿಕೆಯಾಗಿದೆ. ಜಲಾಶಯಗಳಲ್ಲಿ ನೀರಿನ ಸಂಗ್ರಹವು ಹೆಚ್ಚಳವಾಗಿದ್ದು, ಕೃಷಿ ಉತ್ಪಾದನೆಯಿಂದ ಪದಾರ್ಥಗಳ ಬೆಲೆ ಕಡಿಮೆಯಾಗಲಿದೆ. ಇದರಿಂದ ಹಣದುಬ್ಬರವು ಇಳಿಕೆಯಾಗಬಹುದು ಎಂದು ಅಕ್ಟೋಬರ್ ತಿಂಗಳ ಮಾಸಿಕ ವರದಿ ತಿಳಿಸಿದೆ.</p>.<p>ನವೆಂಬರ್ ಆರಂಭದಲ್ಲಿ ಪ್ರಮುಖ ಆಹಾರ ವಸ್ತುಗಳ ಬೆಲೆಯು ಇಳಿಕೆಯಾಗಿರುವುದನ್ನು ತೋರಿಸುತ್ತಿದೆ. ಆದರೂ, ಜಾಗತಿಕ ಅಂಶಗಳು ದೇಶೀಯ ಹಣದುಬ್ಬರ ಮತ್ತು ಪೂರೈಕೆಯ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದೆ.</p>.<p>ವಿದೇಶಿ ನೇರ ಹೂಡಿಕೆಯ ಒಳಹರಿವು ಪ್ರಸಕ್ತ ಹಣಕಾಸು ವರ್ಷದ ಮೊದಲ ಐದು ತಿಂಗಳಲ್ಲಿ ಉತ್ತಮ ಬೆಳವಣಿಗೆ ದಾಖಲಿಸಿದ್ದು, ₹5.46 ಲಕ್ಷ ಕೋಟಿ ವಿದೇಶಿ ವಿನಿಮಯ ಮೀಸಲು ಸಂಗ್ರಹ ಹೆಚ್ಚಳವಾಗಿದೆ. ತಯಾರಿಕಾ ವಲಯದಲ್ಲಿ ಉದ್ಯೋಗಗಳ ಹೆಚ್ಚಳ ಮತ್ತು ಸಂಘಟಿತ ವಲಯಗಳಿಗೆ ಯುವಜನರ ಸೇರ್ಪಡೆ ಏರಿಕೆಯಾಗಲಿದೆ. ಸೇವಾ ವಲಯವು ತನ್ನ ವೇಗವನ್ನು ಉಳಿಸಿಕೊಳ್ಳುತ್ತಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>