<p><strong>ನವದೆಹಲಿ:</strong> ದೇಶದ ತಯಾರಿಕಾ ವಲಯದ ಚಟುವಟಿಕೆಯು ಸೆಪ್ಟೆಂಬರ್ನಲ್ಲಿ 8 ತಿಂಗಳ ಕನಿಷ್ಠ ಮಟ್ಟಕ್ಕೆ ದಾಖಲಾಗಿದೆ.</p>.<p>ಕೈಗಾರಿಕಾ ಉತ್ಪಾದನೆ, ಮಾರಾಟ ಮತ್ತು ಹೊಸ ರಫ್ತು ಆರ್ಡರ್ಗಳಲ್ಲಿ ಮಂದಗತಿಯಿಂದಾಗಿ ಸೂಚ್ಯಂಕವು ಇಳಿಕೆಯಾಗಿದೆ ಎಂದು ಎಸ್ ಆ್ಯಂಡ್ ಪಿ ಗ್ಲೋಬಲ್ ಸಂಸ್ಥೆಯ ವರದಿ ಮಂಗಳವಾರ ತಿಳಿಸಿದೆ.</p>.<p>ಎಚ್ಎಸ್ಬಿಸಿ ಇಂಡಿಯಾದ ಮ್ಯಾನುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರ್ಸ್ ಸೂಚ್ಯಂಕದ (ಪಿಎಂಐ) ವರದಿ ಪ್ರಕಾರ, ಆಗಸ್ಟ್ನಲ್ಲಿ 57.5 ಇದ್ದ ಸೂಚ್ಯಂಕವು ಸೆಪ್ಟೆಂಬರ್ನಲ್ಲಿ 56.5ಕ್ಕೆ ಇಳಿದಿದೆ. </p>.<p>ತಯಾರಿಕಾ ವೆಚ್ಚ ಮತ್ತು ಮಾರಾಟ ಶುಲ್ಕದಲ್ಲಿ ಏರಿಕೆಯಾಗಿದೆ. ಇದರ ಪರಿಣಾಮ ಖರೀದಿ ದರ ಹೆಚ್ಚಳವಾಗಿದೆ. ಕಾರ್ಮಿಕರ ವೆಚ್ಚ ಮತ್ತು ಬೇಡಿಕೆಯಿಂದಾಗಿ ತಯಾರಕರು ಶುಲ್ಕವನ್ನು ಏರಿಕೆ ಮಾಡಿದ್ದಾರೆ ಎಂದು ತಿಳಿಸಿದೆ.</p>.<p>‘ಲಾಭದ ಇಳಿಕೆಯು ಕಂಪನಿಗಳ ನೇಮಕಾತಿ ಮೇಲೆ ಪರಿಣಾಮ ಬೀರಿದೆ. ಮೂರನೇ ತಿಂಗಳು ಉದ್ಯೋಗ ಸೃಷ್ಟಿಯು ಮಂದಗತಿಯಲ್ಲಿದೆ’ ಎಂದು ಎಚ್ಎಸ್ಬಿಸಿಯ ಭಾರತದ ಮುಖ್ಯ ಅರ್ಥಶಾಸ್ತ್ರಜ್ಞ ಪ್ರಂಜುಲ್ ಭಂಡಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ತಯಾರಿಕಾ ವಲಯದ ಚಟುವಟಿಕೆಯು ಸೆಪ್ಟೆಂಬರ್ನಲ್ಲಿ 8 ತಿಂಗಳ ಕನಿಷ್ಠ ಮಟ್ಟಕ್ಕೆ ದಾಖಲಾಗಿದೆ.</p>.<p>ಕೈಗಾರಿಕಾ ಉತ್ಪಾದನೆ, ಮಾರಾಟ ಮತ್ತು ಹೊಸ ರಫ್ತು ಆರ್ಡರ್ಗಳಲ್ಲಿ ಮಂದಗತಿಯಿಂದಾಗಿ ಸೂಚ್ಯಂಕವು ಇಳಿಕೆಯಾಗಿದೆ ಎಂದು ಎಸ್ ಆ್ಯಂಡ್ ಪಿ ಗ್ಲೋಬಲ್ ಸಂಸ್ಥೆಯ ವರದಿ ಮಂಗಳವಾರ ತಿಳಿಸಿದೆ.</p>.<p>ಎಚ್ಎಸ್ಬಿಸಿ ಇಂಡಿಯಾದ ಮ್ಯಾನುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರ್ಸ್ ಸೂಚ್ಯಂಕದ (ಪಿಎಂಐ) ವರದಿ ಪ್ರಕಾರ, ಆಗಸ್ಟ್ನಲ್ಲಿ 57.5 ಇದ್ದ ಸೂಚ್ಯಂಕವು ಸೆಪ್ಟೆಂಬರ್ನಲ್ಲಿ 56.5ಕ್ಕೆ ಇಳಿದಿದೆ. </p>.<p>ತಯಾರಿಕಾ ವೆಚ್ಚ ಮತ್ತು ಮಾರಾಟ ಶುಲ್ಕದಲ್ಲಿ ಏರಿಕೆಯಾಗಿದೆ. ಇದರ ಪರಿಣಾಮ ಖರೀದಿ ದರ ಹೆಚ್ಚಳವಾಗಿದೆ. ಕಾರ್ಮಿಕರ ವೆಚ್ಚ ಮತ್ತು ಬೇಡಿಕೆಯಿಂದಾಗಿ ತಯಾರಕರು ಶುಲ್ಕವನ್ನು ಏರಿಕೆ ಮಾಡಿದ್ದಾರೆ ಎಂದು ತಿಳಿಸಿದೆ.</p>.<p>‘ಲಾಭದ ಇಳಿಕೆಯು ಕಂಪನಿಗಳ ನೇಮಕಾತಿ ಮೇಲೆ ಪರಿಣಾಮ ಬೀರಿದೆ. ಮೂರನೇ ತಿಂಗಳು ಉದ್ಯೋಗ ಸೃಷ್ಟಿಯು ಮಂದಗತಿಯಲ್ಲಿದೆ’ ಎಂದು ಎಚ್ಎಸ್ಬಿಸಿಯ ಭಾರತದ ಮುಖ್ಯ ಅರ್ಥಶಾಸ್ತ್ರಜ್ಞ ಪ್ರಂಜುಲ್ ಭಂಡಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>