<p><strong>ನವದೆಹಲಿ:</strong> ಆಹಾರ ಉತ್ಪನ್ನಗಳ ಬೆಲೆ ಹೆಚ್ಚುತ್ತಿರುವುದರಿಂದ ಚಿಲ್ಲರೆ ಹಣದುಬ್ಬರವು ಮುಂಬರುವ ಮೂರು ತಿಂಗಳಿನಲ್ಲಿ ಏರುಮುಖವಾಗಿಯೇ ಇರುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.</p>.<p>ಚಿಲ್ಲರೆ ಹಣದುಬ್ಬರವು ಅಕ್ಟೋಬರ್ನಲ್ಲಿ ಆರು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಅತಿಯಾದ ಮಳೆ ಆಗಿರುವುದರಿಂದ ಬೆಳೆಹಾನಿ ಆಗಿದೆ. ಖಾದ್ಯತೈಲ ಆಮದು ಸಹ ದುಬಾರಿ ಆಗಿದೆ. ಈ ಎಲ್ಲಾ ಕಾರಣಗಳಿಂದ ಚಿಲ್ಲರೆ ಹಣದುಬ್ಬರ ಗರಿಷ್ಠ ಮಟ್ಟದಲ್ಲಿಯೇ ಇರಲಿದೆ ಎನ್ನುವುದು ವರ್ತಕರ ಅಭಿಪ್ರಾಯವಾಗಿದೆ.</p>.<p>ಈರುಳ್ಳಿ, ಆಲೂಗೆಡ್ಡೆ, ಮೊಟ್ಟೆ, ಮಾಂಸ ಮತ್ತು ಟೊಮೆಟೊ ದರವು ಶೇ 46ರ ಸಮೀಪದಲ್ಲಿವೆ. ಅಕ್ಟೋಬರ್ನಲ್ಲಿ ಆಹಾರ ಹಣದುಬ್ಬರ ಶೇ 11.07ಕ್ಕೆ ಏರಿಕೆಯಾಗಿದೆ. ಇದು 9 ತಿಂಗಳ ಗರಿಷ್ಠ ಮಟ್ಟವಾಗಿದೆ. ಇದರಿಂದಾಗಿ ಒಟ್ಟಾರೆ ಹಣದುಬ್ಬರ ಅಕ್ಟೋಬರ್ನಲ್ಲಿ ಶೇ 7.61ಕ್ಕೆ ತಲುಪಿದೆ.</p>.<p>‘ಅತಿಯಾದ ಮಳೆಯಿಂದಾಗಿ ಬೆಳೆಗೆ ಹಾನಿಯಾಗಿದ್ದು, ಬೆಲೆ ಏರಿಕೆಗೆ ಕಾರಣವಾಗಿದೆ. ಬಹಳಷ್ಟು ರೈತರು ಮತ್ತೆ ಹೊಸದಾಗಿ ಬಿತ್ತನೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಇದರಿಂದಾಗಿ ಹೊಸ ಬೆಳೆ ಬರುವುದು ತಡವಾಗಲಿದೆ’ ಎಂದು ಮಹಾರಾಷ್ಟ್ರದ ವರ್ತಕ ಅಮೊಲ್ ಗುಲೆ ಹೇಳಿದ್ದಾರೆ.</p>.<p>ಆರ್ಥಿಕತೆಯ ಚೇತರಿಕೆಗಾಗಿ ಸರ್ಕಾರ ಹೆಚ್ಚುವರಿ ವೆಚ್ಚ ಮಾಡುತ್ತಿರುವುದು ಸಹ ಹಣದುಬ್ಬರ ಏರಿಕೆಗೆ ಕಾರಣವಾಗುತ್ತಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಸರ್ಕಾರದ ವೆಚ್ಚವು ಬಜೆಟ್ ಅಂದಾಜನ್ನೂ ಮೀರಲಿದೆ ಎಂದೂ ತಿಳಿಸಿದ್ದಾರೆ.</p>.<p>ಮಾರ್ಚ್ವರೆಗೆ ರೆಪೊ ದರದಲ್ಲಿ ಶೇ 1.15ರಷ್ಟು ಕಡಿತ ಮಾಡಿದ್ದ ಆರ್ಬಿಐ, ಹಣದುಬ್ಬರ ಏರಿಕೆ ಆಗುತ್ತಿರುವುದನ್ನು ಗಮನಿಸಿ, ಬಡ್ಡಿದರ ಕಡಿತದ ನಿರ್ಧಾರವನ್ನು ಸದ್ಯದ ಮಟ್ಟಿಗೆ ತಡೆಹಿಡಿಯುವಂತಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಹಾರ ಉತ್ಪನ್ನಗಳ ಬೆಲೆ ಹೆಚ್ಚುತ್ತಿರುವುದರಿಂದ ಚಿಲ್ಲರೆ ಹಣದುಬ್ಬರವು ಮುಂಬರುವ ಮೂರು ತಿಂಗಳಿನಲ್ಲಿ ಏರುಮುಖವಾಗಿಯೇ ಇರುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.</p>.<p>ಚಿಲ್ಲರೆ ಹಣದುಬ್ಬರವು ಅಕ್ಟೋಬರ್ನಲ್ಲಿ ಆರು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಅತಿಯಾದ ಮಳೆ ಆಗಿರುವುದರಿಂದ ಬೆಳೆಹಾನಿ ಆಗಿದೆ. ಖಾದ್ಯತೈಲ ಆಮದು ಸಹ ದುಬಾರಿ ಆಗಿದೆ. ಈ ಎಲ್ಲಾ ಕಾರಣಗಳಿಂದ ಚಿಲ್ಲರೆ ಹಣದುಬ್ಬರ ಗರಿಷ್ಠ ಮಟ್ಟದಲ್ಲಿಯೇ ಇರಲಿದೆ ಎನ್ನುವುದು ವರ್ತಕರ ಅಭಿಪ್ರಾಯವಾಗಿದೆ.</p>.<p>ಈರುಳ್ಳಿ, ಆಲೂಗೆಡ್ಡೆ, ಮೊಟ್ಟೆ, ಮಾಂಸ ಮತ್ತು ಟೊಮೆಟೊ ದರವು ಶೇ 46ರ ಸಮೀಪದಲ್ಲಿವೆ. ಅಕ್ಟೋಬರ್ನಲ್ಲಿ ಆಹಾರ ಹಣದುಬ್ಬರ ಶೇ 11.07ಕ್ಕೆ ಏರಿಕೆಯಾಗಿದೆ. ಇದು 9 ತಿಂಗಳ ಗರಿಷ್ಠ ಮಟ್ಟವಾಗಿದೆ. ಇದರಿಂದಾಗಿ ಒಟ್ಟಾರೆ ಹಣದುಬ್ಬರ ಅಕ್ಟೋಬರ್ನಲ್ಲಿ ಶೇ 7.61ಕ್ಕೆ ತಲುಪಿದೆ.</p>.<p>‘ಅತಿಯಾದ ಮಳೆಯಿಂದಾಗಿ ಬೆಳೆಗೆ ಹಾನಿಯಾಗಿದ್ದು, ಬೆಲೆ ಏರಿಕೆಗೆ ಕಾರಣವಾಗಿದೆ. ಬಹಳಷ್ಟು ರೈತರು ಮತ್ತೆ ಹೊಸದಾಗಿ ಬಿತ್ತನೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಇದರಿಂದಾಗಿ ಹೊಸ ಬೆಳೆ ಬರುವುದು ತಡವಾಗಲಿದೆ’ ಎಂದು ಮಹಾರಾಷ್ಟ್ರದ ವರ್ತಕ ಅಮೊಲ್ ಗುಲೆ ಹೇಳಿದ್ದಾರೆ.</p>.<p>ಆರ್ಥಿಕತೆಯ ಚೇತರಿಕೆಗಾಗಿ ಸರ್ಕಾರ ಹೆಚ್ಚುವರಿ ವೆಚ್ಚ ಮಾಡುತ್ತಿರುವುದು ಸಹ ಹಣದುಬ್ಬರ ಏರಿಕೆಗೆ ಕಾರಣವಾಗುತ್ತಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಸರ್ಕಾರದ ವೆಚ್ಚವು ಬಜೆಟ್ ಅಂದಾಜನ್ನೂ ಮೀರಲಿದೆ ಎಂದೂ ತಿಳಿಸಿದ್ದಾರೆ.</p>.<p>ಮಾರ್ಚ್ವರೆಗೆ ರೆಪೊ ದರದಲ್ಲಿ ಶೇ 1.15ರಷ್ಟು ಕಡಿತ ಮಾಡಿದ್ದ ಆರ್ಬಿಐ, ಹಣದುಬ್ಬರ ಏರಿಕೆ ಆಗುತ್ತಿರುವುದನ್ನು ಗಮನಿಸಿ, ಬಡ್ಡಿದರ ಕಡಿತದ ನಿರ್ಧಾರವನ್ನು ಸದ್ಯದ ಮಟ್ಟಿಗೆ ತಡೆಹಿಡಿಯುವಂತಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>