ಹಲವು ರಾಜ್ಯಗಳಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಮುಂಗಾರು ಹಂಗಾಮು ಅವಧಿಯಲ್ಲಿ ಇಲ್ಲಿಯವರೆಗೆ ಆಗಿರುವ ಭತ್ತ ಬಿತ್ತನೆಯ ಪ್ರದೇಶವು ಶೇಕಡ 38ರಷ್ಟು ಕಡಿಮೆ ಇದೆ. ಹೀಗಾಗಿ ಅಕ್ಕಿ ಉತ್ಪಾದನೆ ಕಡಿಮೆ ಆಗುವ ಅಂದಾಜು ಮಾಡಲಾಗಿದೆ. ಹೀಗಿದ್ದರೂ, ದೇಶಕ್ಕೆ ಅಗತ್ಯವಿರುವುದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿಯ ಉತ್ಪಾದನೆ ಆಗಲಿದೆ ಎಂದು ಅವರು ವಿವರಿಸಿದ್ದಾರೆ.