<p><strong>ಬೆಂಗಳೂರು</strong>: ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಸರ್ಕಾರ ಪ್ರಕಟಿಸಿರುವ ಹೊಸ ಕೈಗಾರಿಕಾ ನೀತಿ 2025-30 ಮಾರ್ಗಸೂಚಿಯಾಗಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಹೇಳಿದ್ದಾರೆ.</p>.<p>ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ. ₹7.50 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲು ನಿರ್ಧರಿಸಲಾಗಿದೆ. ಈ ನೀತಿಯು ಕರ್ನಾಟಕದ ಸುಸ್ಥಿರ ಮತ್ತು ಸಮಗ್ರ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕಲಿದೆ ಎಂದು ಹೇಳಿದ್ದಾರೆ.</p>.<p>ಸಮತೋಲಿತ ಪ್ರಾದೇಶಿಕ ಬೆಳವಣಿಗೆಗೆ ಉತ್ತೇಜನ ಸಿಗಲಿದೆ. ಏಕಗವಾಕ್ಷಿ ವ್ಯವಸ್ಥೆಯ ಮೂಲಕ ವ್ಯಾಪಾರ ವಹಿವಾಟನ್ನು ಹೆಚ್ಚಿಸುವ ಸರ್ಕಾರದ ಬದ್ಧತೆ ಶ್ಲಾಘನೀಯವಾಗಿದೆ ಎಂದು ಹೇಳಿದ್ದಾರೆ.</p>.<p>ಹಿಂದುಳಿದ ಮತ್ತು ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ (ಎಂಎಸ್ಎಂಇ) ವಿಶೇಷ ಪ್ರೋತ್ಸಾಹ ಸಿಗಲಿದೆ. ಸರಕು ಸಾಗಣೆ ಮತ್ತು ದಾಸ್ತಾನು ಮಳಿಗೆಗಳನ್ನು ಉದ್ಯಮವಾಗಿ ಪರಿಗಣಿಸಿರುವುದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.</p>.<p>ಸರ್ಕಾರವು ಎಂಎಸ್ಎಂಇಗಳಿಗೆ ಘೋಷಿಸಿದ ಪ್ರೋತ್ಸಾಹ ಧನವನ್ನು ಆಯಾ ಆರ್ಥಿಕ ವರ್ಷಗಳ ಆಯವ್ಯಯ ಹಂಚಿಕೆಯಡಿ ಸೇರಿಸಿ ಬಿಡುಗಡೆ ಮಾಡಬೇಕು. ಸದ್ಯ ಆಗುತ್ತಿರುವ ವಿಳಂಬ ತಪ್ಪಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಸರ್ಕಾರ ಪ್ರಕಟಿಸಿರುವ ಹೊಸ ಕೈಗಾರಿಕಾ ನೀತಿ 2025-30 ಮಾರ್ಗಸೂಚಿಯಾಗಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಹೇಳಿದ್ದಾರೆ.</p>.<p>ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ. ₹7.50 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲು ನಿರ್ಧರಿಸಲಾಗಿದೆ. ಈ ನೀತಿಯು ಕರ್ನಾಟಕದ ಸುಸ್ಥಿರ ಮತ್ತು ಸಮಗ್ರ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕಲಿದೆ ಎಂದು ಹೇಳಿದ್ದಾರೆ.</p>.<p>ಸಮತೋಲಿತ ಪ್ರಾದೇಶಿಕ ಬೆಳವಣಿಗೆಗೆ ಉತ್ತೇಜನ ಸಿಗಲಿದೆ. ಏಕಗವಾಕ್ಷಿ ವ್ಯವಸ್ಥೆಯ ಮೂಲಕ ವ್ಯಾಪಾರ ವಹಿವಾಟನ್ನು ಹೆಚ್ಚಿಸುವ ಸರ್ಕಾರದ ಬದ್ಧತೆ ಶ್ಲಾಘನೀಯವಾಗಿದೆ ಎಂದು ಹೇಳಿದ್ದಾರೆ.</p>.<p>ಹಿಂದುಳಿದ ಮತ್ತು ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ (ಎಂಎಸ್ಎಂಇ) ವಿಶೇಷ ಪ್ರೋತ್ಸಾಹ ಸಿಗಲಿದೆ. ಸರಕು ಸಾಗಣೆ ಮತ್ತು ದಾಸ್ತಾನು ಮಳಿಗೆಗಳನ್ನು ಉದ್ಯಮವಾಗಿ ಪರಿಗಣಿಸಿರುವುದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.</p>.<p>ಸರ್ಕಾರವು ಎಂಎಸ್ಎಂಇಗಳಿಗೆ ಘೋಷಿಸಿದ ಪ್ರೋತ್ಸಾಹ ಧನವನ್ನು ಆಯಾ ಆರ್ಥಿಕ ವರ್ಷಗಳ ಆಯವ್ಯಯ ಹಂಚಿಕೆಯಡಿ ಸೇರಿಸಿ ಬಿಡುಗಡೆ ಮಾಡಬೇಕು. ಸದ್ಯ ಆಗುತ್ತಿರುವ ವಿಳಂಬ ತಪ್ಪಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>