‘ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮಿಗಳು ಭೂ ಸ್ವಾಧೀನ, ವಿದ್ಯುತ್ ಪೂರೈಕೆ, ಪರವಾನಗಿ ಪಡೆಯುವುದು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಪರಿಹಾರಕ್ಕೆ ಕೈಗಾರಿಕಾ ಅದಾಲತ್ ನಡೆಸಲು ನಿರ್ಧರಿಸಲಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಅದಾಲತ್ ನಡೆಸಿ ಸ್ಥಳದಲ್ಲೇ ಸಮಸ್ಯೆ ಬಗೆಹರಿಸಲಾಗುವುದು’ ಎಂದರು. ಎಫ್ಕೆಸಿಸಿಐ ಅಧ್ಯಕ್ಷ ಸಿ. ಆರ್. ಜನಾರ್ಧನ ಉಪಸ್ಥಿತರಿದ್ದರು.