<p><strong>ನವದೆಹಲಿ:</strong> ‘ಹಣದುಬ್ಬರವು ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಕ್ರಮೇಣ ಇಳಿಕೆ ಆಗುವ ನಿರೀಕ್ಷೆ ಇದೆ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಗವರ್ನರ್ ಶಕ್ತಿಕಾಂತ್ ದಾಸ್ ಶನಿವಾರ ತಿಳಿಸಿದ್ದಾರೆ.</p>.<p>‘ಬಲಿಷ್ಠ ಮತ್ತು ಸುಸ್ಥಿರ ಬೆಳವಣಿಗೆ ಸಾಧಿಸುವ ನಿಟ್ಟಿನಲ್ಲಿ ಹಣದುಬ್ಬರವನ್ನು ನಿಯಂತ್ರಣಕ್ಕೆ ತರಲು ಅಗತ್ಯವಾದ ಹಣಕಾಸಿನ ಕ್ರಮಗಳನ್ನು ಕೇಂದ್ರೀಯ ಬ್ಯಾಂಕ್ ಮುಂದುವರಿಸಲಿದೆ’ ಎಂದೂ ಅವರು ಹೇಳಿದ್ದಾರೆ.</p>.<p>ಕೌಟಿಲ್ಯ ಆರ್ಥಿಕ ಸಮಾವೇಶದ ಉದ್ಘಾಟನೆಯ ವೇಳೆ ಮಾತನಾಡಿದ ಅವರು, ‘ದೇಶದ ಆರ್ಥಿಕ ಸಂಸ್ಥೆಗಳಲ್ಲಿ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಮೂಡಿಸುವಲ್ಲಿ ಹಣದುಬ್ಬರವು ಮಾನದಂಡವಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ನಮ್ಮ ನಿಯಂತ್ರಣಕ್ಕೆ ಸಿಗದೇ ಇರುವ ಅಂಶಗಳು ಅಲ್ಪಾವಧಿಯಲ್ಲಿ ಹಣದುಬ್ಬರದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ, ಸುಸ್ಥಿರ ಆರ್ಥಿಕ ಬೆಳವಣಿಗೆ ಸಾಧಿಸುವ ಹಾದಿಯಲ್ಲಿ ಹಣದುಬ್ಬರವನ್ನು ನಿಯಂತ್ರಿಸಲು ಹಣಕಾಸು ನೀತಿಯಲ್ಲಿ ಸಕಾಲಕ್ಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ತಿಳಿಸಿದ್ದಾರೆ.</p>.<p>ಏಪ್ರಿಲ್ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 7.79ಕ್ಕೆ ತಲುಪಿತ್ತು. ಮೇ ತಿಂಗಳಿನಲ್ಲಿ ಶೇ 7.04ಕ್ಕೆ ಅಲ್ಪ ಇಳಿಕೆ ಕಂಡಿತು. ಸತತ ಐದು ತಿಂಗಳುಗಳಿಂದ ಹಣದುಬ್ಬರವು ಶೇ6ಕ್ಕಿಂತ ಹೆಚ್ಚಿನ ಮಟ್ಟದಲ್ಲಿಯೇ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಹಣದುಬ್ಬರವು ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಕ್ರಮೇಣ ಇಳಿಕೆ ಆಗುವ ನಿರೀಕ್ಷೆ ಇದೆ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಗವರ್ನರ್ ಶಕ್ತಿಕಾಂತ್ ದಾಸ್ ಶನಿವಾರ ತಿಳಿಸಿದ್ದಾರೆ.</p>.<p>‘ಬಲಿಷ್ಠ ಮತ್ತು ಸುಸ್ಥಿರ ಬೆಳವಣಿಗೆ ಸಾಧಿಸುವ ನಿಟ್ಟಿನಲ್ಲಿ ಹಣದುಬ್ಬರವನ್ನು ನಿಯಂತ್ರಣಕ್ಕೆ ತರಲು ಅಗತ್ಯವಾದ ಹಣಕಾಸಿನ ಕ್ರಮಗಳನ್ನು ಕೇಂದ್ರೀಯ ಬ್ಯಾಂಕ್ ಮುಂದುವರಿಸಲಿದೆ’ ಎಂದೂ ಅವರು ಹೇಳಿದ್ದಾರೆ.</p>.<p>ಕೌಟಿಲ್ಯ ಆರ್ಥಿಕ ಸಮಾವೇಶದ ಉದ್ಘಾಟನೆಯ ವೇಳೆ ಮಾತನಾಡಿದ ಅವರು, ‘ದೇಶದ ಆರ್ಥಿಕ ಸಂಸ್ಥೆಗಳಲ್ಲಿ ಜನರಿಗೆ ನಂಬಿಕೆ ಮತ್ತು ವಿಶ್ವಾಸ ಮೂಡಿಸುವಲ್ಲಿ ಹಣದುಬ್ಬರವು ಮಾನದಂಡವಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ನಮ್ಮ ನಿಯಂತ್ರಣಕ್ಕೆ ಸಿಗದೇ ಇರುವ ಅಂಶಗಳು ಅಲ್ಪಾವಧಿಯಲ್ಲಿ ಹಣದುಬ್ಬರದ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ, ಸುಸ್ಥಿರ ಆರ್ಥಿಕ ಬೆಳವಣಿಗೆ ಸಾಧಿಸುವ ಹಾದಿಯಲ್ಲಿ ಹಣದುಬ್ಬರವನ್ನು ನಿಯಂತ್ರಿಸಲು ಹಣಕಾಸು ನೀತಿಯಲ್ಲಿ ಸಕಾಲಕ್ಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ತಿಳಿಸಿದ್ದಾರೆ.</p>.<p>ಏಪ್ರಿಲ್ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 7.79ಕ್ಕೆ ತಲುಪಿತ್ತು. ಮೇ ತಿಂಗಳಿನಲ್ಲಿ ಶೇ 7.04ಕ್ಕೆ ಅಲ್ಪ ಇಳಿಕೆ ಕಂಡಿತು. ಸತತ ಐದು ತಿಂಗಳುಗಳಿಂದ ಹಣದುಬ್ಬರವು ಶೇ6ಕ್ಕಿಂತ ಹೆಚ್ಚಿನ ಮಟ್ಟದಲ್ಲಿಯೇ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>