ನವದೆಹಲಿ: ದೇಶದಲ್ಲಿ ಹಣದುಬ್ಬರವು ಸಹಿಸಿಕೊಳ್ಳಬಹುದಾದ ಮಟ್ಟದಲ್ಲಿಯೇ ಇದ್ದು, ಸರ್ಕಾರವು ಬೆಲೆ ಏರಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
2022ರ ಏಪ್ರಿಲ್ನಿಂದ ಡಿಸೆಂಬರ್ವರೆಗೆ ಚಿಲ್ಲರೆ ಹಣದುಬ್ಬರವು ಸರಾಸರಿ ಶೇ 6.8ರಷ್ಟಿತ್ತು. 2023ರಲ್ಲಿ ಇದೇ ಅವಧಿಯಲ್ಲಿ ಸರಾಸರಿ ಶೇ 5.5ರಷ್ಟು ದಾಖಲಾಗಿದೆ. ಸದ್ಯ ಹಣದುಬ್ಬರವು ಸ್ಥಿರವಾಗಿದೆ ಎಂದು ತಿಳಿಸಿದರು.
ರಾಜ್ಯಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಈರುಳ್ಳಿಯು ದೀರ್ಘಕಾಲ ಕೆಡದಂತೆ ಆರ್ದ್ರಗೊಳಿಸುವಿಕೆ ಸಂಬಂಧ ಬಾಬಾ ಪರಮಾಣು ಸಂಶೋಧನಾ ಸಂಸ್ಥೆಯು (ಬಿಎಆರ್ಸಿ) ಸರ್ಕಾರದ ಜೊತೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.