<p><strong>ನವದೆಹಲಿ</strong>: ‘ವಿಕಸಿತ ಭಾರತದ ಗುರಿ ಸಾಧನೆ ಮತ್ತು ಎಲ್ಲರಿಗೂ ಸಾಮಾಜಿಕ ಭದ್ರತೆ ಕಲ್ಪಿಸಲು ಸರ್ಕಾರ ಪ್ರತಿ ವರ್ಷ ₹15 ಲಕ್ಷ ಕೋಟಿಯನ್ನು ಮೂಲಸೌಕರ್ಯ ವಲಯ ಅಭಿವೃದ್ಧಿಗೆ ವ್ಯಯಿಸಬೇಕಿದೆ’ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.</p>.<p>2047ರ ವೇಳೆಗೆ ಸರ್ಕಾರವು ‘ವಿಕಸಿತ ಭಾರತ’ದ ಗುರಿ ಹೊಂದಿದೆ. ಆ ವೇಳೆಗೆ ದೇಶಕ್ಕೆ ಸ್ವಾತಂತ್ರ್ಯ ದೊರೆತು 100 ವರ್ಷ ಆಗಲಿದೆ ಎಂದರು.</p>.<p>2012ರಲ್ಲಿ ಮೂಲಸೌಕರ್ಯ ವಲಯದ ಅಭಿವೃದ್ಧಿಗೆ ಬಜೆಟ್ನಲ್ಲಿ ₹1.2 ಲಕ್ಷ ಕೋಟಿ ಹೂಡಿಕೆ ಮಾಡಲಾಗಿತ್ತು. 2014ರಲ್ಲಿ ₹2.4 ಲಕ್ಷ ಕೋಟಿಗೆ ಏರಿಕೆಯಾಗಿತ್ತು. ಆದರೆ, 2024ರ ವೇಳೆಗೆ ₹11.5 ಲಕ್ಷ ಕೋಟಿಗೆ ಮುಟ್ಟಿದೆ. ಇದು ₹15 ಲಕ್ಷ ಕೋಟಿಗೆ ಹೆಚ್ಚಳವಾಗಬೇಕಿದೆ. ಮುಂದಿನ 25 ವರ್ಷ ಸರ್ಕಾರವು ₹15 ಲಕ್ಷ ಕೋಟಿಯನ್ನು ಮೂಲಸೌಕರ್ಯ ವಲಯದಲ್ಲಿ ಪ್ರತಿ ವರ್ಷ ಹೂಡಿಕೆ ಮಾಡಿದರೆ ಮಾತ್ರ 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ ಎಂದು ಹೇಳಿದರು.</p>.<p>ದೇಶದ ಜನರಲ್ಲಿ ಸರಕು ಖರೀದಿ ಸಾಮರ್ಥ್ಯ ಹೆಚ್ಚಳವಾಗಿದೆ. ಜೊತೆಗೆ ಹೊಸ ವಲಯದಲ್ಲಿ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತಿವೆ. ಇದರಿಂದ ದೇಶದ ಆರ್ಥಿಕತೆ ಕ್ಷಿಪ್ರವಾಗಿ ವಿಸ್ತರಣೆ ಆಗುತ್ತಿದೆ ಎಂದು ಸೋಮವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.</p>.<p>2014ರಲ್ಲಿ ಶೇ 24ರಷ್ಟು ಕಾರ್ಮಿಕರಿಗೆ ಮಾತ್ರ ಸಾಮಾಜಿಕ ಭದ್ರತೆ ಸೌಲಭ್ಯ ಸಿಗುತ್ತಿತ್ತು. ಅದು ಈಗ ಶೇ 68ಕ್ಕೆ ಏರಿಕೆಯಾಗಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ವಿಕಸಿತ ಭಾರತದ ಗುರಿ ಸಾಧನೆ ಮತ್ತು ಎಲ್ಲರಿಗೂ ಸಾಮಾಜಿಕ ಭದ್ರತೆ ಕಲ್ಪಿಸಲು ಸರ್ಕಾರ ಪ್ರತಿ ವರ್ಷ ₹15 ಲಕ್ಷ ಕೋಟಿಯನ್ನು ಮೂಲಸೌಕರ್ಯ ವಲಯ ಅಭಿವೃದ್ಧಿಗೆ ವ್ಯಯಿಸಬೇಕಿದೆ’ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.</p>.<p>2047ರ ವೇಳೆಗೆ ಸರ್ಕಾರವು ‘ವಿಕಸಿತ ಭಾರತ’ದ ಗುರಿ ಹೊಂದಿದೆ. ಆ ವೇಳೆಗೆ ದೇಶಕ್ಕೆ ಸ್ವಾತಂತ್ರ್ಯ ದೊರೆತು 100 ವರ್ಷ ಆಗಲಿದೆ ಎಂದರು.</p>.<p>2012ರಲ್ಲಿ ಮೂಲಸೌಕರ್ಯ ವಲಯದ ಅಭಿವೃದ್ಧಿಗೆ ಬಜೆಟ್ನಲ್ಲಿ ₹1.2 ಲಕ್ಷ ಕೋಟಿ ಹೂಡಿಕೆ ಮಾಡಲಾಗಿತ್ತು. 2014ರಲ್ಲಿ ₹2.4 ಲಕ್ಷ ಕೋಟಿಗೆ ಏರಿಕೆಯಾಗಿತ್ತು. ಆದರೆ, 2024ರ ವೇಳೆಗೆ ₹11.5 ಲಕ್ಷ ಕೋಟಿಗೆ ಮುಟ್ಟಿದೆ. ಇದು ₹15 ಲಕ್ಷ ಕೋಟಿಗೆ ಹೆಚ್ಚಳವಾಗಬೇಕಿದೆ. ಮುಂದಿನ 25 ವರ್ಷ ಸರ್ಕಾರವು ₹15 ಲಕ್ಷ ಕೋಟಿಯನ್ನು ಮೂಲಸೌಕರ್ಯ ವಲಯದಲ್ಲಿ ಪ್ರತಿ ವರ್ಷ ಹೂಡಿಕೆ ಮಾಡಿದರೆ ಮಾತ್ರ 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ ಎಂದು ಹೇಳಿದರು.</p>.<p>ದೇಶದ ಜನರಲ್ಲಿ ಸರಕು ಖರೀದಿ ಸಾಮರ್ಥ್ಯ ಹೆಚ್ಚಳವಾಗಿದೆ. ಜೊತೆಗೆ ಹೊಸ ವಲಯದಲ್ಲಿ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತಿವೆ. ಇದರಿಂದ ದೇಶದ ಆರ್ಥಿಕತೆ ಕ್ಷಿಪ್ರವಾಗಿ ವಿಸ್ತರಣೆ ಆಗುತ್ತಿದೆ ಎಂದು ಸೋಮವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.</p>.<p>2014ರಲ್ಲಿ ಶೇ 24ರಷ್ಟು ಕಾರ್ಮಿಕರಿಗೆ ಮಾತ್ರ ಸಾಮಾಜಿಕ ಭದ್ರತೆ ಸೌಲಭ್ಯ ಸಿಗುತ್ತಿತ್ತು. ಅದು ಈಗ ಶೇ 68ಕ್ಕೆ ಏರಿಕೆಯಾಗಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>