<p><strong>ಬೆಂಗಳೂರು:</strong> ಎರಡು ಮತ್ತು ಮೂರನೇ ಹಂತದ ನಗರ – ಪಟ್ಟಣಗಳಿಗೆ ವಿಮೆ ಸೌಲಭ್ಯ ವಿಸ್ತರಿಸಲು, ಎಸ್ಬಿಐ ಜನರಲ್ ಇನ್ಶುರೆನ್ಸ್, ಮಹೀಂದ್ರಾ ಇನ್ಶುರೆನ್ಸ್ ಬ್ರೋಕರ್ಸ್ ಲಿಮಿಟೆಡ್ (ಎಂಐಬಿಎಲ್) ಜೊತೆ ಒಪ್ಪಂದ ಮಾಡಿಕೊಂಡಿದೆ.</p>.<p>ಗ್ರಾಮೀಣ ಪ್ರದೇಶಗಳಲ್ಲಿ ವಿಮೆ ಸೌಲಭ್ಯ ವಿಸ್ತರಿಸಲು ಈ ಪಾಲುದಾರಿಕೆಯು ಗಮನಾರ್ಹ ಕೊಡುಗೆ ನೀಡಲಿದೆ. ಕಾರ್, ವಾಣಿಜ್ಯ ವಾಹನ, ಟ್ರ್ಯಾಕ್ಟರ್, ಬಳಸಿದ ಕಾರ್ ಹಾಗೂ ವಾಹನಗಳ ವಿಮೆಗೂ ‘ಎಂಐಬಿಎಲ್‘ ಜತೆಗಿನ ಈ ಪಾಲುದಾರಿಕೆ ನೆರವಾಗಲಿದೆ. ಕೈಗೆಟುಕುವ ದರದಲ್ಲಿ ಡಿಜಿಟಲ್ ವಿಧಾನದಲ್ಲಿ ವಿಮೆ ಸೌಲಭ್ಯ ಒದಗಿಸಲು ಇದರಿಂದ ಸಾಧ್ಯವಾಗಲಿದೆ ಎಂದು ’ಎಂಐಬಿಎಲ್‘ನ ವ್ಯವಸ್ಥಾಪಕ ನಿರ್ದೇಶಕ ಡಾ. ಜೈದೀಪ್ ಡಿ ಅವರು ಹೇಳಿದ್ದಾರೆ.</p>.<p>'ಕೋವಿಡ್–19‘ ಪಿಡುಗಿನಿಂದಾಗಿ ಆರೋಗ್ಯ ವಿಮೆ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿದೆ. ಮಧ್ಯಮ ವರ್ಗದ ಜನರನ್ನು ತಲುಪುವುದು ಮತ್ತು ಅವರಿಗೆ ವಿಮೆ ಒದಗಿಸುವುದು ನಮ್ಮ ಸದ್ಯದ ಅತ್ಯಂತ ಪ್ರಮುಖ ಅಗತ್ಯವಾಗಿದೆ. ಈ ಕಾರಣಕ್ಕೆ<br />2 ಮತ್ತು 3 ನೇ ಹಂತದ ಪಟ್ಟಣ ಹಾಗೂ ನಗರಗಳ ಗ್ರಾಹಕರ ಅಗತ್ಯಗಳನ್ನು ಪೂರೈಸಲು ಈ ಒಪ್ಪಂದ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯ ವಿಮೆ ಕುರಿತು ಅರಿವು ಮೂಡಿಸುವಲ್ಲಿಯೂ ಈ ಒಪ್ಪಂದವು ನೆರವಾಗಲಿದೆ. ಇದರಿಂದ ಹೆಚ್ಚು ಜನರು ಆರೋಗ್ಯ ವಿಮೆ ಪಡೆಯುತ್ತಾರೆ ಎಂಬ ಭರವಸೆ ನಮಗೆ ಇದೆ’ ಎಂದು ಎಸ್ಬಿಐ ಜನರಲ್ ಇನ್ಶುರೆನ್ಸ್ನ ಸಿಇಒ ಪಿ. ಸಿ. ಕಂದ್ಪಾಲ್ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎರಡು ಮತ್ತು ಮೂರನೇ ಹಂತದ ನಗರ – ಪಟ್ಟಣಗಳಿಗೆ ವಿಮೆ ಸೌಲಭ್ಯ ವಿಸ್ತರಿಸಲು, ಎಸ್ಬಿಐ ಜನರಲ್ ಇನ್ಶುರೆನ್ಸ್, ಮಹೀಂದ್ರಾ ಇನ್ಶುರೆನ್ಸ್ ಬ್ರೋಕರ್ಸ್ ಲಿಮಿಟೆಡ್ (ಎಂಐಬಿಎಲ್) ಜೊತೆ ಒಪ್ಪಂದ ಮಾಡಿಕೊಂಡಿದೆ.</p>.<p>ಗ್ರಾಮೀಣ ಪ್ರದೇಶಗಳಲ್ಲಿ ವಿಮೆ ಸೌಲಭ್ಯ ವಿಸ್ತರಿಸಲು ಈ ಪಾಲುದಾರಿಕೆಯು ಗಮನಾರ್ಹ ಕೊಡುಗೆ ನೀಡಲಿದೆ. ಕಾರ್, ವಾಣಿಜ್ಯ ವಾಹನ, ಟ್ರ್ಯಾಕ್ಟರ್, ಬಳಸಿದ ಕಾರ್ ಹಾಗೂ ವಾಹನಗಳ ವಿಮೆಗೂ ‘ಎಂಐಬಿಎಲ್‘ ಜತೆಗಿನ ಈ ಪಾಲುದಾರಿಕೆ ನೆರವಾಗಲಿದೆ. ಕೈಗೆಟುಕುವ ದರದಲ್ಲಿ ಡಿಜಿಟಲ್ ವಿಧಾನದಲ್ಲಿ ವಿಮೆ ಸೌಲಭ್ಯ ಒದಗಿಸಲು ಇದರಿಂದ ಸಾಧ್ಯವಾಗಲಿದೆ ಎಂದು ’ಎಂಐಬಿಎಲ್‘ನ ವ್ಯವಸ್ಥಾಪಕ ನಿರ್ದೇಶಕ ಡಾ. ಜೈದೀಪ್ ಡಿ ಅವರು ಹೇಳಿದ್ದಾರೆ.</p>.<p>'ಕೋವಿಡ್–19‘ ಪಿಡುಗಿನಿಂದಾಗಿ ಆರೋಗ್ಯ ವಿಮೆ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿದೆ. ಮಧ್ಯಮ ವರ್ಗದ ಜನರನ್ನು ತಲುಪುವುದು ಮತ್ತು ಅವರಿಗೆ ವಿಮೆ ಒದಗಿಸುವುದು ನಮ್ಮ ಸದ್ಯದ ಅತ್ಯಂತ ಪ್ರಮುಖ ಅಗತ್ಯವಾಗಿದೆ. ಈ ಕಾರಣಕ್ಕೆ<br />2 ಮತ್ತು 3 ನೇ ಹಂತದ ಪಟ್ಟಣ ಹಾಗೂ ನಗರಗಳ ಗ್ರಾಹಕರ ಅಗತ್ಯಗಳನ್ನು ಪೂರೈಸಲು ಈ ಒಪ್ಪಂದ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯ ವಿಮೆ ಕುರಿತು ಅರಿವು ಮೂಡಿಸುವಲ್ಲಿಯೂ ಈ ಒಪ್ಪಂದವು ನೆರವಾಗಲಿದೆ. ಇದರಿಂದ ಹೆಚ್ಚು ಜನರು ಆರೋಗ್ಯ ವಿಮೆ ಪಡೆಯುತ್ತಾರೆ ಎಂಬ ಭರವಸೆ ನಮಗೆ ಇದೆ’ ಎಂದು ಎಸ್ಬಿಐ ಜನರಲ್ ಇನ್ಶುರೆನ್ಸ್ನ ಸಿಇಒ ಪಿ. ಸಿ. ಕಂದ್ಪಾಲ್ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>