ನವದೆಹಲಿ: ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ರಾಷ್ಟ್ರೀಯ ಉಳಿತಾಯ ಪತ್ರದಂತಹ (ಎನ್ಎಸ್ಸಿ) ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಏಪ್ರಿಲ್–ಜೂನ್ ತ್ರೈಮಾಸಿಕದ ಅವಧಿಗೆ ಯಥಾಸ್ಥಿತಿಯಲ್ಲಿ ಉಳಿಸಿಕೊಂಡಿದೆ. ಹಣದುಬ್ಬರ ಪ್ರಮಾಣವು ಹೆಚ್ಚಿನ ಮಟ್ಟದಲ್ಲಿ ಇರುವ ಕಾರಣ ಈ ತೀರ್ಮಾನ ಕೈಗೊಂಡಿದೆ.