ರಾಹುಲ್ ಗಾಂಧಿ ಏ.4ರಂದು ಬೆಳಿಗ್ಗೆ 11ಕ್ಕೆ ಪಟ್ಟಣಕ್ಕೆ ಆಗಮಿಸಲಿದ್ದು, ಸಮಾವೇಶದಲ್ಲಿ ಮಾತನಾಡುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನೇಕ ಜನಪರ ಕಾರ್ಯಗಳನ್ನು ಮಾಡಿದ್ದು, ಅವುಗಳನ್ನು ಜನರ ಮುಂದಿಡಲಿದ್ದಾರೆ. ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ತಿಳಿಸುವರು. ರಾಜ್ಯದ ಹಾಗೂ ರಾಷ್ಟ್ರದ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದರು.