<p><strong>ನವದೆಹಲಿ:</strong> 'ಉದ್ಯಮಗಳ ನಿರೀಕ್ಷೆಗೆ ಅನುಗುಣವಾಗಿ ಸರ್ಕಾರ ನೀತಿಗಳನ್ನು ಜಾರಿಗೊಳಿಸಿದ್ದು, ಈಗ ಹೆಚ್ಚಿನ ಹೂಡಿಕೆ ಮಾಡಲು ಹಿಂಜರಿಯಬಾರದು' ಎಂದು ಉದ್ಯಮಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಗುರುವಾರ) ಮನವಿ ಮಾಡಿದ್ದಾರೆ. </p><p>ಐಎಫ್ಕ್ಯೂಎಂ ವಿಚಾರ ಸಂಕಿರಣದಲ್ಲಿ ಮಾತನಾಡಿದ ನಿರ್ಮಲಾ, 'ಉದ್ಯಮಗಳಿಗೆ ಹೂಡಿಕೆ ಮಾಡಲು ಹಾಗೂ ಸಾಮರ್ಥ್ಯ ವಿಸ್ತರಿಸಲು ಇದು ಸಕಾಲವಾಗಿದೆ ಎಂದು ತಿಳಿಸಿದ್ದಾರೆ. </p><p>ಯುವಜನರನ್ನು ಕೌಶಲ್ಯಪೂರ್ಣಗೊಳಿಸುವಲ್ಲಿ ಬಜೆಟ್ಗೆ ಮುನ್ನ ಮಾತ್ರವಲ್ಲದೆ ವರ್ಷವಿಡೀ ಸರ್ಕಾರದೊಂದಿಗೆ ತೊಡಗಿಸಿಕೊಳ್ಳುವಂತೆ ನಿರ್ಮಲಾ ಒತ್ತಾಯಿಸಿದ್ದಾರೆ. </p><p>ಉದ್ಯಮವು ಈಗ ಏನು ಮಾಡಬೇಕು ಎಂಬ ಟಾಟಾ ಸನ್ಸ್ ಮುಖ್ಯಸ್ಥ ಎನ್. ಚಂದ್ರಶೇಖರನ್ ಅವರ ಪ್ರಶ್ನೆಗೆ ಉತ್ತರಿಸಿದ ಸೀತಾರಾಮನ್, 'ಸುಧಾರಣೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಂದೂ ಹಿಂಜರಿಕೆ ತೋರಿಲ್ಲ. ಉದ್ಯಮದ ಆಶೋತ್ತರಗಳನ್ನು ನಿರ್ಲಕ್ಷಿಸಿಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. </p><p>'ಉದ್ಯಮದ ನಿರೀಕ್ಷೆಗೆ ಅನುಗುಣವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಸುಲಭವಾಗಿ ವ್ಯಾಪಾರ ಮಾಡಲು, ತೆರಿಗೆ ಸರಳೀಕರಣ, ಎಫ್ಡಿಐ ಸೇರಿದಂತೆ ಉದ್ಯಮಕ್ಕೆ ಅನುಕೂಲಕಾರದ ನೀತಿಯನ್ನು ರೂಪಿಸಿದೆ' ಎಂದು ಹೇಳಿದ್ದಾರೆ. </p>.ಜಿಎಸ್ಟಿ ಪರಿಷ್ಕರಣೆ | ದೇಶದ ಅರ್ಥ ವ್ಯವಸ್ಥೆಗೆ ₹2 ಲಕ್ಷ ಕೋಟಿ: ಸಚಿವೆ ನಿರ್ಮಲಾ.GST ಪರಿಷ್ಕರಣೆಯಿಂದ ದರ ಕಡಿತ: ಮಳಿಗೆ ಮುಂದೆ ಜಾಹೀರಾತಿಗೆ ಸಚಿವಾಲಯದ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಉದ್ಯಮಗಳ ನಿರೀಕ್ಷೆಗೆ ಅನುಗುಣವಾಗಿ ಸರ್ಕಾರ ನೀತಿಗಳನ್ನು ಜಾರಿಗೊಳಿಸಿದ್ದು, ಈಗ ಹೆಚ್ಚಿನ ಹೂಡಿಕೆ ಮಾಡಲು ಹಿಂಜರಿಯಬಾರದು' ಎಂದು ಉದ್ಯಮಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಗುರುವಾರ) ಮನವಿ ಮಾಡಿದ್ದಾರೆ. </p><p>ಐಎಫ್ಕ್ಯೂಎಂ ವಿಚಾರ ಸಂಕಿರಣದಲ್ಲಿ ಮಾತನಾಡಿದ ನಿರ್ಮಲಾ, 'ಉದ್ಯಮಗಳಿಗೆ ಹೂಡಿಕೆ ಮಾಡಲು ಹಾಗೂ ಸಾಮರ್ಥ್ಯ ವಿಸ್ತರಿಸಲು ಇದು ಸಕಾಲವಾಗಿದೆ ಎಂದು ತಿಳಿಸಿದ್ದಾರೆ. </p><p>ಯುವಜನರನ್ನು ಕೌಶಲ್ಯಪೂರ್ಣಗೊಳಿಸುವಲ್ಲಿ ಬಜೆಟ್ಗೆ ಮುನ್ನ ಮಾತ್ರವಲ್ಲದೆ ವರ್ಷವಿಡೀ ಸರ್ಕಾರದೊಂದಿಗೆ ತೊಡಗಿಸಿಕೊಳ್ಳುವಂತೆ ನಿರ್ಮಲಾ ಒತ್ತಾಯಿಸಿದ್ದಾರೆ. </p><p>ಉದ್ಯಮವು ಈಗ ಏನು ಮಾಡಬೇಕು ಎಂಬ ಟಾಟಾ ಸನ್ಸ್ ಮುಖ್ಯಸ್ಥ ಎನ್. ಚಂದ್ರಶೇಖರನ್ ಅವರ ಪ್ರಶ್ನೆಗೆ ಉತ್ತರಿಸಿದ ಸೀತಾರಾಮನ್, 'ಸುಧಾರಣೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಂದೂ ಹಿಂಜರಿಕೆ ತೋರಿಲ್ಲ. ಉದ್ಯಮದ ಆಶೋತ್ತರಗಳನ್ನು ನಿರ್ಲಕ್ಷಿಸಿಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. </p><p>'ಉದ್ಯಮದ ನಿರೀಕ್ಷೆಗೆ ಅನುಗುಣವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಸುಲಭವಾಗಿ ವ್ಯಾಪಾರ ಮಾಡಲು, ತೆರಿಗೆ ಸರಳೀಕರಣ, ಎಫ್ಡಿಐ ಸೇರಿದಂತೆ ಉದ್ಯಮಕ್ಕೆ ಅನುಕೂಲಕಾರದ ನೀತಿಯನ್ನು ರೂಪಿಸಿದೆ' ಎಂದು ಹೇಳಿದ್ದಾರೆ. </p>.ಜಿಎಸ್ಟಿ ಪರಿಷ್ಕರಣೆ | ದೇಶದ ಅರ್ಥ ವ್ಯವಸ್ಥೆಗೆ ₹2 ಲಕ್ಷ ಕೋಟಿ: ಸಚಿವೆ ನಿರ್ಮಲಾ.GST ಪರಿಷ್ಕರಣೆಯಿಂದ ದರ ಕಡಿತ: ಮಳಿಗೆ ಮುಂದೆ ಜಾಹೀರಾತಿಗೆ ಸಚಿವಾಲಯದ ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>