‘ಮುಕ್ತ ಅವಕಾಶದ ಮೂಲಕ ಕೈಗಾರಿಕೆಗಳಿಗೆ ಕಡಿಮೆ ದರದಲ್ಲಿ ವಿದ್ಯುತ್ ಪೂರೈಕೆ’ ಕುರಿತು ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಅಸೋಚಾಂ ವತಿಯಿಂದ ಮಂಗಳವಾರ ಆಯೋಜಿಸಿದ್ದ ವೆಬಿನಾರ್ ಉದ್ಘಾಟಿಸಿ ಮಾತನಾಡಿದ ಅವರು, ‘ಕೋವಿಡ್ ಸಾಂಕ್ರಾಮಿಕ ಎದುರಿಸುತ್ತಿರುವ ಅವಧಿಯಲ್ಲೇ ರಾಜ್ಯದಲ್ಲಿ ₹ 1,54,093 ಕೋಟಿ ಮೊತ್ತದ ಹೂಡಿಕೆ ಮಾಡಲು ಉದ್ಯಮಿಗಳು ಆಸಕ್ತಿ ತೋರಿದ್ದಾರೆ ಎಂಬುದನ್ನು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ತಿಳಿಸಿದೆ’ ಎಂದರು.