ಬ್ಯಾಂಕ್ನ ಆರ್ಥಿಕ ಮುಗ್ಗಟ್ಟಿಗೆ ಇತರ ಕಾರಣಗಳ ಜೊತೆಗೆಉನ್ನತ ಅಧಿಕಾರಿಗಳ ಅವ್ಯವಹಾರಗಳ ಪಾಲು ಇರುವುದರಿಂದ ಬ್ಯಾಂಕ್ನ ನಿರ್ದೇಶಕ ಮಂಡಳಿ ಪುನರ್ರಚನೆಗೆ ಸರ್ಕಾರ ಮುಂದಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿಕೆ ನೀಡಿದ್ದರು. ಈ ಬಿಕ್ಕಟ್ಟಿಗೆ ಕಾರಣರಾದ ತಪ್ಪಿತಸ್ಥರನ್ನು ಗುರುತಿಸಲು ಆರ್ಬಿಐ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಶೋಧ ನಡೆಸಿದೆ.