<p><strong>ನವದೆಹಲಿ:</strong> ಭಾರತೀಯ ರಿಸರ್ವ್ ಬ್ಯಾಂಕ್ನ ಮೀಸಲು ನಿಧಿಯ ಪ್ರಮಾಣ ನಿರ್ಧರಿಸಲು ರಚಿಸಲಾಗಿರುವ ಬಿಮಲ್ ಜಲನ್ ಸಮಿತಿಯು ಏಪ್ರಿಲ್ ತಿಂಗಳಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ.</p>.<p>ಆರ್ಬಿಐನ ಮಾಜಿ ಗವರ್ನರ್ ಬಿಮಲ್ ಜಲನ್ ನೇತೃತ್ವದ ಸಮಿತಿಯು ಮಂಗಳವಾರ ಮೊದಲ ಬಾರಿಗೆ ಸಭೆ ಸೇರಿ ಚರ್ಚೆ ನಡೆಸಿತು.ಹಣಕಾಸು ವ್ಯವಹಾರಗಳ ಮಾಜಿ ಕಾರ್ಯದರ್ಶಿ ರಾಕೇಶ್ ಮೋಹನ್ ಅವರು ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ.</p>.<p>ಕೇಂದ್ರೀಯ ಬ್ಯಾಂಕ್ನ ಮೀಸಲು ನಿಧಿಗೆ ಸಂಬಂಧಿಸಿದಂತೆ ವಿಶ್ವದಾದ್ಯಂತ ಬಳಕೆಯಲ್ಲಿ ಇರುವ ನಿಯಮಗಳನ್ನು ಪರಿಶೀಲಿಸಿ ಭಾರತಕ್ಕೆ ಹೊಂದಾಣಿಕೆಯಾಗುವಂತಹ ವ್ಯವಸ್ಥೆ ಶಿಫಾರಸು ಮಾಡಲು ಸಮಿತಿಗೆ ಸೂಚಿಸಲಾಗಿದೆ.</p>.<p>ಆರ್ಬಿಐ, ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತುರ್ತು ನಿಧಿ ಹೊಂದುವುದೂ ಸೇರಿದಂತೆ, ಲಾಭ ವಿತರಣೆಯ ಹೊಸ ಪ್ರಸ್ತಾವವನ್ನು ಸಮಿತಿಯು ಮುಂದಿಡಲಿದೆ.</p>.<p>ಆರ್ಬಿಐ ಬಳಿ ಇರುವ ₹ 9.6 ಲಕ್ಷ ಕೋಟಿ ಹೆಚ್ಚುವರಿ ಬಂಡವಾಳದಲ್ಲಿ ಕೆಲ ಪಾಲನ್ನು ತನಗೆ ವರ್ಗಾಯಿಸಬೇಕು ಎಂದು ಕೇಂದ್ರ ಸರ್ಕಾರ ಪಟ್ಟು ಹಿಡಿದಿತ್ತು. ಇದಕ್ಕೆ ಆರ್ಬಿಐನ ಮಾಜಿ ಗವರ್ನರ್ ಉರ್ಜಿತ್ ಪಟೇಲ್ ಅವರು ವಿರೋಧ ವ್ಯಕ್ತಪಡಿಸಿದ್ದರು. ಇದು ಸಂಘರ್ಘಕ್ಕೆ ಎಡೆಮಾಡಿಕೊಟ್ಟಿತ್ತು.</p>.<p>ಈ ಕಾರಣಕ್ಕೆ ಆರ್ಬಿಐ ನವೆಂಬರ್ 19ರ ಸಭೆಯಲ್ಲಿ ಮೀಸಲು ನಿಧಿಯ ಹೊಸ ಸ್ವರೂಪ ನಿಗದಿಪಡಿಸಲು ಸಮಿತಿ ರಚಿಸಲು ನಿರ್ಧರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತೀಯ ರಿಸರ್ವ್ ಬ್ಯಾಂಕ್ನ ಮೀಸಲು ನಿಧಿಯ ಪ್ರಮಾಣ ನಿರ್ಧರಿಸಲು ರಚಿಸಲಾಗಿರುವ ಬಿಮಲ್ ಜಲನ್ ಸಮಿತಿಯು ಏಪ್ರಿಲ್ ತಿಂಗಳಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ.</p>.<p>ಆರ್ಬಿಐನ ಮಾಜಿ ಗವರ್ನರ್ ಬಿಮಲ್ ಜಲನ್ ನೇತೃತ್ವದ ಸಮಿತಿಯು ಮಂಗಳವಾರ ಮೊದಲ ಬಾರಿಗೆ ಸಭೆ ಸೇರಿ ಚರ್ಚೆ ನಡೆಸಿತು.ಹಣಕಾಸು ವ್ಯವಹಾರಗಳ ಮಾಜಿ ಕಾರ್ಯದರ್ಶಿ ರಾಕೇಶ್ ಮೋಹನ್ ಅವರು ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ.</p>.<p>ಕೇಂದ್ರೀಯ ಬ್ಯಾಂಕ್ನ ಮೀಸಲು ನಿಧಿಗೆ ಸಂಬಂಧಿಸಿದಂತೆ ವಿಶ್ವದಾದ್ಯಂತ ಬಳಕೆಯಲ್ಲಿ ಇರುವ ನಿಯಮಗಳನ್ನು ಪರಿಶೀಲಿಸಿ ಭಾರತಕ್ಕೆ ಹೊಂದಾಣಿಕೆಯಾಗುವಂತಹ ವ್ಯವಸ್ಥೆ ಶಿಫಾರಸು ಮಾಡಲು ಸಮಿತಿಗೆ ಸೂಚಿಸಲಾಗಿದೆ.</p>.<p>ಆರ್ಬಿಐ, ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತುರ್ತು ನಿಧಿ ಹೊಂದುವುದೂ ಸೇರಿದಂತೆ, ಲಾಭ ವಿತರಣೆಯ ಹೊಸ ಪ್ರಸ್ತಾವವನ್ನು ಸಮಿತಿಯು ಮುಂದಿಡಲಿದೆ.</p>.<p>ಆರ್ಬಿಐ ಬಳಿ ಇರುವ ₹ 9.6 ಲಕ್ಷ ಕೋಟಿ ಹೆಚ್ಚುವರಿ ಬಂಡವಾಳದಲ್ಲಿ ಕೆಲ ಪಾಲನ್ನು ತನಗೆ ವರ್ಗಾಯಿಸಬೇಕು ಎಂದು ಕೇಂದ್ರ ಸರ್ಕಾರ ಪಟ್ಟು ಹಿಡಿದಿತ್ತು. ಇದಕ್ಕೆ ಆರ್ಬಿಐನ ಮಾಜಿ ಗವರ್ನರ್ ಉರ್ಜಿತ್ ಪಟೇಲ್ ಅವರು ವಿರೋಧ ವ್ಯಕ್ತಪಡಿಸಿದ್ದರು. ಇದು ಸಂಘರ್ಘಕ್ಕೆ ಎಡೆಮಾಡಿಕೊಟ್ಟಿತ್ತು.</p>.<p>ಈ ಕಾರಣಕ್ಕೆ ಆರ್ಬಿಐ ನವೆಂಬರ್ 19ರ ಸಭೆಯಲ್ಲಿ ಮೀಸಲು ನಿಧಿಯ ಹೊಸ ಸ್ವರೂಪ ನಿಗದಿಪಡಿಸಲು ಸಮಿತಿ ರಚಿಸಲು ನಿರ್ಧರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>