<p><strong>ಮುಂಬೈ:</strong> ವಿಮಾನಗಳ ಹಾರಾಟ ಸ್ಥಗಿತಗೊಳಿಸಿರುವ ಜೆಟ್ ಏರ್ವೇಸ್ ಸ್ವಾಧೀನಪಡಿಸಿಕೊಳ್ಳಲು ಮುಂದಾಗಬೇಕು ಎಂದು ಬ್ಯಾಂಕ್ ಉದ್ಯೋಗಿಗಳ ಸಂಘವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.</p>.<p>22 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಹಿತ ರಕ್ಷಿಸಲು ಸರ್ಕಾರ ಈ ನಿರ್ಧಾರಕ್ಕೆ ಬರಬೇಕು ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.</p>.<p>ಹಣಕಾಸಿನ ಮುಗ್ಗಟ್ಟಿನ ಭಾರಕ್ಕೆ ಕುಸಿದಿರುವ ವಿಮಾನಯಾನ ಸಂಸ್ಥೆಗೆ ಬ್ಯಾಂಕ್ಗಳು ಸಾಲ ನೀಡದಂತೆ ನೋಡಿಕೊಳ್ಳಬೇಕು ಎಂದೂ ಪತ್ರದಲ್ಲಿ ಮನವಿ ಮಾಡಲಾಗಿದೆ.</p>.<p>ಸಂಸ್ಥೆಯಲ್ಲಿನ ಪಾಲು ಬಂಡವಾಳ ಮಾರಾಟ ಮಾಡಲು ಬ್ಯಾಂಕ್ ಒಕ್ಕೂಟ ಬಿಡ್ ಆಹ್ವಾನಿಸಿದೆ. ಈ ಪ್ರಕ್ರಿಯೆ ಯಶಸ್ವಿಯಾಗದಿದ್ದರೆ ಸರ್ಕಾರವೇ ಸಂಸ್ಥೆಯನ್ನು ತನ್ನ ವಶಕ್ಕೆ ಪಡೆದುಕೊಳ್ಳಬೇಕು. ಬ್ಯಾಂಕ್ಗಳು ಸಂಸ್ಥೆಗೆ ಇನ್ನಷ್ಟು ಸಾಲ ನೀಡುವ ಯಾವುದೇ ಪ್ರಯತ್ನಕ್ಕೆ ತಮ್ಮ ವಿರೋಧ ಇದೆ ಎಂದೂ ಸಂಘವು ಸ್ಪಷ್ಟಪಡಿಸಿದೆ.</p>.<p>ಸ್ಥಾಪಕ ನರೇಶ್ ಗೋಯಲ್ ಅವರು ಈಗಲೂ ಸಂಸ್ಥೆಯಲ್ಲಿ ಶೇ51ರಷ್ಟು ಪಾಲು ಬಂಡವಾಳ ಹೊಂದಿದ್ದಾರೆ. ಸಂಸ್ಥೆಯನ್ನು ಪುನರಾರರಂಭ ಮಾಡುವುದು ಅಥವಾ ಬೇರೊಬ್ಬರಿಗೆ ಮಾರಾಟ ಮಾಡುವುದು ಅವರ ತಲೆನೋವಿನ ವಿಷಯವಾಗಿದೆ. ಇಡೀ ಬಿಕ್ಕಟ್ಟಿನ ಬಗ್ಗೆ ಗೋಯಲ್ ಅವರೊಬ್ಬರೇ ಉತ್ತರ ನೀಡಬಲ್ಲವರಾಗಿದ್ದಾರೆ ಎಂದೂ ಸಂಘ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ವಿಮಾನಗಳ ಹಾರಾಟ ಸ್ಥಗಿತಗೊಳಿಸಿರುವ ಜೆಟ್ ಏರ್ವೇಸ್ ಸ್ವಾಧೀನಪಡಿಸಿಕೊಳ್ಳಲು ಮುಂದಾಗಬೇಕು ಎಂದು ಬ್ಯಾಂಕ್ ಉದ್ಯೋಗಿಗಳ ಸಂಘವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.</p>.<p>22 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಹಿತ ರಕ್ಷಿಸಲು ಸರ್ಕಾರ ಈ ನಿರ್ಧಾರಕ್ಕೆ ಬರಬೇಕು ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.</p>.<p>ಹಣಕಾಸಿನ ಮುಗ್ಗಟ್ಟಿನ ಭಾರಕ್ಕೆ ಕುಸಿದಿರುವ ವಿಮಾನಯಾನ ಸಂಸ್ಥೆಗೆ ಬ್ಯಾಂಕ್ಗಳು ಸಾಲ ನೀಡದಂತೆ ನೋಡಿಕೊಳ್ಳಬೇಕು ಎಂದೂ ಪತ್ರದಲ್ಲಿ ಮನವಿ ಮಾಡಲಾಗಿದೆ.</p>.<p>ಸಂಸ್ಥೆಯಲ್ಲಿನ ಪಾಲು ಬಂಡವಾಳ ಮಾರಾಟ ಮಾಡಲು ಬ್ಯಾಂಕ್ ಒಕ್ಕೂಟ ಬಿಡ್ ಆಹ್ವಾನಿಸಿದೆ. ಈ ಪ್ರಕ್ರಿಯೆ ಯಶಸ್ವಿಯಾಗದಿದ್ದರೆ ಸರ್ಕಾರವೇ ಸಂಸ್ಥೆಯನ್ನು ತನ್ನ ವಶಕ್ಕೆ ಪಡೆದುಕೊಳ್ಳಬೇಕು. ಬ್ಯಾಂಕ್ಗಳು ಸಂಸ್ಥೆಗೆ ಇನ್ನಷ್ಟು ಸಾಲ ನೀಡುವ ಯಾವುದೇ ಪ್ರಯತ್ನಕ್ಕೆ ತಮ್ಮ ವಿರೋಧ ಇದೆ ಎಂದೂ ಸಂಘವು ಸ್ಪಷ್ಟಪಡಿಸಿದೆ.</p>.<p>ಸ್ಥಾಪಕ ನರೇಶ್ ಗೋಯಲ್ ಅವರು ಈಗಲೂ ಸಂಸ್ಥೆಯಲ್ಲಿ ಶೇ51ರಷ್ಟು ಪಾಲು ಬಂಡವಾಳ ಹೊಂದಿದ್ದಾರೆ. ಸಂಸ್ಥೆಯನ್ನು ಪುನರಾರರಂಭ ಮಾಡುವುದು ಅಥವಾ ಬೇರೊಬ್ಬರಿಗೆ ಮಾರಾಟ ಮಾಡುವುದು ಅವರ ತಲೆನೋವಿನ ವಿಷಯವಾಗಿದೆ. ಇಡೀ ಬಿಕ್ಕಟ್ಟಿನ ಬಗ್ಗೆ ಗೋಯಲ್ ಅವರೊಬ್ಬರೇ ಉತ್ತರ ನೀಡಬಲ್ಲವರಾಗಿದ್ದಾರೆ ಎಂದೂ ಸಂಘ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>