₹ 1,500 ಕೋಟಿಗಳ ನೆರವು ನೀಡಿ ಸಂಸ್ಥೆಯಲ್ಲಿ ಶೇ 51ರಷ್ಟು ಪಾಲು ಬಂಡವಾಳ ಹೊಂದಲಿರುವ ಎಸ್ಬಿಐ ನೇತೃತ್ವದಲ್ಲಿನ ಬ್ಯಾಂಕ್ ಒಕ್ಕೂಟವು, ವಿಮಾನಯಾನ ಸಂಸ್ಥೆಯನ್ನು ಬೇರೆಯವರಿಗೆ ಮಾರಾಟ ಮಾಡಲು ಉದ್ದೇಶಿಸಿವೆ. ಪರಿಹಾರ ಯೋಜನೆ ಅನ್ವಯ, ಸಂಸ್ಥೆಯ ಸ್ಥಾಪಕ ಮತ್ತು ಅಧ್ಯಕ್ಷ ನರೇಶ್ ಗೋಯಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ.