<p><strong>ನವದೆಹಲಿ:</strong> ಉದ್ಯೋಗ ಸೃಷ್ಟಿ, ಕೃಷಿ ಉತ್ಪಾದಕತೆ ಹೆಚ್ಚಳ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಸಾರ್ವಜನಿಕ ಬಂಡವಾಳ ಸಂಗ್ರಹಕ್ಕೆ ಒತ್ತು ನೀಡಬೇಕು ಎಂದು ಅರ್ಥಶಾಸ್ತ್ರಜ್ಞರು, ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.</p>.<p>2025–26ನೇ ಸಾಲಿನ ಬಜೆಟ್ ಅಂಗವಾಗಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಆಯೋಗದ ಕಚೇರಿಯಲ್ಲಿ ಅರ್ಥಶಾಸ್ತ್ರಜ್ಞರು ಹಾಗೂ ವಿವಿಧ ವಲಯದ ತಜ್ಞರೊಟ್ಟಿಗೆ ಸಮಾಲೋಚನೆ ನಡೆಸಿದರು. </p>.<p>ಜಾಗತಿಕ ಮಟ್ಟದಲ್ಲಿ ತಲೆದೋರಿರುವ ಬಿಕ್ಕಟ್ಟು ಹಾಗೂ ಅದರಿಂದ ಭಾರತದ ಆರ್ಥಿಕತೆ ಬೆಳವಣಿಗೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ ಅರ್ಥಶಾಸ್ತ್ರಜ್ಞರು ಮಾಹಿತಿ ಹಂಚಿಕೊಂಡರು. ಎಲ್ಲಾ ವಲಯದಲ್ಲೂ ಉದ್ಯೋಗ ಸೃಷ್ಟಿಗೆ ಸರ್ಕಾರ ಕ್ರಮವಹಿಸಬೇಕು. ಆ ಮೂಲಕ ಯುವಜನರ ಸಬಲೀಕರಣಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.</p>.<p>ಉದ್ಯೋಗ ಸೃಷ್ಟಿಗೆ ಪೂರಕವಾಗಿ ಶಿಕ್ಷಣ ಮತ್ತು ಕೌಶಲ ತರಬೇತಿ ನೀಡಬೇಕು. ಕೃಷಿ ಚಟುವಟಿಕೆಗಳ ಹೆಚ್ಚಳಕ್ಕೆ ಅಗತ್ಯವಿರುವ ಕಾರ್ಯಕ್ರಮ ರೂಪಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಗೆ ಸುಸ್ಥಿರ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉದ್ಯೋಗ ಸೃಷ್ಟಿ, ಕೃಷಿ ಉತ್ಪಾದಕತೆ ಹೆಚ್ಚಳ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಸಾರ್ವಜನಿಕ ಬಂಡವಾಳ ಸಂಗ್ರಹಕ್ಕೆ ಒತ್ತು ನೀಡಬೇಕು ಎಂದು ಅರ್ಥಶಾಸ್ತ್ರಜ್ಞರು, ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.</p>.<p>2025–26ನೇ ಸಾಲಿನ ಬಜೆಟ್ ಅಂಗವಾಗಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಆಯೋಗದ ಕಚೇರಿಯಲ್ಲಿ ಅರ್ಥಶಾಸ್ತ್ರಜ್ಞರು ಹಾಗೂ ವಿವಿಧ ವಲಯದ ತಜ್ಞರೊಟ್ಟಿಗೆ ಸಮಾಲೋಚನೆ ನಡೆಸಿದರು. </p>.<p>ಜಾಗತಿಕ ಮಟ್ಟದಲ್ಲಿ ತಲೆದೋರಿರುವ ಬಿಕ್ಕಟ್ಟು ಹಾಗೂ ಅದರಿಂದ ಭಾರತದ ಆರ್ಥಿಕತೆ ಬೆಳವಣಿಗೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ ಅರ್ಥಶಾಸ್ತ್ರಜ್ಞರು ಮಾಹಿತಿ ಹಂಚಿಕೊಂಡರು. ಎಲ್ಲಾ ವಲಯದಲ್ಲೂ ಉದ್ಯೋಗ ಸೃಷ್ಟಿಗೆ ಸರ್ಕಾರ ಕ್ರಮವಹಿಸಬೇಕು. ಆ ಮೂಲಕ ಯುವಜನರ ಸಬಲೀಕರಣಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.</p>.<p>ಉದ್ಯೋಗ ಸೃಷ್ಟಿಗೆ ಪೂರಕವಾಗಿ ಶಿಕ್ಷಣ ಮತ್ತು ಕೌಶಲ ತರಬೇತಿ ನೀಡಬೇಕು. ಕೃಷಿ ಚಟುವಟಿಕೆಗಳ ಹೆಚ್ಚಳಕ್ಕೆ ಅಗತ್ಯವಿರುವ ಕಾರ್ಯಕ್ರಮ ರೂಪಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಗೆ ಸುಸ್ಥಿರ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>