ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್‌ನದು ಸುರಕ್ಷಿತ ಮಾನದಂಡ: ಎಂ.ಎಸ್‌. ಮಹಾಬಲೇಶ್ವರ

Last Updated 13 ಮಾರ್ಚ್ 2020, 19:45 IST
ಅಕ್ಷರ ಗಾತ್ರ

ಮಂಗಳೂರು: ಬಂಡವಾಳ ಪರ್ಯಾಪ್ತತಾ ಅನುಪಾತವೇ ಬ್ಯಾಂಕ್‌ಗಳ ಸುರಕ್ಷತೆಯ ಮಾನದಂಡ ಎಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ಸ್ಪಷ್ಟಪಡಿಸಿದ್ದಾರೆ.

‘ವಿದೇಶಗಳಲ್ಲಿ ‘ಬಂಡವಾಳ ಪರ್ಯಾಪ್ತತಾ ಅನುಪಾತ’ಕ್ಕೆ ಬ್ಯಾಂಕಿನ ಮುಂಗಡ, ಹೂಡಿಕೆ ಇತ್ಯಾದಿಗಳ ಸುರಕ್ಷತೆಯ ಆಧಾರದ ಮೇಲೆ ಕನಿಷ್ಠ ಶೇ 8ರ ಮಾನದಂಡವನ್ನು ಪಾಲಿಸುತ್ತಿದ್ದರೆ, ಭಾರತದಲ್ಲಿ ಕನಿಷ್ಠ ಶೇ 9ರ ಅನುಪಾತವನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದೆ. ಆದರೆ ಕರ್ಣಾಟಕ ಬ್ಯಾಂಕ್‌ ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಶೇ 9ರ ಅನುಪಾತಕ್ಕೆ ಇನ್ನೂ ಶೇ 1 ಹೆಚ್ಚಾಗಿಯೇ ಇದೆ’ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ‘ಎಂ- ಕ್ಯಾಪ್’ ಅನುಪಾತ ಅರ್ಥವಿಲ್ಲದ್ದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT