<p><strong>ಮಂಗಳೂರು: </strong>ಕರ್ಣಾಟಕ ಬ್ಯಾಂಕ್ ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದ ಅಂತ್ಯಕ್ಕೆ ₹ 106.08 ಕೋಟಿ ನಿವ್ವಳ ಲಾಭವನ್ನು ಘೋಷಿಸಿದೆ.</p>.<p>ಮಾರ್ಚ್ 31ಕ್ಕೆ ಕೊನೆಗೊಂಡ ಈ ಹಿಂದಿನ ತ್ರೈಮಾಸಿಕದ ಅಂತ್ಯಕ್ಕೆ ₹ 31.36 ಕೋಟಿ ಲಾಭ ದಾಖಲಿಸಿತ್ತು. ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಬ್ಯಾಂಕ್ ಶೇ 238.26 ಬೆಳವಣಿಗೆ ಸಾಧಿಸಿದಂತಾಗಿದೆ.</p>.<p>ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ವೆಬೆಕ್ಸ್ ಮೂಲಕ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಮೊದಲ ತ್ರೈಮಾಸಿಕದ ಹಣಕಾಸು ವರದಿಯನ್ನು ಅಂಗೀಕರಿಸಲಾಯಿತು.</p>.<p>ನಿರ್ವಹಣಾ ಲಾಭವು ₹ 414.22 ಕೋಟಿ ತಲುಪಿದ್ದು, ಶೇ 7.96ರ ವೃದ್ಧಿ ದಾಖಲಿಸಿದೆ. ನಿವ್ವಳ ಬಡ್ಡಿ ಆದಾಯವು ₹ 574.79 ಕೋಟಿಯಾಗಿದ್ದು, ಶೇ 25.19ರಷ್ಟು ಪ್ರಗತಿ ಸಾಧಿಸಿದೆ. ಬ್ಯಾಂಕಿನ ಒಟ್ಟು ವ್ಯವಹಾರವು ₹1.28 ಲಕ್ಷ ಕೋಟಿಗೆ ತಲುಪಿದ್ದು, ಠೇವಣಿಗಳ ಮೊತ್ತವು ₹76,214.78 ಕೋಟಿಯಾಗಿದೆ. ₹ 51,791.21 ಕೋಟಿ ಮುಂಗಡ ನೀಡಲಾಗಿದೆ.</p>.<p>‘ಮುಂಬರುವ ತ್ರೈಮಾಸಿಕದಲ್ಲಿ ಬ್ಯಾಂಕಿನ ಮೂಲ ವ್ಯವಹಾರಗಳು ಮತ್ತಷ್ಟು ಗಟ್ಟಿಗೊಳ್ಳಲಿವೆ’ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಕರ್ಣಾಟಕ ಬ್ಯಾಂಕ್ ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದ ಅಂತ್ಯಕ್ಕೆ ₹ 106.08 ಕೋಟಿ ನಿವ್ವಳ ಲಾಭವನ್ನು ಘೋಷಿಸಿದೆ.</p>.<p>ಮಾರ್ಚ್ 31ಕ್ಕೆ ಕೊನೆಗೊಂಡ ಈ ಹಿಂದಿನ ತ್ರೈಮಾಸಿಕದ ಅಂತ್ಯಕ್ಕೆ ₹ 31.36 ಕೋಟಿ ಲಾಭ ದಾಖಲಿಸಿತ್ತು. ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಬ್ಯಾಂಕ್ ಶೇ 238.26 ಬೆಳವಣಿಗೆ ಸಾಧಿಸಿದಂತಾಗಿದೆ.</p>.<p>ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ವೆಬೆಕ್ಸ್ ಮೂಲಕ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಮೊದಲ ತ್ರೈಮಾಸಿಕದ ಹಣಕಾಸು ವರದಿಯನ್ನು ಅಂಗೀಕರಿಸಲಾಯಿತು.</p>.<p>ನಿರ್ವಹಣಾ ಲಾಭವು ₹ 414.22 ಕೋಟಿ ತಲುಪಿದ್ದು, ಶೇ 7.96ರ ವೃದ್ಧಿ ದಾಖಲಿಸಿದೆ. ನಿವ್ವಳ ಬಡ್ಡಿ ಆದಾಯವು ₹ 574.79 ಕೋಟಿಯಾಗಿದ್ದು, ಶೇ 25.19ರಷ್ಟು ಪ್ರಗತಿ ಸಾಧಿಸಿದೆ. ಬ್ಯಾಂಕಿನ ಒಟ್ಟು ವ್ಯವಹಾರವು ₹1.28 ಲಕ್ಷ ಕೋಟಿಗೆ ತಲುಪಿದ್ದು, ಠೇವಣಿಗಳ ಮೊತ್ತವು ₹76,214.78 ಕೋಟಿಯಾಗಿದೆ. ₹ 51,791.21 ಕೋಟಿ ಮುಂಗಡ ನೀಡಲಾಗಿದೆ.</p>.<p>‘ಮುಂಬರುವ ತ್ರೈಮಾಸಿಕದಲ್ಲಿ ಬ್ಯಾಂಕಿನ ಮೂಲ ವ್ಯವಹಾರಗಳು ಮತ್ತಷ್ಟು ಗಟ್ಟಿಗೊಳ್ಳಲಿವೆ’ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>