<p><strong>ಬೆಂಗಳೂರು:</strong> ಖಾಸಗಿ ವಲಯದ ಕರ್ಣಾಟಕ ಬ್ಯಾಂಕ್ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹319.12 ಕೋಟಿ ಲಾಭ ಗಳಿಸಿದ್ದು, ಜೂನ್ಗೆ ಕೊನೆಗೊಂಡ ತ್ರೈಮಾಸಿಕದ ಲಾಭಕ್ಕೆ ಹೋಲಿಸಿದರೆ ಶೇಕಡ 9.1ರಷ್ಟು ಹೆಚ್ಚಳ ಆಗಿದೆ.</p>.<p>ಜೂನ್ ತ್ರೈಮಾಸಿಕದಲ್ಲಿ ಬ್ಯಾಂಕ್ ₹292.40 ಕೋಟಿ ಲಾಭ ಗಳಿಸಿತ್ತು. ಬ್ಯಾಂಕ್ನ ಆಡಳಿತ ಮಂಡಳಿಯ ಸಭೆಯು ಮಂಗಳೂರಿನಲ್ಲಿ ಶನಿವಾರ ನಡೆಯಿತು. ಹಣಕಾಸಿನ ಫಲಿತಾಂಶಕ್ಕೆ ಮಂಡಳಿಯು ಅನುಮೋದನೆ ನೀಡಿದೆ.</p>.<p>2025–26ನೇ ಹಣಕಾಸು ವರ್ಷದ ಮೊದಲಾರ್ಧದಲ್ಲಿ (ಸೆಪ್ಟೆಂಬರ್ 30ಕ್ಕೆ ಕೊನೆಗೊಂಡ 6 ತಿಂಗಳ ಅವಧಿ) ಬ್ಯಾಂಕ್ನ ನಿವ್ವಳ ಲಾಭವು ₹611.52 ಕೋಟಿ ಆಗಿದೆ. ಹಿಂದಿನ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಬ್ಯಾಂಕ್ ₹736.40 ಕೋಟಿ ನಿವ್ವಳ ಲಾಭ ಕಂಡಿತ್ತು ಎಂದು ಪ್ರಕಟಣೆ ತಿಳಿಸಿದೆ.</p>.<p>ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಬ್ಯಾಂಕ್ನ ನಿವ್ವಳ ಬಡ್ಡಿ ವರಮಾನವು ₹728 ಕೋಟಿ ಆಗಿದೆ. ಬ್ಯಾಂಕ್ನ ಒಟ್ಟು ಎನ್ಪಿಎ ಪ್ರಮಾಣವು ಶೇ 3.33ಕ್ಕೆ ಇಳಿಕೆ ಆಗಿದೆ. ನಿವ್ವಳ ಎನ್ಪಿಎ ಪ್ರಮಾಣವು ಜೂನ್ ತ್ರೈಮಾಸಿಕದಲ್ಲಿ ಶೇ 1.44ರಷ್ಟು ಇದ್ದಿದ್ದು, ಈಗ ಶೇ 1.35ಕ್ಕೆ ತಗ್ಗಿದೆ.</p>.<p>‘ಕೃಷಿ ವಲಯ, ವೈಯಕ್ತಿಕ ಹಣಕಾಸಿನ ಅಗತ್ಯಗಳು, ಎಂಎಸ್ಎಂಇ ವಲಯದ ಮೇಲೆ ಗಮನ ನೀಡುವುದನ್ನು ಬ್ಯಾಂಕ್ ಮುಂದುವರಿಸಲಿದೆ’ ಎಂದು ಹಣಕಾಸಿನ ಫಲಿತಾಂಶವನ್ನು ಪ್ರಕಟಿಸುವ ಸಂದರ್ಭದಲ್ಲಿ ಬ್ಯಾಂಕ್ನ ಎಂ.ಡಿ. ಹಾಗೂ ಸಿಇಒ ರಾಘವೇಂದ್ರ ಎಸ್. ಭಟ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಖಾಸಗಿ ವಲಯದ ಕರ್ಣಾಟಕ ಬ್ಯಾಂಕ್ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹319.12 ಕೋಟಿ ಲಾಭ ಗಳಿಸಿದ್ದು, ಜೂನ್ಗೆ ಕೊನೆಗೊಂಡ ತ್ರೈಮಾಸಿಕದ ಲಾಭಕ್ಕೆ ಹೋಲಿಸಿದರೆ ಶೇಕಡ 9.1ರಷ್ಟು ಹೆಚ್ಚಳ ಆಗಿದೆ.</p>.<p>ಜೂನ್ ತ್ರೈಮಾಸಿಕದಲ್ಲಿ ಬ್ಯಾಂಕ್ ₹292.40 ಕೋಟಿ ಲಾಭ ಗಳಿಸಿತ್ತು. ಬ್ಯಾಂಕ್ನ ಆಡಳಿತ ಮಂಡಳಿಯ ಸಭೆಯು ಮಂಗಳೂರಿನಲ್ಲಿ ಶನಿವಾರ ನಡೆಯಿತು. ಹಣಕಾಸಿನ ಫಲಿತಾಂಶಕ್ಕೆ ಮಂಡಳಿಯು ಅನುಮೋದನೆ ನೀಡಿದೆ.</p>.<p>2025–26ನೇ ಹಣಕಾಸು ವರ್ಷದ ಮೊದಲಾರ್ಧದಲ್ಲಿ (ಸೆಪ್ಟೆಂಬರ್ 30ಕ್ಕೆ ಕೊನೆಗೊಂಡ 6 ತಿಂಗಳ ಅವಧಿ) ಬ್ಯಾಂಕ್ನ ನಿವ್ವಳ ಲಾಭವು ₹611.52 ಕೋಟಿ ಆಗಿದೆ. ಹಿಂದಿನ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಬ್ಯಾಂಕ್ ₹736.40 ಕೋಟಿ ನಿವ್ವಳ ಲಾಭ ಕಂಡಿತ್ತು ಎಂದು ಪ್ರಕಟಣೆ ತಿಳಿಸಿದೆ.</p>.<p>ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಬ್ಯಾಂಕ್ನ ನಿವ್ವಳ ಬಡ್ಡಿ ವರಮಾನವು ₹728 ಕೋಟಿ ಆಗಿದೆ. ಬ್ಯಾಂಕ್ನ ಒಟ್ಟು ಎನ್ಪಿಎ ಪ್ರಮಾಣವು ಶೇ 3.33ಕ್ಕೆ ಇಳಿಕೆ ಆಗಿದೆ. ನಿವ್ವಳ ಎನ್ಪಿಎ ಪ್ರಮಾಣವು ಜೂನ್ ತ್ರೈಮಾಸಿಕದಲ್ಲಿ ಶೇ 1.44ರಷ್ಟು ಇದ್ದಿದ್ದು, ಈಗ ಶೇ 1.35ಕ್ಕೆ ತಗ್ಗಿದೆ.</p>.<p>‘ಕೃಷಿ ವಲಯ, ವೈಯಕ್ತಿಕ ಹಣಕಾಸಿನ ಅಗತ್ಯಗಳು, ಎಂಎಸ್ಎಂಇ ವಲಯದ ಮೇಲೆ ಗಮನ ನೀಡುವುದನ್ನು ಬ್ಯಾಂಕ್ ಮುಂದುವರಿಸಲಿದೆ’ ಎಂದು ಹಣಕಾಸಿನ ಫಲಿತಾಂಶವನ್ನು ಪ್ರಕಟಿಸುವ ಸಂದರ್ಭದಲ್ಲಿ ಬ್ಯಾಂಕ್ನ ಎಂ.ಡಿ. ಹಾಗೂ ಸಿಇಒ ರಾಘವೇಂದ್ರ ಎಸ್. ಭಟ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>