<p><strong>ಮಂಗಳೂರು:</strong> ಕರ್ಣಾಟಕ ಬ್ಯಾಂಕ್ ಸಾರ್ವಜನಿಕರಿಗೆ ಆರೋಗ್ಯ ರಕ್ಷಾಕವಚ ನೀಡುವ ವಿಶೇಷ ಕೊರೊನಾ ವಿಮಾ ಯೋಜನೆ ಜಾರಿಗೊಳಿಸಿದೆ.</p>.<p>‘ಕೊರೊನಾ ಸೋಂಕಿನಿಂದ ಪೀಡಿತರಾದವರಿಗೆ ಅವರ ಸಂಕಷ್ಟದ ಕಾಲದಲ್ಲಿ ನೆರವಾಗುವ ನಿಟ್ಟಿನಲ್ಲಿ ಯುನಿವರ್ಸಲ್ ಸೋಂಪೊ ಜನರಲ್ ಇನ್ಶುರೆನ್ಸ್ ಕಂಪನಿ ಸಹಯೋಗದೊಂದಿಗೆ ವಿಮೆ ಯೋಜನೆ ಆರಂಭಿಸಲಾಗಿದೆ. ಆಸ್ಪತ್ರೆಯ ವೆಚ್ಚಗಳಿಗಾಗಿ ಕೇವಲ ₹ 399 (ಎಲ್ಲ ತೆರಿಗೆಗಳೂ ಸೇರಿ) ಕಂತನ್ನು ನೀಡುವ ಮೂಲಕ ಈ ವಿಮೆ ಪಡೆಯಬಹುದಾಗಿದೆ’ ಎಂದು ಬ್ಯಾಂಕ್ನ ಸಿಇಒ ಮಹಾಬಲೇಶ್ವರ ಎಂ.ಎಸ್. ತಿಳಿಸಿದ್ದಾರೆ.</p>.<p>‘ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ಸೇರಬೇಕಾದ ಪರಿಸ್ಥಿತಿ ಉಂಟಾದಲ್ಲಿ ವಿಮಾದಾರರಿಗೆ ₹3 ಲಕ್ಷದವರೆಗೆ ಆಸ್ಪತ್ರೆಯ ಖರ್ಚನ್ನು ಹಾಗೂ ಹೊರ ರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ₹3ಸಾವಿರದವರೆಗಿನ ಔಷಧಿಗಳ ಖರ್ಚನ್ನು ಅಥವಾ 14 ದಿನಗಳ ಕ್ವಾರಂಟೈನ್ಗೆ ಒಳಪಟ್ಟಲ್ಲಿ ದಿನವೊಂದಕ್ಕೆ ₹1ಸಾವಿರದವರೆಗೆ ಸರ್ಕಾರಿ ಅಥವಾ ಮಿಲಿಟರಿ ಆಸ್ಪತ್ರೆಗಳ ಕ್ವಾರಂಟೈನ್ ವೆಚ್ಚ ಭರಿಸಲು ಅವಕಾಶವಿದೆ’ ಎಂದು ಹೇಳಿದ್ದಾರೆ.</p>.<p>‘ವಿಮೆಯ ಅವಧಿ 120 ದಿನಗಳು. ಈ ವಿಮೆಯ ಸೌಲಭ್ಯ 18 ರಿಂದ 65 ವಯಸ್ಸಿನ ವಯೋಮಿತಿಯ ಬ್ಯಾಂಕಿನ ಎಲ್ಲ ಗ್ರಾಹಕರಿಗೆ ಲಭ್ಯವಿದೆ. ಗ್ರಾಹಕರಲ್ಲದವರೂ, ಗ್ರಾಹಕರಾಗಿ ವಿಮಾ ಕಂತನ್ನು ಪಾವತಿಸಿ, ವಿಮೆ ಪಡೆಯುವ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಸಮೂಹ ವಿಮೆಯ ಈ ಯೋಜನೆಯ ಬಗ್ಗೆ ನಿಮ್ಮ ಹತ್ತಿರದ ಕರ್ಣಾಟಕ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿದಲ್ಲಿ ಸಿಬ್ಬಂದಿ ಮಾಹಿತಿ ನೀಡಲಿದ್ದಾರೆ. ಅವಶ್ಯಕತೆ ಇರುವವರೆಲ್ಲರೂ ಈ ಸೌಲಭ್ಯವನ್ನು ಹೊಂದುವ ಮೂಲಕ ನೆಮ್ಮದಿಯಿಂದ ಇರಬಹುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಕರ್ಣಾಟಕ ಬ್ಯಾಂಕ್ ಸಾರ್ವಜನಿಕರಿಗೆ ಆರೋಗ್ಯ ರಕ್ಷಾಕವಚ ನೀಡುವ ವಿಶೇಷ ಕೊರೊನಾ ವಿಮಾ ಯೋಜನೆ ಜಾರಿಗೊಳಿಸಿದೆ.</p>.<p>‘ಕೊರೊನಾ ಸೋಂಕಿನಿಂದ ಪೀಡಿತರಾದವರಿಗೆ ಅವರ ಸಂಕಷ್ಟದ ಕಾಲದಲ್ಲಿ ನೆರವಾಗುವ ನಿಟ್ಟಿನಲ್ಲಿ ಯುನಿವರ್ಸಲ್ ಸೋಂಪೊ ಜನರಲ್ ಇನ್ಶುರೆನ್ಸ್ ಕಂಪನಿ ಸಹಯೋಗದೊಂದಿಗೆ ವಿಮೆ ಯೋಜನೆ ಆರಂಭಿಸಲಾಗಿದೆ. ಆಸ್ಪತ್ರೆಯ ವೆಚ್ಚಗಳಿಗಾಗಿ ಕೇವಲ ₹ 399 (ಎಲ್ಲ ತೆರಿಗೆಗಳೂ ಸೇರಿ) ಕಂತನ್ನು ನೀಡುವ ಮೂಲಕ ಈ ವಿಮೆ ಪಡೆಯಬಹುದಾಗಿದೆ’ ಎಂದು ಬ್ಯಾಂಕ್ನ ಸಿಇಒ ಮಹಾಬಲೇಶ್ವರ ಎಂ.ಎಸ್. ತಿಳಿಸಿದ್ದಾರೆ.</p>.<p>‘ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಗೆ ಸೇರಬೇಕಾದ ಪರಿಸ್ಥಿತಿ ಉಂಟಾದಲ್ಲಿ ವಿಮಾದಾರರಿಗೆ ₹3 ಲಕ್ಷದವರೆಗೆ ಆಸ್ಪತ್ರೆಯ ಖರ್ಚನ್ನು ಹಾಗೂ ಹೊರ ರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ ₹3ಸಾವಿರದವರೆಗಿನ ಔಷಧಿಗಳ ಖರ್ಚನ್ನು ಅಥವಾ 14 ದಿನಗಳ ಕ್ವಾರಂಟೈನ್ಗೆ ಒಳಪಟ್ಟಲ್ಲಿ ದಿನವೊಂದಕ್ಕೆ ₹1ಸಾವಿರದವರೆಗೆ ಸರ್ಕಾರಿ ಅಥವಾ ಮಿಲಿಟರಿ ಆಸ್ಪತ್ರೆಗಳ ಕ್ವಾರಂಟೈನ್ ವೆಚ್ಚ ಭರಿಸಲು ಅವಕಾಶವಿದೆ’ ಎಂದು ಹೇಳಿದ್ದಾರೆ.</p>.<p>‘ವಿಮೆಯ ಅವಧಿ 120 ದಿನಗಳು. ಈ ವಿಮೆಯ ಸೌಲಭ್ಯ 18 ರಿಂದ 65 ವಯಸ್ಸಿನ ವಯೋಮಿತಿಯ ಬ್ಯಾಂಕಿನ ಎಲ್ಲ ಗ್ರಾಹಕರಿಗೆ ಲಭ್ಯವಿದೆ. ಗ್ರಾಹಕರಲ್ಲದವರೂ, ಗ್ರಾಹಕರಾಗಿ ವಿಮಾ ಕಂತನ್ನು ಪಾವತಿಸಿ, ವಿಮೆ ಪಡೆಯುವ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಸಮೂಹ ವಿಮೆಯ ಈ ಯೋಜನೆಯ ಬಗ್ಗೆ ನಿಮ್ಮ ಹತ್ತಿರದ ಕರ್ಣಾಟಕ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿದಲ್ಲಿ ಸಿಬ್ಬಂದಿ ಮಾಹಿತಿ ನೀಡಲಿದ್ದಾರೆ. ಅವಶ್ಯಕತೆ ಇರುವವರೆಲ್ಲರೂ ಈ ಸೌಲಭ್ಯವನ್ನು ಹೊಂದುವ ಮೂಲಕ ನೆಮ್ಮದಿಯಿಂದ ಇರಬಹುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>