<p><strong>ನವದೆಹಲಿ:</strong> 2024–25ರ ಆರ್ಥಿಕ ವರ್ಷದಲ್ಲಿ ಕರ್ನಾಟಕದಲ್ಲಿ ₹39,577 ಕೋಟಿ ತೆರಿಗೆ ವಂಚನೆಯನ್ನು ಕೇಂದ್ರ ಜಿಎಸ್ಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ಸಂಸತ್ತಿಗೆ ಸೋಮವಾರ ಮಾಹಿತಿ ನೀಡಲಾಗಿದೆ. </p>.₹7 ಲಕ್ಷ ಕೋಟಿ ಜಿಎಸ್ಟಿ ವಂಚನೆ ಪತ್ತೆ: ಕೇಂದ್ರ ಹಣಕಾಸು ಇಲಾಖೆ ಮಾಹಿತಿ.<p>ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಇದು ಐದು ಪಟ್ಟು ಹೆಚ್ಚು.</p><p>ಈ ಬಗ್ಗೆ ಲೋಕಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ಯುಪಿಐ ವ್ಯವಹಾರ ಆಧಾರವಾಗಿಟ್ಟುಕೊಂಡು ಕೇಂದ್ರ ಜಿಎಸ್ಟಿ ಅಧಿಕಾರಿಗಳು ಯಾವುದೇ ನೋಟಿಸ್ ಜಾರಿ ಮಾಡಿಲ್ಲ’ ಎಂದು ಹೇಳಿದ್ದಾರೆ.</p><p>ವ್ಯವಹಾರಗಳ ಮೌಲ್ಯಮಾಪನ ಮಾಡದೆ ಕರ್ನಾಟಕ ಸೇರಿ ದೇಶದಲ್ಲಿ ಸಣ್ಣ ವರ್ತಕರಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ ನೋಟಿಸ್ ಜಾರಿ ಮಾಡಿದೆಯೇ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.</p><p>ಕಳೆದ ತಿಂಗಳು ಬೆಂಗಳೂರಿನ ಹಲವು ಸಣ್ಣ ವರ್ತಕರಿಗೆ ಅವರ ಯುಪಿಐ ವಹಿವಾಟುಗಳನ್ನು ಆಧರಿಸಿ ಭಾರಿ ಪ್ರಮಾಣದ ಜಿಎಸ್ಟಿ ಪಾವತಿ ಮಾಡಬೇಕು ಎಂದು ಜಿಎಸ್ಟಿ ರಾಜ್ಯ ಕ್ಷೇತ್ರಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು.</p>.ಸಂಪಾದಕೀಯ | ಸಣ್ಣ ವರ್ತಕರಿಗೆ ಜಿಎಸ್ಟಿ ಮನ್ನಾ: ಪಾರದರ್ಶಕ ನೀತಿಯೂ ಅಗತ್ಯ .<p>ಕರ್ನಾಟಕದಲ್ಲಿ ಪತ್ತೆಯಾದ ಜಿಎಸ್ಟಿ ವಂಚನೆಯ ವಿವರಗಳ ಕುರಿತಾದ ಮತ್ತೊಂದು ಪ್ರಶ್ನೆಗೂ ಅವರು ಉತ್ತರಿಸಿದ್ದು, 2024–25ರಲ್ಲಿ ಈ ಸಂಬಂಧ 1,254 ಪ್ರಕರಣಗಳು ದಾಖಲಾಗಿವೆ. ₹ 39,577 ತೆರಿಗೆ ವಂಚನೆಯನ್ನು ಕೇಂದ್ರ ಜಿಎಸ್ಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. 9 ಮಂದಿಯನ್ನು ಬಂಧಿಸಲಾಗಿದೆ. ₹ 1,623 ಕೋಟಿ ವಸೂಲಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.</p><p>2023–24ರಲ್ಲಿ ₹ 7,202 ಕೋಟಿ ತೆರಿಗೆ ವಂಚನೆ ಬಯಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ₹ 1,197 ಕೋಟಿಯನ್ನು ಸ್ವಯಂ ತೆರಿಗೆ ಪಾವತಿ ಮೂಲಕ ವಸೂಲಿ ಮಾಡಲಾಗಿದೆ</p><p>2022–23ರಲ್ಲಿ ₹ 25,839 ಕೋಟಿಯ 959 ತೆರಿಗೆ ವಂಚನೆ ಪ್ರಕರಣಗಳನ್ನು ಸಿಜಿಎಸ್ಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ₹ 1,705 ಕೋಟಿ ತೆರಿಗೆಯನ್ನು ಕಟ್ಟಿಸಿಕೊಳ್ಳಲಾಗಿದೆ.</p>.ಆಳ–ಅಗಲ| ಯುಪಿಐ –ಜಿಎಸ್ಟಿ; ಗೊಂದಲವೇಕೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2024–25ರ ಆರ್ಥಿಕ ವರ್ಷದಲ್ಲಿ ಕರ್ನಾಟಕದಲ್ಲಿ ₹39,577 ಕೋಟಿ ತೆರಿಗೆ ವಂಚನೆಯನ್ನು ಕೇಂದ್ರ ಜಿಎಸ್ಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ಸಂಸತ್ತಿಗೆ ಸೋಮವಾರ ಮಾಹಿತಿ ನೀಡಲಾಗಿದೆ. </p>.₹7 ಲಕ್ಷ ಕೋಟಿ ಜಿಎಸ್ಟಿ ವಂಚನೆ ಪತ್ತೆ: ಕೇಂದ್ರ ಹಣಕಾಸು ಇಲಾಖೆ ಮಾಹಿತಿ.<p>ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಇದು ಐದು ಪಟ್ಟು ಹೆಚ್ಚು.</p><p>ಈ ಬಗ್ಗೆ ಲೋಕಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ಯುಪಿಐ ವ್ಯವಹಾರ ಆಧಾರವಾಗಿಟ್ಟುಕೊಂಡು ಕೇಂದ್ರ ಜಿಎಸ್ಟಿ ಅಧಿಕಾರಿಗಳು ಯಾವುದೇ ನೋಟಿಸ್ ಜಾರಿ ಮಾಡಿಲ್ಲ’ ಎಂದು ಹೇಳಿದ್ದಾರೆ.</p><p>ವ್ಯವಹಾರಗಳ ಮೌಲ್ಯಮಾಪನ ಮಾಡದೆ ಕರ್ನಾಟಕ ಸೇರಿ ದೇಶದಲ್ಲಿ ಸಣ್ಣ ವರ್ತಕರಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರ ನೋಟಿಸ್ ಜಾರಿ ಮಾಡಿದೆಯೇ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.</p><p>ಕಳೆದ ತಿಂಗಳು ಬೆಂಗಳೂರಿನ ಹಲವು ಸಣ್ಣ ವರ್ತಕರಿಗೆ ಅವರ ಯುಪಿಐ ವಹಿವಾಟುಗಳನ್ನು ಆಧರಿಸಿ ಭಾರಿ ಪ್ರಮಾಣದ ಜಿಎಸ್ಟಿ ಪಾವತಿ ಮಾಡಬೇಕು ಎಂದು ಜಿಎಸ್ಟಿ ರಾಜ್ಯ ಕ್ಷೇತ್ರಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು.</p>.ಸಂಪಾದಕೀಯ | ಸಣ್ಣ ವರ್ತಕರಿಗೆ ಜಿಎಸ್ಟಿ ಮನ್ನಾ: ಪಾರದರ್ಶಕ ನೀತಿಯೂ ಅಗತ್ಯ .<p>ಕರ್ನಾಟಕದಲ್ಲಿ ಪತ್ತೆಯಾದ ಜಿಎಸ್ಟಿ ವಂಚನೆಯ ವಿವರಗಳ ಕುರಿತಾದ ಮತ್ತೊಂದು ಪ್ರಶ್ನೆಗೂ ಅವರು ಉತ್ತರಿಸಿದ್ದು, 2024–25ರಲ್ಲಿ ಈ ಸಂಬಂಧ 1,254 ಪ್ರಕರಣಗಳು ದಾಖಲಾಗಿವೆ. ₹ 39,577 ತೆರಿಗೆ ವಂಚನೆಯನ್ನು ಕೇಂದ್ರ ಜಿಎಸ್ಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. 9 ಮಂದಿಯನ್ನು ಬಂಧಿಸಲಾಗಿದೆ. ₹ 1,623 ಕೋಟಿ ವಸೂಲಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.</p><p>2023–24ರಲ್ಲಿ ₹ 7,202 ಕೋಟಿ ತೆರಿಗೆ ವಂಚನೆ ಬಯಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ₹ 1,197 ಕೋಟಿಯನ್ನು ಸ್ವಯಂ ತೆರಿಗೆ ಪಾವತಿ ಮೂಲಕ ವಸೂಲಿ ಮಾಡಲಾಗಿದೆ</p><p>2022–23ರಲ್ಲಿ ₹ 25,839 ಕೋಟಿಯ 959 ತೆರಿಗೆ ವಂಚನೆ ಪ್ರಕರಣಗಳನ್ನು ಸಿಜಿಎಸ್ಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ₹ 1,705 ಕೋಟಿ ತೆರಿಗೆಯನ್ನು ಕಟ್ಟಿಸಿಕೊಳ್ಳಲಾಗಿದೆ.</p>.ಆಳ–ಅಗಲ| ಯುಪಿಐ –ಜಿಎಸ್ಟಿ; ಗೊಂದಲವೇಕೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>