ಈ ಕುರಿತಂತೆ ಬೆಂಗಳೂರಿನ ಮಾರತಹಳ್ಳಿಯ ಟೆಕ್ ಗ್ರಾಮದಲ್ಲಿರುವ ಶಿಯೊಮಿ ಕಂಪನಿ ಕಚೇರಿಯ ಅಧಿಕೃತ ಪ್ರತಿನಿಧಿ ಸಮೀರ್ ಬಿ.ಎಸ್.ರಾವ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ (ಮೇ 5) ವಿಚಾರಣೆ ನಡೆಸಿ, ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.