<p><strong>ಬೆಂಗಳೂರು</strong>: ‘ಭಾರತದ ವಾರ್ಷಿಕ ರಫ್ತು ಮೊತ್ತ ₹70 ಲಕ್ಷ ಕೋಟಿಯ ಗುರಿ ಮುಟ್ಟಿದೆ. ಅದರಲ್ಲಿ ಕರ್ನಾಟಕದ್ದೇ ಸಿಂಹಪಾಲು. ಆರ್ಥಿಕ ಅಭಿವೃದ್ಧಿ ಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಿಗೇ ಸಾಗಬೇಕಿದೆ’ ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಹೇಳಿದರು. </p><p>ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾದ ಉದ್ಯಮಿಗಳಿಗೆ ‘ಇನ್ವೆಸ್ಟ್ ಕರ್ನಾಟಕ’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರವು ನೂರಾರು ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಅವುಗಳ ಎಲ್ಲ ಪ್ರಯೋಜನ ಕರ್ನಾಟಕಕ್ಕೂ ದೊರೆಯಲಿದೆ’ ಎಂದರು.</p><p>‘ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ಕರ್ನಾಟಕಕ್ಕೆ ಬಂಡವಾಳ ಆಕರ್ಷಣೆ, ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಿರುವ ನೆರವನ್ನು ಕೇಂದ್ರ ನೀಡಲಿದೆ. ರಾಜ್ಯದ ಕೈಗಾರಿಕಾ ನೀತಿಗಳು ಉದ್ಯಮಸ್ನೇಹಿಯಾಗಿದ್ದು, ಇತರ ರಾಜ್ಯಗಳಿಗೆ ಮಾದರಿಯಾಗಿವೆ’ ಎಂದರು.</p><p>ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ‘ಕೈಗಾರಿಕೆಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿ ಇರಿಸಿಕೊಂಡು ಕೈಗಾರಿಕಾ ನೀತಿಯನ್ನು ರೂಪಿಸಲಾಗಿದೆ. ಇದರಿಂದ ರಾಜ್ಯದ ಎಲ್ಲೆಡೆ ಕೈಗಾರಿಕೆಗಳ ಸ್ಥಾಪನೆ ಮತ್ತು ಅಭಿವೃದ್ಧಿ ಸಾಧ್ಯವಾಗಲಿದೆ’ ಎಂದರು.</p><p>ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಕರ್ನಾಟಕದ ಆರ್ಥಿಕ ಅಭಿವೃದ್ಧಿಯಲ್ಲಿ ಬೆಂಗಳೂರಿಗೆ ಮಹತ್ವದ ಸ್ಥಾನವಿದೆ. ಆದರೆ ಇಲ್ಲಿನ ಸಂಚಾರ ದಟ್ಟಣೆ ದೊಡ್ಡ ಸಮಸ್ಯೆ ಎಂಬ ಮಾತು ಇದ್ದೇ ಇದೆ. ಅದನ್ನು ನಿವಾರಿಸಲು ₹1 ಲಕ್ಷ ಕೋಟಿ ವಿನಿಯೋಗಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಭಾರತದ ವಾರ್ಷಿಕ ರಫ್ತು ಮೊತ್ತ ₹70 ಲಕ್ಷ ಕೋಟಿಯ ಗುರಿ ಮುಟ್ಟಿದೆ. ಅದರಲ್ಲಿ ಕರ್ನಾಟಕದ್ದೇ ಸಿಂಹಪಾಲು. ಆರ್ಥಿಕ ಅಭಿವೃದ್ಧಿ ಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಿಗೇ ಸಾಗಬೇಕಿದೆ’ ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಹೇಳಿದರು. </p><p>ರಾಜ್ಯದ ಅಭಿವೃದ್ಧಿಯಲ್ಲಿ ಭಾಗಿಯಾದ ಉದ್ಯಮಿಗಳಿಗೆ ‘ಇನ್ವೆಸ್ಟ್ ಕರ್ನಾಟಕ’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರವು ನೂರಾರು ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಅವುಗಳ ಎಲ್ಲ ಪ್ರಯೋಜನ ಕರ್ನಾಟಕಕ್ಕೂ ದೊರೆಯಲಿದೆ’ ಎಂದರು.</p><p>‘ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ಕರ್ನಾಟಕಕ್ಕೆ ಬಂಡವಾಳ ಆಕರ್ಷಣೆ, ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಿರುವ ನೆರವನ್ನು ಕೇಂದ್ರ ನೀಡಲಿದೆ. ರಾಜ್ಯದ ಕೈಗಾರಿಕಾ ನೀತಿಗಳು ಉದ್ಯಮಸ್ನೇಹಿಯಾಗಿದ್ದು, ಇತರ ರಾಜ್ಯಗಳಿಗೆ ಮಾದರಿಯಾಗಿವೆ’ ಎಂದರು.</p><p>ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ‘ಕೈಗಾರಿಕೆಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿ ಇರಿಸಿಕೊಂಡು ಕೈಗಾರಿಕಾ ನೀತಿಯನ್ನು ರೂಪಿಸಲಾಗಿದೆ. ಇದರಿಂದ ರಾಜ್ಯದ ಎಲ್ಲೆಡೆ ಕೈಗಾರಿಕೆಗಳ ಸ್ಥಾಪನೆ ಮತ್ತು ಅಭಿವೃದ್ಧಿ ಸಾಧ್ಯವಾಗಲಿದೆ’ ಎಂದರು.</p><p>ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಕರ್ನಾಟಕದ ಆರ್ಥಿಕ ಅಭಿವೃದ್ಧಿಯಲ್ಲಿ ಬೆಂಗಳೂರಿಗೆ ಮಹತ್ವದ ಸ್ಥಾನವಿದೆ. ಆದರೆ ಇಲ್ಲಿನ ಸಂಚಾರ ದಟ್ಟಣೆ ದೊಡ್ಡ ಸಮಸ್ಯೆ ಎಂಬ ಮಾತು ಇದ್ದೇ ಇದೆ. ಅದನ್ನು ನಿವಾರಿಸಲು ₹1 ಲಕ್ಷ ಕೋಟಿ ವಿನಿಯೋಗಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>