‘ಅಗತ್ಯ ವಸ್ತುಗಳ ಉತ್ಪಾದನಾ ಘಟಕಗಳು, 24 ಗಂಟೆ ಕಾರ್ಯ ನಿರ್ವಹಿಸುವ ಕೈಗಾರಿಕೆಗಳ ಮಾಲೀಕರು ಮತ್ತು ಅವುಗಳ ಕಾರ್ಮಿಕರ ಸಂಚಾರಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ, ಅವರ ವಾಹನಗಳನ್ನು ಜಪ್ತಿ ಮಾಡುತ್ತಿದ್ದಾರೆ. ಪೊಲೀಸರ ಇಂತಹ ಕ್ರಮದಿಂದಾಗಿ ಸರ್ಕಾರ ಅನುಮತಿ ನೀಡಿದ್ದರೂ ಕೈಗಾರಿಕೋದ್ಯಮಿಗಳು ಘಟಕಗಳಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗದೆ ಸಂಕಷ್ಟಕ್ಕೀಡಾಗಿದ್ದಾರೆ’ ಎಂದು ಅರಸಪ್ಪ ಅವರು ದೂರಿದ್ದಾರೆ.