<p>ಕೊಚ್ಚಿ (ಪಿಟಿಐ): ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ, ಕೇರಳ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ (ಕೆಎಚ್ಆರ್ಎ) ನೇತೃತ್ವದಲ್ಲಿ ಬುಧವಾರ ರಾಜ್ಯದಾದ್ಯಂತ ಹೋಟೆಲ್ಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು.</p>.<p>ರಾಜ್ಯದ ಅನೇಕ ಪ್ರದೇಶಗಳಲ್ಲಿ ದೊಡ್ಡ ಹೋಟೆಲ್ಗಳು, ಸಣ್ಣ ಚಹಾ ಅಂಗಡಿಗಳು ತಮ್ಮ ವ್ಯಾಪಾರವನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದವು.</p>.<p>ಪರಿಸ್ಥಿತಿಯನ್ನು ನಿಯಂತ್ರಿಸಲು ಮಧ್ಯಪ್ರವೇಶಿಸದ ಕೇಂದ್ರ ಸರ್ಕಾರವನ್ನು ಟೀಕಿಸಿರುವ ಕೆಎಚ್ಆರ್ಎ, ‘ತೈಲ ಕಂಪನಿಗಳು ಸತತವಾಗಿ ಇಂಧನ ಬೆಲೆಗಳನ್ನು ನಿರಂತರ ಏರಿಕೆ ಮಾಡಿರುವುದರಿಂದ, ಹೋಟೆಲ್ ಕ್ಷೇತ್ರದಲ್ಲಿ ಇರುವವರು ಬದುಕು ಸಾಗಿಸುವುದು ಕಷ್ಟವಾಗಿದೆ’ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.</p>.<p>ತೈಲ ಕಂಪನಿಗಳು ಕೇವಲ ಲಾಭದ ಮೇಲೆ ಕಣ್ಣಿಟ್ಟು ಸಾಮಾನ್ಯ ಜನರ ಮತ್ತು ಸಣ್ಣ ವ್ಯಾಪಾರಿಗಳ ಕಷ್ಟವನ್ನು ಮರೆತು ಯಾವುದೇ ಅಂಕೆಯಿಲ್ಲದೆ ಬೆಲೆ ಏರಿಸುತ್ತಿವೆ ಎಂದು ಅದು ಆರೋಪಿಸಿದೆ.</p>.<p>ಪ್ರತಿಭಟನೆಯ ಭಾಗವಾಗಿ ಹೋಟೆಲ್ ಮಾಲೀಕರು ರಾಜ್ಯಾದ್ಯಂತ ತೈಲ ಕಂಪನಿ ಕಚೇರಿಗಳು ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳ ಮುಂದೆ ಮೆರವಣಿಗೆಗಳನ್ನು ನಡೆಸಿ ತಮ್ಮ ವಿರೋಧ ವ್ಯಕ್ತಪಡಿಸಿದರು. ಜೊತೆಗೆ, ಬಂದ್ನಿಂದಾಗಿ ಸಾರ್ವಜನಿಕರಿಗೆ ಉಂಟಾದ ಅನಾನುಕೂಲತೆಗೆ ಸಂಘಟನೆ ವಿಷಾದ ವ್ಯಕ್ತಪಡಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-51-570537822</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಚ್ಚಿ (ಪಿಟಿಐ): ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ, ಕೇರಳ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ (ಕೆಎಚ್ಆರ್ಎ) ನೇತೃತ್ವದಲ್ಲಿ ಬುಧವಾರ ರಾಜ್ಯದಾದ್ಯಂತ ಹೋಟೆಲ್ಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು.</p>.<p>ರಾಜ್ಯದ ಅನೇಕ ಪ್ರದೇಶಗಳಲ್ಲಿ ದೊಡ್ಡ ಹೋಟೆಲ್ಗಳು, ಸಣ್ಣ ಚಹಾ ಅಂಗಡಿಗಳು ತಮ್ಮ ವ್ಯಾಪಾರವನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದವು.</p>.<p>ಪರಿಸ್ಥಿತಿಯನ್ನು ನಿಯಂತ್ರಿಸಲು ಮಧ್ಯಪ್ರವೇಶಿಸದ ಕೇಂದ್ರ ಸರ್ಕಾರವನ್ನು ಟೀಕಿಸಿರುವ ಕೆಎಚ್ಆರ್ಎ, ‘ತೈಲ ಕಂಪನಿಗಳು ಸತತವಾಗಿ ಇಂಧನ ಬೆಲೆಗಳನ್ನು ನಿರಂತರ ಏರಿಕೆ ಮಾಡಿರುವುದರಿಂದ, ಹೋಟೆಲ್ ಕ್ಷೇತ್ರದಲ್ಲಿ ಇರುವವರು ಬದುಕು ಸಾಗಿಸುವುದು ಕಷ್ಟವಾಗಿದೆ’ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.</p>.<p>ತೈಲ ಕಂಪನಿಗಳು ಕೇವಲ ಲಾಭದ ಮೇಲೆ ಕಣ್ಣಿಟ್ಟು ಸಾಮಾನ್ಯ ಜನರ ಮತ್ತು ಸಣ್ಣ ವ್ಯಾಪಾರಿಗಳ ಕಷ್ಟವನ್ನು ಮರೆತು ಯಾವುದೇ ಅಂಕೆಯಿಲ್ಲದೆ ಬೆಲೆ ಏರಿಸುತ್ತಿವೆ ಎಂದು ಅದು ಆರೋಪಿಸಿದೆ.</p>.<p>ಪ್ರತಿಭಟನೆಯ ಭಾಗವಾಗಿ ಹೋಟೆಲ್ ಮಾಲೀಕರು ರಾಜ್ಯಾದ್ಯಂತ ತೈಲ ಕಂಪನಿ ಕಚೇರಿಗಳು ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳ ಮುಂದೆ ಮೆರವಣಿಗೆಗಳನ್ನು ನಡೆಸಿ ತಮ್ಮ ವಿರೋಧ ವ್ಯಕ್ತಪಡಿಸಿದರು. ಜೊತೆಗೆ, ಬಂದ್ನಿಂದಾಗಿ ಸಾರ್ವಜನಿಕರಿಗೆ ಉಂಟಾದ ಅನಾನುಕೂಲತೆಗೆ ಸಂಘಟನೆ ವಿಷಾದ ವ್ಯಕ್ತಪಡಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-51-570537822</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>