ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಐಒಸಿಎಲ್‌: ಪಿಎಂ ಕೇರ್ಸ್‌ಗೆ ₹10 ಕೋಟಿ

Last Updated 29 ಏಪ್ರಿಲ್ 2020, 19:45 IST
ಅಕ್ಷರ ಗಾತ್ರ

ಮಂಗಳೂರು: ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿಯು (ಕೆಐಒಸಿಎಲ್‌) ಪಿಎಂ ಕೇರ್ಸ್‌ ನಿಧಿಗೆ ₹10.1 ಕೋಟಿ ಹಾಗೂ ಕಂಪನಿಯ ಉದ್ಯೋಗಿಗಳ ಒಂದು ದಿನದ ವೇತನದ ಮೊತ್ತವಾದ ₹23.72 ಲಕ್ಷ ನೀಡಿದೆ ಎಂದು ಕೆಐಒಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ವಿ. ಸುಬ್ಬಾರಾವ್ ತಿಳಿಸಿದ್ದಾರೆ.

ಇದಲ್ಲದೇ ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹15 ಲಕ್ಷ ಮೊತ್ತವನ್ನೂ ನೀಡಲಾಗಿದೆ. ಜತೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದ ಅಗತ್ಯಕ್ಕೆ ಅನುಗುಣವಾಗಿ ಜಿಲ್ಲೆಯಲ್ಲಿರುವ ವಲಸಿಗರಿಗೆ ಆಹಾರ ಒದಗಿಸುವುದಕ್ಕಾಗಿ 200 ಕ್ವಿಂಟಲ್ ಅಕ್ಕಿ ಖರೀದಿಸಲು ₹4.46 ಲಕ್ಷ ಮೊತ್ತವನ್ನು ಭಾರತದ ಆಹಾರ ನಿಗಮಕ್ಕೆ (ಎಫ್‌ಸಿಐ) ನೀಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT